Advertisement
ಸುದ್ದಿಗಳು

ಅಡಿಕೆ ಕೃಷಿಯೊಂದೇ ಅಲ್ಲ…! | ಇದೊಂದು ಕೃಷಿಯ ಕಡೆಗೂ ಲಕ್ಷ್ಯ ವಹಿಸಬೇಕು ಕೃಷಿಕರು… |

Share

ಕರಾವಳಿ ಹಾಗೂ ಮಲೆನಾಡಲ್ಲಿ ಅಡಿಕೆ ಕೃಷಿಯೇ ಫೇಮಸ್ಸು. ಇದೀಗ ವಿಸ್ತರಣೆಯ ವೇಗ ಹೆಚ್ಚಿ ರಾಜ್ಯದ ವಿವಿಧ ಜಿಲ್ಲೆಗಳಿಗೂ ತಲಪಿದೆ, ತಮಿಳುನಾಡು, ಆಂಧ್ರಪ್ರದೇಶಕ್ಕೂ ವ್ಯಾಪಿಸಿದೆ. ಅಡಿಕೆ ಮಾತ್ರ ಅಲ್ಲ, ಹಲವು ಕಡೆ ಒಂದೇ ಬಗೆಯ ಕೃಷಿಯನ್ನೇ ಕೃಷಿಕರು ನೆಚ್ಚಿರುತ್ತಾರೆ. ಹೊಸ ಕೃಷಿಯ ಕಡೆ ಮನಸ್ಸು ಮಾಡುವವರು ಕಡಿಮೆ.  ವಾಣಿಜ್ಯ ಬೆಳೆಯ ಹೊರತಾದ ಕೃಷಿಯ ಕಡೆಗೆ ಈಚೆಗೆ ಕೆಲವರು ಮಾತನಾಡುತ್ತಿದ್ದಾರೆ.  ದೆಹಲಿಯ ರೈತನೊಬ್ಬ ಈಗ ಹಣ್ಣು, ತರಕಾರಿ, ಔಷಧಿ ಕೃಷಿಯ ಕಡೆಗೆ ಮನಸ್ಸು ಮಾಡಿ ಯಶಸ್ಸು ಕಂಡಿದ್ದಾರೆ. 

ಇತ್ತೀಚಿನ ದಿನಗಳಲ್ಲಿ ರೈತರು ವಾಣಿಜ್ಯ ಬೆಳೆಗಳತ್ತಾ ವಾಲುತ್ತಿದ್ದಾರೆ. ಸಾಂಪ್ರದಾಯಿಕ ಕೃಷಿಯಿಂದ  ಹೆಚ್ಚೇನು ಲಾಭ ಸಿಗದ ಕಾರಣ ಅನ್ನದಾತರು ಹೆಚ್ಚಾಗಿ ತೋಟಗಾರಿಕೆಗೆ ಮುಂದಾಗಿದ್ದಾರೆ. ಹಣ್ಣುಗಳು, ತರಕಾರಿಗಳು, ಔಷಧಿ ಗಿಡಗಳ​ ಬೆಳೆಗಳನ್ನು ಬೆಳೆಯಲು ಮುಂದಾಗುತ್ತಿದ್ದಾರೆ. ಅಂತಹ ಬೆಳೆಗಳಲ್ಲಿ ನಮ್ಮ ಮನೆ ಸುತ್ತ ಬೆಳೆಯುವ ತುಳಸಿ ಬೆಳೆಯು ಒಂದು. ಈ ಕೃಷಿಯಿಂದ ಆದಾಯ ಗಳಿಸಬಹುದು. ತುಳಸಿಯನ್ನು ಬೆಳೆಸಲು ಹೆಚ್ಚಿನ ಬಂಡವಾಳವೂ ಬೇಕಾಗಿಲ್ಲ. ಇದರೊಂದಿಗೆ ಇದಕ್ಕೆ ಸಾಕಷ್ಟು ಬೇಡಿಕೆಯೂ ಇದೆ. ಇಂದಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ತುಳಸಿ ಗಿಡ  ಇದೆ. ಇದಲ್ಲದೇ ಔಷಧಿಗಳಲ್ಲಿ, ಪೂಜೆಯಲ್ಲಿ ಹೀಗೆ ಹಲವು ವಿಧಗಳಲ್ಲಿ ಬಳಸುತ್ತಾರೆ. ತುಳಸಿ ಕೃಷಿಯ ಮೂಲಕ ಹೇಗೆ ಆದಾಯ ಗಳಿಸಬಹುದು?.

ಆಯುರ್ವೇದ ಮತ್ತು ನೈಸರ್ಗಿಕ ಔಷಧಗಳತ್ತ ಜನರ ಒಲವು ಹೆಚ್ಚುತ್ತಿದ್ದು, ಈ ಕಾರಣದಿಂದಾಗಿ ಅವರ ಬೇಡಿಕೆಯಲ್ಲಿ ಸಾಕಷ್ಟು ಹೆಚ್ಚಳ ಕಂಡು ಬರುತ್ತಿದೆ. ಈಗಿನ ಕಾಲದಲ್ಲಿ ಮಾರುಕಟ್ಟೆ ವಿಸ್ತಾರಗೊಂಡಿದೆ. ಅಂತಹ ಪರಿಸ್ಥಿತಿಯಲ್ಲಿ,  ಔಷಧೀಯ ಸಸ್ಯಗಳನ್ನು ಬೆಳೆಸುವ ವ್ಯವಹಾರವನ್ನು ಪ್ರಾರಂಭಿಸಿದರೆ, ಅದು  ತುಂಬಾ ಪ್ರಯೋಜನಕಾರಿ. ಸರಿಯಾದ ಯೋಜನೆ ಹಾಗೂ ಯೋಜನೆಯನ್ನು ರೂಪಿಸಬೇಕಷ್ಟೆ.ತುಳಸಿ ಕೃಷಿ ಪ್ರಾರಂಭಿಸಲು ಬಹಳಷ್ಟು ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ. ಅಲ್ಲದೆ, ಇದಕ್ಕಾಗಿ  ದೀರ್ಘ ಮತ್ತು ವಿಶಾಲವಾದ ಕೃಷಿ ಭೂಮಿಯ ಅಗತ್ಯವೂ ಇಲ್ಲ. ಕೆಲವು ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕವೂ  ಈ ವ್ಯವಹಾರವನ್ನು ಪ್ರಾರಂಭಿಸಬಹುದು. ಅನೇಕ ಆಯುರ್ವೇದ ಕಂಪನಿಗಳು ತುಳಸಿಯನ್ನು ಕೊಳ್ಳುತ್ತವೆ.

ಬಾರಾಬಂಕಿ ಜಿಲ್ಲೆಯ ತೆಹಸಿಲ್ ಫತೇಪುರ್ ಪ್ರದೇಶದ ಬಂಭನಪುರ ಗ್ರಾಮದ ರೈತ ರಾಜೇಶ್ ವರ್ಮಾ, ಔಷಧೀಯ ಕೃಷಿಯ ಮೂಲಕ ಗಮನಸೆಳೆದಿದ್ದಾರೆ. ತುಳಸಿ ಬೇಸಾಯದಿಂದ ಕೇವಲ 20 ಗುಂಟೆ ಜಾಗದಲ್ಲಿ ಕೃಷಿ ಆರಂಭಿಸಿದ್ದರು. ನಂತರ ರೈತ ರಾಜೇಶ್ ವರ್ಮಾ ಅವರು ಸುಮಾರು 4  ಸಾಲುಗಳಲ್ಲಿ ತುಳಸಿ ಕೃಷಿ ಮಾಡುವ ಮೂಲಕ ಒಂದೇ ಬೆಳೆಯಲ್ಲಿ 2 ಲಕ್ಷ ರೂ.ವರೆಗೆ  ಗಳಿಸುತ್ತಿದ್ದಾರೆ. ರಾಜೇಶ್ ವರ್ಮಾ ಅವರ ಔಷಧೀಯ ಕೃಷಿ ನೋಡಿ ಗ್ರಾಮದ ಹಲವು ರೈತರು ತುಳಸಿ ಕೃಷಿಗೆ ಮುಂದಾಗಿದ್ದಾರೆ.

ಈ ಹಿಂದೆ ಸಾಂಪ್ರದಾಯಿಕ ಕೃಷಿಯಲ್ಲಿ ಹೆಚ್ಚಿನ ಲಾಭ ಸಿಗದೇ ತೀವ್ರ ನೊಂದಿದ್ದೆವು ಎನ್ನುತ್ತಾರೆ ತುಳಸಿ ಕೃಷಿ ಮಾಡುತ್ತಿರುವ ರೈತ ರಾಜೇಶ್ ವರ್ಮಾ. ನಮಗೆ ಈ ಔಷಧೀಯ ಕೃಷಿಯ ಬಗ್ಗೆ ಎಲ್ಲಾ ಮಾಹಿತಿ ಸಿಕ್ಕಿತು, ಅಂದಿನಿಂದ ತುಳಸಿ ಬೇಸಾಯವನ್ನು ಪ್ರಾರಂಭಿಸಿದೆವು, ಒಂದು ಎರಡುವರೆ ಎಕರೆಯಲ್ಲಿ 15 ಸಾವಿರದಷ್ಟು ಖರ್ಷು ಮಾಡಿದರೆ 2.5- 3 ಲಕ್ಷ ರೂಪಾಯಿ ಸಿಗುತ್ತದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

14 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

14 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

16 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

16 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago