ರಾಜ್ಯದಲ್ಲಿ ಅತಿವೃಷ್ಟಿಯಿಂದ ಸುಮಾರು 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ ಹಾಗೂ 30,114 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ನಷ್ಟವಾಗಿದೆ. ಹೀಗಾಗಿ ಬೆಳೆ ನಷ್ಟವಾದ ರೈತರ ಖಾತೆಗೆ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಲಾರ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಪರಿಶೀಲನೆ ನಡೆಸಿ ಪ್ರತಿಕ್ರಿಯೆ ನೀಡಿದ್ದರು. ಬೆಳೆ ನಷ್ಟ ಸಂಬಂಧ ಈಗಾಗಲೇ ಜಿಪಿಎಸ್ ಆಧಾರಿತ ಸರ್ವೇ ಮಾಡಿ ವಿವರಗಳನ್ನು ಪರಿಹಾರದ ಆ್ಯಪ್ ಗೆ ಅಪ್ ಲೋಡ್ ಮಾಡಲು ಸೂಚನೆ ನೀಡಲಾಗಿದೆ. ವಿವರಗಳು ಲಭ್ಯವಾದ ಬಳಿಕ ಕೂಡಲೇ ರೈತರ ಖಾತೆಗೆ ಪರಿಹಾರ ಹಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ರಾಗಿ ಬೆಳೆ, ತೋಟಗಾರಿಕೆ ಬೆಳೆ, ತರಕಾರಿ, ಹೂವಿನ ತೋಟ ನಷ್ಟವಾಗಿರುವುದು ಗಮನಕ್ಕೆ ಬಂದಿದೆ. ಪ್ರಾಥಮಿಕ ವರದಿಯ ಪ್ರಕಾರ ಕೋಲಾರದಲ್ಲಿಯೇ 48,333 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ ಹಾಗೂ 6,966 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ನಷ್ಟವಾಗಿದೆ ಎಂದು ತಿಳಿಸಿದರು.
ಮಂಗಳವಾರ ಮುಂಜಾನೆ ಪ್ರಧಾನಿ ನರೇಂದ್ರ ಮೋದಿಯವರು ದೂರವಾಣಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮಾತುಕತೆ ನಡೆಸಿದರು. ಕಳೆದ ಹಲವು ದಿನಗಳಿಂದ ಎಡೆಬಿಡದೆ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿಗಳು ಮಾಹಿತಿ ಪಡೆದರು. ರಾಜ್ಯಕ್ಕೆ ಅಗತ್ಯ ನೆರವು ಮತ್ತು ಸಹಕಾರ ನೀಡುವ ಭರವಸೆಯನ್ನು ನೀಡಿದರು.
ಅತಿವೃಷ್ಟಿ ಕಾರಣದಿಂದ ಬೆಳೆ ನಷ್ಟವಾಗಿದ್ದು ಟೊಮೆಟೋ ಸಹಿತ ತರಕಾರಿ ಬೆಲೆ ಏರಿಕೆಯಾಗಿದೆ. ಟೊಮೆಟೋ ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ. ಇನ್ನಿತರ ತರಕಾರಿ ಮಾರಾಟ ಕೂಡ ಮಾರುಕಟ್ಟೆಗೆ ಬರುವುದು ಕಡಿಮೆಯಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…