Advertisement
ಅನುಕ್ರಮ

ಕೃಷಿ ಏಳು-ಬೀಳುಗಳ ನಡುವೆ ಸಮತೋಲನ ಹೇಗೆ | ಕೃಷಿಕ ಟಿ ಆರ್‌ ಸುರೇಶ್ಚಂದ್ರ ಬರೆಯುತ್ತಾರೆ… |

Share

ದೊಣಿ ಸಾಗಲಿ ಮುಂದೆ ಹೋಗಲಿ
ದೂರ ತೀರವ ಸೇರಲಿ
ಬೀಸು ಗಾಳಿಗೆ ಬೀಳುತೇಳುತ
ತೆರೆಯ ಮೇಗಡೆ ಸಾಗಲೀ..
ನಾವು ಲೀಲಾ ಮಾತ್ರ ಜೀವರು
ನಮ್ಮ ಜೀವನ ಲೀಲೆಗೆ
ನಿನ್ನೆ ನಿನ್ನೆಗೆ ಇಂದು ಇಂದಿಗೆ
ಇರಲಿ ನಾಳೆಯು ನಾಳೆಗೇ…

ಕೃಷಿ(Agriculture) ಬದುಕು ಇಷ್ಟೇ ಅಲ್ವೇ… ,ಹೌದು…. , ಅದರಿಂದಾಚೆಗಿನ ದಿನಗಳು ನಮ್ಮದಾಗಬೇಕಾದರೆ ಪ್ರಕೃತಿಯೊಂದಿಗೆ ಹೊಂದಿ ಸಾಗುವ ಮನಪರಿಸ್ಥಿತಿ ನಮಗಿರಬೇಕು. ಮಳೆ,ಗಾಳಿ, ರೋಗಗಳು,ಬರಗಾಲ ಇದೆಲ್ಲ ಕಾಣದ ,ಊಹಿಸಲಾರದ ಸಮಸ್ಯೆಗಳು. ಅದನ್ನು ಸಹಿಸಿಕೊಳ್ಳುವ, ಎದುರಿಸುವ ಪ್ರಯತ್ನ ನಮ್ಮಲ್ಲಿದ್ದಾಗ ಏಳು ಬೀಳುಗಳಲ್ಲೊಂದು ಲಯ ಕಾಣಬಹುದು.

ಕೃಷಿಕರಾದವರಿಗೆ ಕೆಲವು ಸೂತ್ರಗಳು ಅತೀ ಅಗತ್ಯ. ಅದು ಯಶಸ್ಸಿನ ಸೂತ್ರವೂ ಹೌದು.

13 ಸೂತ್ರಗಳು....
  • ಪ್ರತಿ ವರ್ಷವೂ ಅಡಿಕೆ/ತೆಂಗು/ಕಾಳುಮೆಣಸು ಗಿಡಗಳನ್ನು ಮಾಡಿಟ್ಟುಕೊಳ್ಳಲೇಬೇಕು.
  • ಪ್ರತೀ ವರ್ಷ ಖಾಲಿಯಾದ ಜಾಗಕ್ಕೆ ಸಮಯಕ್ಕನುಗುಣವಾಗಿ ಎಡೆ ಗಿಡಗಳನ್ನು ನೆಡಲೇಬೇಕು.
  • ಬಸಿಗಾಲುವೆಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು.
  • ವೈಜ್ಞಾನಿಕವಾಗಿ, ಪ್ರಕೃತಿಗೆ ಹಾನಿಯಾಗದಂತೆ ಗೊಬ್ಬರ ನಿರ್ವಹಣೆ ಮಾಡಬೇಕು.
  • ಕಾಲಕಾಲಕ್ಕೆ ರೋಗ ನಿರೋಧಕ ವ್ಯವಸ್ಥೆಗಳನ್ನು ಗಮನವಿಟ್ಟು ನಿರ್ವಹಿಸಲೇಬೇಕು.
  • ಸರಿಯಾದ, ಅತಿಯಾಗದ ನೀರಾವರಿ ವ್ಯವಸ್ಥೆ ಮಾಡಬೇಕು.
  • ಸ್ವಂತ ನರ್ಸರಿ ಬಗ್ಗೆ ಸರಿಯಾದ ತಿಳುವಳಿಕೆ ಪಡಕೊಳ್ಳಬೇಕು.
  • ಹಣಕಾಸಿನ ವ್ಯವಹಾರಗಳ ಬಗ್ಗೆ ಜಾಗರೂಕರಾಗಿರಬೇಕು.
  • ಕೃಷಿ/ವ್ಯವಹಾರ/ಮುಂತಾಗಿ ಸ್ವಂತ ತೀರ್ಮಾನ ಮಾಡುವಂತಿರಬೇಕು.
  • ಹತ್ತಾರು ತೋಟ, ಕೃಷಿ ಕ್ರಮಗಳನ್ನು ನೋಡಬೇಕು, ವಿಮರ್ಶಿಸಬೇಕು.
  • ಎಲ್ಲಕ್ಕಿಂತಲೂ ಹೆಚ್ಚು ನಮ್ಮ ತೋಟದೊಳಗೆ ದಿನಕ್ಕೆರಡು ಸುತ್ತು ಓಡಾಡಲೇಬೇಕು.
  • ಸದಾ ಜಾಗೃತನಾಗಿರಬೇಕು.
  • ಕೃಷಿ ಕಾರ್ಮಿಕರನ್ನು ಚೆನ್ನಾಗಿ ನೋಡಿಕೊಂಡು ಕಾಲಕಾಲಕ್ಕೆ ಕೆಲಸ ಕಾರ್ಯಗಳು ಆಗುವಂತೆ ನೋಡಿಕೊಳ್ಳಬೇಕು

ಅಂತೂ ಕೃಷಿ ಎನ್ನುವಂತಹದ್ದೂ ಒಂದು ಉದ್ಯಮ, ಸಮಯ ಪ್ರಕಾರದ ಕೆಲಸ ನಿರ್ವಹಣೆ ಅತೀ ಮುಖ್ಯ ಎನ್ನುವುದನ್ನು ಗಮನವಿರಿಸಿ ನಡೆದರೆ ಏಳು ಬೀಳುಗಳನ್ನು ಸಹಿಸುತ್ತಾ ಸಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

15 minutes ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

15 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

23 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

24 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago