Advertisement
ಸುದ್ದಿಗಳು

ಅಡಿಕೆ ಕೃಷಿಯೊಂದೇ ಅಲ್ಲ…! | ಇದೊಂದು ಕೃಷಿಯ ಕಡೆಗೂ ಲಕ್ಷ್ಯ ವಹಿಸಬೇಕು ಕೃಷಿಕರು… |

Share

ಕರಾವಳಿ ಹಾಗೂ ಮಲೆನಾಡಲ್ಲಿ ಅಡಿಕೆ ಕೃಷಿಯೇ ಫೇಮಸ್ಸು. ಇದೀಗ ವಿಸ್ತರಣೆಯ ವೇಗ ಹೆಚ್ಚಿ ರಾಜ್ಯದ ವಿವಿಧ ಜಿಲ್ಲೆಗಳಿಗೂ ತಲಪಿದೆ, ತಮಿಳುನಾಡು, ಆಂಧ್ರಪ್ರದೇಶಕ್ಕೂ ವ್ಯಾಪಿಸಿದೆ. ಅಡಿಕೆ ಮಾತ್ರ ಅಲ್ಲ, ಹಲವು ಕಡೆ ಒಂದೇ ಬಗೆಯ ಕೃಷಿಯನ್ನೇ ಕೃಷಿಕರು ನೆಚ್ಚಿರುತ್ತಾರೆ. ಹೊಸ ಕೃಷಿಯ ಕಡೆ ಮನಸ್ಸು ಮಾಡುವವರು ಕಡಿಮೆ.  ವಾಣಿಜ್ಯ ಬೆಳೆಯ ಹೊರತಾದ ಕೃಷಿಯ ಕಡೆಗೆ ಈಚೆಗೆ ಕೆಲವರು ಮಾತನಾಡುತ್ತಿದ್ದಾರೆ.  ದೆಹಲಿಯ ರೈತನೊಬ್ಬ ಈಗ ಹಣ್ಣು, ತರಕಾರಿ, ಔಷಧಿ ಕೃಷಿಯ ಕಡೆಗೆ ಮನಸ್ಸು ಮಾಡಿ ಯಶಸ್ಸು ಕಂಡಿದ್ದಾರೆ. 

ಇತ್ತೀಚಿನ ದಿನಗಳಲ್ಲಿ ರೈತರು ವಾಣಿಜ್ಯ ಬೆಳೆಗಳತ್ತಾ ವಾಲುತ್ತಿದ್ದಾರೆ. ಸಾಂಪ್ರದಾಯಿಕ ಕೃಷಿಯಿಂದ  ಹೆಚ್ಚೇನು ಲಾಭ ಸಿಗದ ಕಾರಣ ಅನ್ನದಾತರು ಹೆಚ್ಚಾಗಿ ತೋಟಗಾರಿಕೆಗೆ ಮುಂದಾಗಿದ್ದಾರೆ. ಹಣ್ಣುಗಳು, ತರಕಾರಿಗಳು, ಔಷಧಿ ಗಿಡಗಳ​ ಬೆಳೆಗಳನ್ನು ಬೆಳೆಯಲು ಮುಂದಾಗುತ್ತಿದ್ದಾರೆ. ಅಂತಹ ಬೆಳೆಗಳಲ್ಲಿ ನಮ್ಮ ಮನೆ ಸುತ್ತ ಬೆಳೆಯುವ ತುಳಸಿ ಬೆಳೆಯು ಒಂದು. ಈ ಕೃಷಿಯಿಂದ ಆದಾಯ ಗಳಿಸಬಹುದು. ತುಳಸಿಯನ್ನು ಬೆಳೆಸಲು ಹೆಚ್ಚಿನ ಬಂಡವಾಳವೂ ಬೇಕಾಗಿಲ್ಲ. ಇದರೊಂದಿಗೆ ಇದಕ್ಕೆ ಸಾಕಷ್ಟು ಬೇಡಿಕೆಯೂ ಇದೆ. ಇಂದಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ತುಳಸಿ ಗಿಡ  ಇದೆ. ಇದಲ್ಲದೇ ಔಷಧಿಗಳಲ್ಲಿ, ಪೂಜೆಯಲ್ಲಿ ಹೀಗೆ ಹಲವು ವಿಧಗಳಲ್ಲಿ ಬಳಸುತ್ತಾರೆ. ತುಳಸಿ ಕೃಷಿಯ ಮೂಲಕ ಹೇಗೆ ಆದಾಯ ಗಳಿಸಬಹುದು?.

ಆಯುರ್ವೇದ ಮತ್ತು ನೈಸರ್ಗಿಕ ಔಷಧಗಳತ್ತ ಜನರ ಒಲವು ಹೆಚ್ಚುತ್ತಿದ್ದು, ಈ ಕಾರಣದಿಂದಾಗಿ ಅವರ ಬೇಡಿಕೆಯಲ್ಲಿ ಸಾಕಷ್ಟು ಹೆಚ್ಚಳ ಕಂಡು ಬರುತ್ತಿದೆ. ಈಗಿನ ಕಾಲದಲ್ಲಿ ಮಾರುಕಟ್ಟೆ ವಿಸ್ತಾರಗೊಂಡಿದೆ. ಅಂತಹ ಪರಿಸ್ಥಿತಿಯಲ್ಲಿ,  ಔಷಧೀಯ ಸಸ್ಯಗಳನ್ನು ಬೆಳೆಸುವ ವ್ಯವಹಾರವನ್ನು ಪ್ರಾರಂಭಿಸಿದರೆ, ಅದು  ತುಂಬಾ ಪ್ರಯೋಜನಕಾರಿ. ಸರಿಯಾದ ಯೋಜನೆ ಹಾಗೂ ಯೋಜನೆಯನ್ನು ರೂಪಿಸಬೇಕಷ್ಟೆ.ತುಳಸಿ ಕೃಷಿ ಪ್ರಾರಂಭಿಸಲು ಬಹಳಷ್ಟು ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ. ಅಲ್ಲದೆ, ಇದಕ್ಕಾಗಿ  ದೀರ್ಘ ಮತ್ತು ವಿಶಾಲವಾದ ಕೃಷಿ ಭೂಮಿಯ ಅಗತ್ಯವೂ ಇಲ್ಲ. ಕೆಲವು ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕವೂ  ಈ ವ್ಯವಹಾರವನ್ನು ಪ್ರಾರಂಭಿಸಬಹುದು. ಅನೇಕ ಆಯುರ್ವೇದ ಕಂಪನಿಗಳು ತುಳಸಿಯನ್ನು ಕೊಳ್ಳುತ್ತವೆ.

ಬಾರಾಬಂಕಿ ಜಿಲ್ಲೆಯ ತೆಹಸಿಲ್ ಫತೇಪುರ್ ಪ್ರದೇಶದ ಬಂಭನಪುರ ಗ್ರಾಮದ ರೈತ ರಾಜೇಶ್ ವರ್ಮಾ, ಔಷಧೀಯ ಕೃಷಿಯ ಮೂಲಕ ಗಮನಸೆಳೆದಿದ್ದಾರೆ. ತುಳಸಿ ಬೇಸಾಯದಿಂದ ಕೇವಲ 20 ಗುಂಟೆ ಜಾಗದಲ್ಲಿ ಕೃಷಿ ಆರಂಭಿಸಿದ್ದರು. ನಂತರ ರೈತ ರಾಜೇಶ್ ವರ್ಮಾ ಅವರು ಸುಮಾರು 4  ಸಾಲುಗಳಲ್ಲಿ ತುಳಸಿ ಕೃಷಿ ಮಾಡುವ ಮೂಲಕ ಒಂದೇ ಬೆಳೆಯಲ್ಲಿ 2 ಲಕ್ಷ ರೂ.ವರೆಗೆ  ಗಳಿಸುತ್ತಿದ್ದಾರೆ. ರಾಜೇಶ್ ವರ್ಮಾ ಅವರ ಔಷಧೀಯ ಕೃಷಿ ನೋಡಿ ಗ್ರಾಮದ ಹಲವು ರೈತರು ತುಳಸಿ ಕೃಷಿಗೆ ಮುಂದಾಗಿದ್ದಾರೆ.

ಈ ಹಿಂದೆ ಸಾಂಪ್ರದಾಯಿಕ ಕೃಷಿಯಲ್ಲಿ ಹೆಚ್ಚಿನ ಲಾಭ ಸಿಗದೇ ತೀವ್ರ ನೊಂದಿದ್ದೆವು ಎನ್ನುತ್ತಾರೆ ತುಳಸಿ ಕೃಷಿ ಮಾಡುತ್ತಿರುವ ರೈತ ರಾಜೇಶ್ ವರ್ಮಾ. ನಮಗೆ ಈ ಔಷಧೀಯ ಕೃಷಿಯ ಬಗ್ಗೆ ಎಲ್ಲಾ ಮಾಹಿತಿ ಸಿಕ್ಕಿತು, ಅಂದಿನಿಂದ ತುಳಸಿ ಬೇಸಾಯವನ್ನು ಪ್ರಾರಂಭಿಸಿದೆವು, ಒಂದು ಎರಡುವರೆ ಎಕರೆಯಲ್ಲಿ 15 ಸಾವಿರದಷ್ಟು ಖರ್ಷು ಮಾಡಿದರೆ 2.5- 3 ಲಕ್ಷ ರೂಪಾಯಿ ಸಿಗುತ್ತದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

9 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

9 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

9 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

9 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

20 hours ago