ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಫೆಬ್ರವರಿ 1 ರಂದು ಮಂಡಿಸಲಿರುವ 2022-23 ರ ಬಜೆಟ್ನಲ್ಲಿ ಸರ್ಕಾರವು ಕೃಷಿ ಸಾಲದ ಗುರಿಯನ್ನು ಸುಮಾರು 18 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸುವ ಸಾಧ್ಯತೆಯಿದೆ.
ಕೃಷಿ ಸಾಲದ ಹರಿವು ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚುತ್ತಿದೆ, ಪ್ರತಿ ಹಣಕಾಸು ವರ್ಷಕ್ಕೆ ನಿಗಪಡಿಸಿದ ಗುರಿಯನ್ನು ಮೀರಿದೆ. ಸಾಮಾನ್ಯವಾಗಿ ಕೃಷಿ ಸಾಲಗಳು ಒಂಬತ್ತು ಪ್ರತಿಶತದಷ್ಟು ಬಡ್ಡಿದರವನ್ನು ಆಕರ್ಷಿಸುತ್ತದೆ. ಆದುದರಿಂದ ಅಲ್ಪಾವಧಿಯ ಬೆಳೆ ಸಾಲವನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡಲು ಸರ್ಕಾರವು ಬಡ್ಡಿ ರಿಯಾಯಿತಿನ್ನು ಒದಗಿಸುತ್ತಿದೆ ಎಂದು ತಿಳಿದುಬಂದಿದೆ.
ನಿಗದಿತ ದಿನಾಂಕದೊಳಗೆ ಸಾಲವನ್ನು ತ್ವರಿತವಾಗಿ ಮರುಪಾವತಿಸಲು ರೈತರಿಗೆ ಶೇಕಡಾ ಮೂರರಷ್ಟು ಹೆಚ್ಚುವರಿ ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಔಪಚಾರಿಕ ಸಾಲ ವ್ಯವಸ್ಥೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರ ವ್ಯಾಪ್ತಿಯನ್ನು ಹೆಚ್ಚಿಸಲು ಆರ್.ಬಿ.ಐ ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು 1 ಲಕ್ಷದಿಂದ 1.6 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…