Advertisement
MIRROR FOCUS

ಕಾಡಾನೆ ದಾಳಿಗೆ ಕೃಷಿ ನಾಶ | ಮನಕಲುವ ದೃಶ್ಯ ಇದು | ಕೃಷಿಕರ ಈ ನೋವಿಗೆ ಪರಿಹಾರ ಎಂದು ?

Share

ಕೈ ಕೆಸರಾದರೆ ಬಾಯಿ ಮೊಸರು ಬಹಳ ಹಳೆಯ ಗಾದೆ ಮಾತು. ಈಗ ಕೈ ಕೆಸರಾದರೆ ಬಾಯಿ ಮೊಸರು ಎನ್ನಲು ಕೆಲ ಕಾಲ ಬೇಕಾಗುತ್ತದೆ. ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ  ಕೃಷಿ ಫಲ ನೀಡಿದರೂ ಕೈಗೆ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಕೃಷಿ ಉಳಿಸುವುದೇ ಈಗ ಹಲವು ಕಡೆ ಕೃಷಿಕರಿಗೆ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಕಾಡು ಪ್ರಾಣಿಗಳ ಹಾವಳಿ, ಅದರಲ್ಲೂ ಕಾಡಾನೆ ಹಾವಳಿ.

Advertisement
Advertisement
Advertisement
Advertisement

 

Advertisement

ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ  ಕಾಡಾನೆ ಹಾವಳಿ ಇದೆ. ಮಂಡೆಕೋಲು ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರವಿದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಗುತ್ತದೆ. ಈಚೆಗೆ ಆನೆಗಳ ಹಿಂಡೇ ಕಂಡುಬಂದಿತ್ತು.  ಅದೇ ಮಾದರಿಯ ಪರಿಸ್ಥಿತಿ ಈಗ ಕೊಲ್ಲಮೊಗ್ರ , ಬಾಳುಗೋಡು, ಕಲ್ಮಕಾರು, ಕಟ್ಟ ಪ್ರದೇಶದಲ್ಲಿ ಕಂಡುಬಂದಿದೆ. ಕಾಡಾನೆ ಮಾತ್ರವಲ್ಲ ಕಾಡುಕೋಣ, ಕಾಡೆಮ್ಮೆ, ಕಡವೆ, ಮಂಗಗಳ ಕಾಟವೂ ಸುಳ್ಯ ತಾಲೂಕಿನ ಕೃಷಿಕರಿಗೆ ವಿಪರೀತವಾಗಿ ಹಲವು ವರ್ಷಗಳಿಂದ ಬಾಧಿಸುತ್ತಿದೆ. ಇತ್ತೀಚೆಗೆ ಮಂಗಗಳ ಕಾಟಗಳಿಂದ ತೆಂಗಿನಕಾಯಿ ಫಸಲೇ ಕಡಿಮೆಯಾಗಿದೆ. ಈಗ ಆನೆಗಳ ಕಾಟದಿಂದ ಕೃಷಿಕರ ಬದುಕಿನ ಬೆಳೆಯಾದ ಅಡಿಕೆ, ತೆಂಗು ಕೂಡಾ ನಾಶವಾಗುತ್ತಿದೆ.

Advertisement

ಕೊಲ್ಲಮೊಗ್ರ , ಕಟ್ಟ ಪ್ರದೇಶದಲ್ಲಿ ಈಚೆಗ ಕಾಡಾೆನೆಗಳ ಹಾವಳಿ ಹೆಚ್ಚಾಗಿದ್ದು ಚೆನ್ನಾಗಿ ಬೆಳೆದಿರುವ ಕೃಷಿ ಕೈಗೆ ಸಿಗುವ ಮೊದಲೇ ಕಾಡು ಪ್ರಾಣಿಗಳಿಂದ ಹಾನಿಗೊಳಗಾಗುತ್ತಿದೆ. ಕಟ್ಟದ ಶಂಕರ ಭಟ್‌ ಎಂಬವರ ತೋಟಕ್ಕೆ ಈಚೆಗೆ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ, ತೆಂಗು ಸಹಿತ ಕೃಷಿಯನ್ನು ನಾಶ ಮಾಡಿದೆ. ಕೃಷಿ ಮಾಡಿ ಫಸಲು ಬರುವ ಹೊತ್ತಿಗೆ ಹೀಗೆ ಕಾಡು ಪ್ರಾಣಿಗಳ ಹಾವಳಿಯಿಂದ ಕೃಷಿ ನಾಶವಾದರೆ ಕೃಷಿಕನ ವೇದನೆ ಯಾರ ಬಳಿ ಹೇಳುವುದು ? ಕೃಷಿ ನಾಶದ ಚಿತ್ರಣವೇ ಭಯಾನಕವಾಗಿದೆ. ಅನೇಕ ವರ್ಷಗಳ ಶ್ರಮ ವ್ಯರ್ಥವಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಇಲಾಖೆಗಳಿಗೆ, ಸರಕಾರಕ್ಕೆ, ಜನನಾಯಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕೃಷಿ ನಾಶಕ್ಕೆ ಸೂಕ್ತ ಪರಿಹಾರ ಕ್ರಮದ ಬಗ್ಗೆ ಈಗ ಚಿಂತನೆ ನಡೆಯಬೇಕಿದೆ. ಸುಳ್ಯದ ಸಚಿವರೇ ಈಗ ಇರುವುದರಿಂದ ಸೂಕ್ತ ಕ್ರಮಕ್ಕಾಗಿ ಸರಕಾರವನ್ನು  ಒತ್ತಾಯ ಮಾಡಬೇಕು ಎಂದು ಕೃಷಿಕರು ಹೇಳುತ್ತಾರೆ.

ವಿವಿದೆಡೆ ತೋಟದಲ್ಲಿ ಓಡಾಡುವ ಕಾಡೆಮ್ಮೆ ಹಾಗೂ ಆನೆಗಳು ಹಿಂಡುಗಳ ವಿಡಿಯೋ :

Advertisement

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

10 mins ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

48 mins ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

2 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

11 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

11 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

11 hours ago