ಕೃಷಿ

ಕೃಷಿ ಮಸೂದೆಗಳಿಂದ ಕೃಷಿಕರಿಗೆ ಹೆಚ್ಚಿನ ಅನುಕೂಲ | ಅಖಿಲ ಭಾರತ ರೈತ ಸಂಘಟನೆಗಳ ಒಕ್ಕೂಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕೇಂದ್ರ ಸರ್ಕಾರ ಹೊಸದಾಗಿ ಮಂಡನೆ ಮಾಡಿರುವ ಕೃಷಿ ಮಸೂದೆಗಳಿಂದ ಕೃಷಿಕರಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ಅಖಿಲ ಭಾರತ ರೈತ ಸಂಘಟನೆಗಳ ಒಕ್ಕೂಟ ಹೇಳಿದೆ.
Advertisement

ಈ ಕಾಯ್ದೆಯ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮುಕ್ತ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ರಾಜ್ಯದ ಗಡಿಯಾಚೆಗೂ ಸುಲಭವಾಗಿ, ಯಾವುದೇ ನಿಬಂಧನೆಗಳು ಇಲ್ಲದೆಯೇ ತಮ್ಮ ಬೆಳೆಗಳನ್ನು ಮಾರಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ತಮ್ಮ ಉತ್ಪನ್ನಗಳ ಮಾರಾಟಗಾರರು ತಾವೇ ಆಗಲು ಅವಕಾಶ ಕಲ್ಪಿಸಿದೆ ಎಂದು ಒಕ್ಕೂಟ ತಿಳಿಸಿದೆ.

ಈ ಹೊಸ ಕೃಷಿ ಕಾಯ್ದೆಗಳ ಮೂಲಕ ಕೇಂದ್ರ ಸರ್ಕಾರ ರೈತರ ಸಬಲೀಕರಣಕ್ಕೆ ಮುಂದಾಗಿದೆ. ಈ ಮಸೂದೆ ರೈತರ ಆದಾಯ ಹೆಚ್ಚಳಕ್ಕೂ ಸಹಕಾರಿಯಾಗಲಿದೆ. ಈ ಎರಡು ಹೊಸ ಮಸೂದೆಗಳು ರೈತರ ಅಭಿವೃದ್ಧಿ‌ಗೆ ಸುಸ್ಥಿರ ಮತ್ತು ಲಾಭದಾಯಕ ಭವಿಷ್ಯವನ್ನು ಖಾತರಿಪಡಿಸುತ್ತದೆ ಎಂದೂ ಒಕ್ಕೂಟ ಅಭಿಪ್ರಾಯ ವ್ಯಕ್ತಪಡಿಸಿದೆ.

ರೈತರು ತಮ್ಮ ಉತ್ಪನ್ನಗಳ ಮೇಲೆ ತಾವೇ ನಿಯಂತ್ರಣ ಹೊಂದಲಿದ್ದಾರೆ. ರಾಜ್ಯ, ಅಂತರರಾಜ್ಯ‌ಗಳಲ್ಲಿ ತಮ್ಮಿಷ್ಟದ ಪ್ರಕಾರವೇ ಖರೀದಿ ಮತ್ತು ಮಾರಾಟ ಮಾಡಲು ಅವಕಾಶ ದೊರೆತಂತಾಗಿದೆ. ರೈತರ ವಿಚಾರದಲ್ಲಿ ಕೇಂದ್ರ ಸರ್ಕಾರದ ಈ ನಿಲುವು ದೂರದೃಷ್ಟಿಯುಳ್ಳದ್ದಾಗಿದೆ ಎಂದು  ಒಕ್ಕೂಟದ ಅಧ್ಯಕ್ಷ ಬಿ.ವಿ. ಜವರೇಗೌಡ  ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಏನಾಗುತ್ತಿದೆ…? | 500 ರೂಪಾಯಿ ಯಾವಾಗ ಆಗುತ್ತೆ…?

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಳೆಗಾರರಿಗೆ ನಿರೀಕ್ಷೆಯ ಮೇಲೆ ನಿರೀಕ್ಷೆ.ಚಾಲಿ ಅಡಿಕೆ ಧಾರಣೆ…

4 hours ago

ಕುಂಡಲಿಯ ರಹಸ್ಯ | ಈ ರಾಶಿಯವರಿಗೆ 12ನೇ ಮನೆಯಿಂದ ಗುಪ್ತ ಶತ್ರುಗಳ ಎಚ್ಚರಿಕೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…

5 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು

ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…

12 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ

ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ  |…

12 hours ago

ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…

12 hours ago

ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…

13 hours ago