Advertisement
ಸುದ್ದಿಗಳು

ಅತಿವೃಷ್ಟಿಯಿಂದ 5 ಲಕ್ಷ ಹೆಕ್ಟೇರ್ ಗೂ ಅಧಿಕ ಪ್ರದೇಶದಲ್ಲಿ ಕೃಷಿಹಾನಿ | ಪರಿಹಾರದ ನಿರೀಕ್ಷೆ | ಪ್ರಧಾನಿಗಳಿಂದಲೂ ಮಾಹಿತಿ ಸಂಗ್ರಹ |

Share

ರಾಜ್ಯದಲ್ಲಿ ಅತಿವೃಷ್ಟಿಯಿಂದ ಸುಮಾರು 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ ಹಾಗೂ 30,114 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ನಷ್ಟವಾಗಿದೆ.  ಹೀಗಾಗಿ ಬೆಳೆ ನಷ್ಟವಾದ ರೈತರ ಖಾತೆಗೆ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಲಾರ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಪರಿಶೀಲನೆ ನಡೆಸಿ ಪ್ರತಿಕ್ರಿಯೆ ನೀಡಿದ್ದರು. ಬೆಳೆ ನಷ್ಟ ಸಂಬಂಧ ಈಗಾಗಲೇ ಜಿಪಿಎಸ್ ಆಧಾರಿತ ಸರ್ವೇ ಮಾಡಿ ವಿವರಗಳನ್ನು ಪರಿಹಾರದ ಆ್ಯಪ್ ಗೆ ಅಪ್ ಲೋಡ್  ಮಾಡಲು ಸೂಚನೆ ನೀಡಲಾಗಿದೆ. ವಿವರಗಳು ಲಭ್ಯವಾದ ಬಳಿಕ ಕೂಡಲೇ ರೈತರ ಖಾತೆಗೆ ಪರಿಹಾರ ಹಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ  ಎಂದು ಹೇಳಿದರು.

ರಾಜ್ಯದಲ್ಲಿ ರಾಗಿ ಬೆಳೆ, ತೋಟಗಾರಿಕೆ ಬೆಳೆ, ತರಕಾರಿ, ಹೂವಿನ ತೋಟ ನಷ್ಟವಾಗಿರುವುದು ಗಮನಕ್ಕೆ ಬಂದಿದೆ.  ಪ್ರಾಥಮಿಕ ವರದಿಯ ಪ್ರಕಾರ ಕೋಲಾರದಲ್ಲಿಯೇ 48,333 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ ಹಾಗೂ 6,966 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ನಷ್ಟವಾಗಿದೆ ಎಂದು ತಿಳಿಸಿದರು.

ಮಂಗಳವಾರ ಮುಂಜಾನೆ ಪ್ರಧಾನಿ ನರೇಂದ್ರ ಮೋದಿಯವರು ದೂರವಾಣಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮಾತುಕತೆ ನಡೆಸಿದರು. ಕಳೆದ ಹಲವು ದಿನಗಳಿಂದ ಎಡೆಬಿಡದೆ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿಗಳು ಮಾಹಿತಿ ಪಡೆದರು. ರಾಜ್ಯಕ್ಕೆ ಅಗತ್ಯ ನೆರವು ಮತ್ತು ಸಹಕಾರ ನೀಡುವ ಭರವಸೆಯನ್ನು ನೀಡಿದರು.

ಅತಿವೃಷ್ಟಿ ಕಾರಣದಿಂದ ಬೆಳೆ ನಷ್ಟವಾಗಿದ್ದು ಟೊಮೆಟೋ ಸಹಿತ ತರಕಾರಿ ಬೆಲೆ ಏರಿಕೆಯಾಗಿದೆ. ಟೊಮೆಟೋ ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ. ಇನ್ನಿತರ ತರಕಾರಿ ಮಾರಾಟ ಕೂಡ ಮಾರುಕಟ್ಟೆಗೆ ಬರುವುದು ಕಡಿಮೆಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago