ಕೃಷಿ ಮಸೂದೆಗಳಿಂದ ಕೃಷಿಕರಿಗೆ ಹೆಚ್ಚಿನ ಅನುಕೂಲ | ಅಖಿಲ ಭಾರತ ರೈತ ಸಂಘಟನೆಗಳ ಒಕ್ಕೂಟ  

September 23, 2020
3:31 PM
ಕೇಂದ್ರ ಸರ್ಕಾರ ಹೊಸದಾಗಿ ಮಂಡನೆ ಮಾಡಿರುವ ಕೃಷಿ ಮಸೂದೆಗಳಿಂದ ಕೃಷಿಕರಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ಅಖಿಲ ಭಾರತ ರೈತ ಸಂಘಟನೆಗಳ ಒಕ್ಕೂಟ ಹೇಳಿದೆ.

ಈ ಕಾಯ್ದೆಯ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮುಕ್ತ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ರಾಜ್ಯದ ಗಡಿಯಾಚೆಗೂ ಸುಲಭವಾಗಿ, ಯಾವುದೇ ನಿಬಂಧನೆಗಳು ಇಲ್ಲದೆಯೇ ತಮ್ಮ ಬೆಳೆಗಳನ್ನು ಮಾರಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ತಮ್ಮ ಉತ್ಪನ್ನಗಳ ಮಾರಾಟಗಾರರು ತಾವೇ ಆಗಲು ಅವಕಾಶ ಕಲ್ಪಿಸಿದೆ ಎಂದು ಒಕ್ಕೂಟ ತಿಳಿಸಿದೆ.

ಈ ಹೊಸ ಕೃಷಿ ಕಾಯ್ದೆಗಳ ಮೂಲಕ ಕೇಂದ್ರ ಸರ್ಕಾರ ರೈತರ ಸಬಲೀಕರಣಕ್ಕೆ ಮುಂದಾಗಿದೆ. ಈ ಮಸೂದೆ ರೈತರ ಆದಾಯ ಹೆಚ್ಚಳಕ್ಕೂ ಸಹಕಾರಿಯಾಗಲಿದೆ. ಈ ಎರಡು ಹೊಸ ಮಸೂದೆಗಳು ರೈತರ ಅಭಿವೃದ್ಧಿ‌ಗೆ ಸುಸ್ಥಿರ ಮತ್ತು ಲಾಭದಾಯಕ ಭವಿಷ್ಯವನ್ನು ಖಾತರಿಪಡಿಸುತ್ತದೆ ಎಂದೂ ಒಕ್ಕೂಟ ಅಭಿಪ್ರಾಯ ವ್ಯಕ್ತಪಡಿಸಿದೆ.

ರೈತರು ತಮ್ಮ ಉತ್ಪನ್ನಗಳ ಮೇಲೆ ತಾವೇ ನಿಯಂತ್ರಣ ಹೊಂದಲಿದ್ದಾರೆ. ರಾಜ್ಯ, ಅಂತರರಾಜ್ಯ‌ಗಳಲ್ಲಿ ತಮ್ಮಿಷ್ಟದ ಪ್ರಕಾರವೇ ಖರೀದಿ ಮತ್ತು ಮಾರಾಟ ಮಾಡಲು ಅವಕಾಶ ದೊರೆತಂತಾಗಿದೆ. ರೈತರ ವಿಚಾರದಲ್ಲಿ ಕೇಂದ್ರ ಸರ್ಕಾರದ ಈ ನಿಲುವು ದೂರದೃಷ್ಟಿಯುಳ್ಳದ್ದಾಗಿದೆ ಎಂದು  ಒಕ್ಕೂಟದ ಅಧ್ಯಕ್ಷ ಬಿ.ವಿ. ಜವರೇಗೌಡ  ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror