(ಸಾಂದರ್ಭಿಕ ಚಿತ್ರ)
ಪ್ರಸಕ್ತ ಸಾಲಿನ ಕೃಷಿ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಗೆ ಪತ್ಯೇಕವಾಗಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ರೈತರಿಗೆ 100 ರೂ.ಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ 25 ರೂಗಳ ನೋಂದಣಿ ಶುಲ್ಕವಿದ್ದು, ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು ಹಾಗೂ ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು.
ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ, ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹರಾಗಿರುವುದಿಲ್ಲ, ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ತಾಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಹಾಗೂ ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದು. ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ. ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕ ತಿಳಿಸಬೇಕು.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆ ಪಡೆದು ಕಂದಾಯ ಇಲಾಖೆಯಿಂದ ಪಡೆದ ಪಹಣಿ ಪತ್ರದೊಂದಿಗೆ ಶುಲ್ಕ ಪಾವತಿಸಿ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…