ಕೃಷಿ ಮಸೂದೆಗಳಿಂದ ಕೃಷಿಕರಿಗೆ ಹೆಚ್ಚಿನ ಅನುಕೂಲ | ಅಖಿಲ ಭಾರತ ರೈತ ಸಂಘಟನೆಗಳ ಒಕ್ಕೂಟ  

September 23, 2020
3:31 PM
ಕೇಂದ್ರ ಸರ್ಕಾರ ಹೊಸದಾಗಿ ಮಂಡನೆ ಮಾಡಿರುವ ಕೃಷಿ ಮಸೂದೆಗಳಿಂದ ಕೃಷಿಕರಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ಅಖಿಲ ಭಾರತ ರೈತ ಸಂಘಟನೆಗಳ ಒಕ್ಕೂಟ ಹೇಳಿದೆ.

Advertisement
Advertisement

ಈ ಕಾಯ್ದೆಯ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮುಕ್ತ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ರಾಜ್ಯದ ಗಡಿಯಾಚೆಗೂ ಸುಲಭವಾಗಿ, ಯಾವುದೇ ನಿಬಂಧನೆಗಳು ಇಲ್ಲದೆಯೇ ತಮ್ಮ ಬೆಳೆಗಳನ್ನು ಮಾರಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ತಮ್ಮ ಉತ್ಪನ್ನಗಳ ಮಾರಾಟಗಾರರು ತಾವೇ ಆಗಲು ಅವಕಾಶ ಕಲ್ಪಿಸಿದೆ ಎಂದು ಒಕ್ಕೂಟ ತಿಳಿಸಿದೆ.

ಈ ಹೊಸ ಕೃಷಿ ಕಾಯ್ದೆಗಳ ಮೂಲಕ ಕೇಂದ್ರ ಸರ್ಕಾರ ರೈತರ ಸಬಲೀಕರಣಕ್ಕೆ ಮುಂದಾಗಿದೆ. ಈ ಮಸೂದೆ ರೈತರ ಆದಾಯ ಹೆಚ್ಚಳಕ್ಕೂ ಸಹಕಾರಿಯಾಗಲಿದೆ. ಈ ಎರಡು ಹೊಸ ಮಸೂದೆಗಳು ರೈತರ ಅಭಿವೃದ್ಧಿ‌ಗೆ ಸುಸ್ಥಿರ ಮತ್ತು ಲಾಭದಾಯಕ ಭವಿಷ್ಯವನ್ನು ಖಾತರಿಪಡಿಸುತ್ತದೆ ಎಂದೂ ಒಕ್ಕೂಟ ಅಭಿಪ್ರಾಯ ವ್ಯಕ್ತಪಡಿಸಿದೆ.

ರೈತರು ತಮ್ಮ ಉತ್ಪನ್ನಗಳ ಮೇಲೆ ತಾವೇ ನಿಯಂತ್ರಣ ಹೊಂದಲಿದ್ದಾರೆ. ರಾಜ್ಯ, ಅಂತರರಾಜ್ಯ‌ಗಳಲ್ಲಿ ತಮ್ಮಿಷ್ಟದ ಪ್ರಕಾರವೇ ಖರೀದಿ ಮತ್ತು ಮಾರಾಟ ಮಾಡಲು ಅವಕಾಶ ದೊರೆತಂತಾಗಿದೆ. ರೈತರ ವಿಚಾರದಲ್ಲಿ ಕೇಂದ್ರ ಸರ್ಕಾರದ ಈ ನಿಲುವು ದೂರದೃಷ್ಟಿಯುಳ್ಳದ್ದಾಗಿದೆ ಎಂದು  ಒಕ್ಕೂಟದ ಅಧ್ಯಕ್ಷ ಬಿ.ವಿ. ಜವರೇಗೌಡ  ತಿಳಿಸಿದ್ದಾರೆ.
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಕೃಷಿ ಆಧಾರಿತ ಕೈಗಾರಿಕೆ ಉತ್ತೇಜನದಿಂದ ರೈತರ ಭವಿಷ್ಯ ರೂಪಾಂತರ
January 29, 2026
6:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror