(ಸಾಂದರ್ಭಿಕ ಚಿತ್ರ)
ಪ್ರಸಕ್ತ ಸಾಲಿನ ಕೃಷಿ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಗೆ ಪತ್ಯೇಕವಾಗಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ರೈತರಿಗೆ 100 ರೂ.ಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ 25 ರೂಗಳ ನೋಂದಣಿ ಶುಲ್ಕವಿದ್ದು, ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು ಹಾಗೂ ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು.
ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ, ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹರಾಗಿರುವುದಿಲ್ಲ, ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ತಾಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಹಾಗೂ ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದು. ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ. ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕ ತಿಳಿಸಬೇಕು.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆ ಪಡೆದು ಕಂದಾಯ ಇಲಾಖೆಯಿಂದ ಪಡೆದ ಪಹಣಿ ಪತ್ರದೊಂದಿಗೆ ಶುಲ್ಕ ಪಾವತಿಸಿ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…