Advertisement
MIRROR FOCUS

ಕಾಡಾನೆ ದಾಳಿಗೆ ಕೃಷಿ ನಾಶ | ಮನಕಲುವ ದೃಶ್ಯ ಇದು | ಕೃಷಿಕರ ಈ ನೋವಿಗೆ ಪರಿಹಾರ ಎಂದು ?

Share

ಕೈ ಕೆಸರಾದರೆ ಬಾಯಿ ಮೊಸರು ಬಹಳ ಹಳೆಯ ಗಾದೆ ಮಾತು. ಈಗ ಕೈ ಕೆಸರಾದರೆ ಬಾಯಿ ಮೊಸರು ಎನ್ನಲು ಕೆಲ ಕಾಲ ಬೇಕಾಗುತ್ತದೆ. ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ  ಕೃಷಿ ಫಲ ನೀಡಿದರೂ ಕೈಗೆ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಕೃಷಿ ಉಳಿಸುವುದೇ ಈಗ ಹಲವು ಕಡೆ ಕೃಷಿಕರಿಗೆ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಕಾಡು ಪ್ರಾಣಿಗಳ ಹಾವಳಿ, ಅದರಲ್ಲೂ ಕಾಡಾನೆ ಹಾವಳಿ.

Advertisement

 

ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ  ಕಾಡಾನೆ ಹಾವಳಿ ಇದೆ. ಮಂಡೆಕೋಲು ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರವಿದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಗುತ್ತದೆ. ಈಚೆಗೆ ಆನೆಗಳ ಹಿಂಡೇ ಕಂಡುಬಂದಿತ್ತು.  ಅದೇ ಮಾದರಿಯ ಪರಿಸ್ಥಿತಿ ಈಗ ಕೊಲ್ಲಮೊಗ್ರ , ಬಾಳುಗೋಡು, ಕಲ್ಮಕಾರು, ಕಟ್ಟ ಪ್ರದೇಶದಲ್ಲಿ ಕಂಡುಬಂದಿದೆ. ಕಾಡಾನೆ ಮಾತ್ರವಲ್ಲ ಕಾಡುಕೋಣ, ಕಾಡೆಮ್ಮೆ, ಕಡವೆ, ಮಂಗಗಳ ಕಾಟವೂ ಸುಳ್ಯ ತಾಲೂಕಿನ ಕೃಷಿಕರಿಗೆ ವಿಪರೀತವಾಗಿ ಹಲವು ವರ್ಷಗಳಿಂದ ಬಾಧಿಸುತ್ತಿದೆ. ಇತ್ತೀಚೆಗೆ ಮಂಗಗಳ ಕಾಟಗಳಿಂದ ತೆಂಗಿನಕಾಯಿ ಫಸಲೇ ಕಡಿಮೆಯಾಗಿದೆ. ಈಗ ಆನೆಗಳ ಕಾಟದಿಂದ ಕೃಷಿಕರ ಬದುಕಿನ ಬೆಳೆಯಾದ ಅಡಿಕೆ, ತೆಂಗು ಕೂಡಾ ನಾಶವಾಗುತ್ತಿದೆ.

ಕೊಲ್ಲಮೊಗ್ರ , ಕಟ್ಟ ಪ್ರದೇಶದಲ್ಲಿ ಈಚೆಗ ಕಾಡಾೆನೆಗಳ ಹಾವಳಿ ಹೆಚ್ಚಾಗಿದ್ದು ಚೆನ್ನಾಗಿ ಬೆಳೆದಿರುವ ಕೃಷಿ ಕೈಗೆ ಸಿಗುವ ಮೊದಲೇ ಕಾಡು ಪ್ರಾಣಿಗಳಿಂದ ಹಾನಿಗೊಳಗಾಗುತ್ತಿದೆ. ಕಟ್ಟದ ಶಂಕರ ಭಟ್‌ ಎಂಬವರ ತೋಟಕ್ಕೆ ಈಚೆಗೆ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ, ತೆಂಗು ಸಹಿತ ಕೃಷಿಯನ್ನು ನಾಶ ಮಾಡಿದೆ. ಕೃಷಿ ಮಾಡಿ ಫಸಲು ಬರುವ ಹೊತ್ತಿಗೆ ಹೀಗೆ ಕಾಡು ಪ್ರಾಣಿಗಳ ಹಾವಳಿಯಿಂದ ಕೃಷಿ ನಾಶವಾದರೆ ಕೃಷಿಕನ ವೇದನೆ ಯಾರ ಬಳಿ ಹೇಳುವುದು ? ಕೃಷಿ ನಾಶದ ಚಿತ್ರಣವೇ ಭಯಾನಕವಾಗಿದೆ. ಅನೇಕ ವರ್ಷಗಳ ಶ್ರಮ ವ್ಯರ್ಥವಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಇಲಾಖೆಗಳಿಗೆ, ಸರಕಾರಕ್ಕೆ, ಜನನಾಯಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕೃಷಿ ನಾಶಕ್ಕೆ ಸೂಕ್ತ ಪರಿಹಾರ ಕ್ರಮದ ಬಗ್ಗೆ ಈಗ ಚಿಂತನೆ ನಡೆಯಬೇಕಿದೆ. ಸುಳ್ಯದ ಸಚಿವರೇ ಈಗ ಇರುವುದರಿಂದ ಸೂಕ್ತ ಕ್ರಮಕ್ಕಾಗಿ ಸರಕಾರವನ್ನು  ಒತ್ತಾಯ ಮಾಡಬೇಕು ಎಂದು ಕೃಷಿಕರು ಹೇಳುತ್ತಾರೆ.

ವಿವಿದೆಡೆ ತೋಟದಲ್ಲಿ ಓಡಾಡುವ ಕಾಡೆಮ್ಮೆ ಹಾಗೂ ಆನೆಗಳು ಹಿಂಡುಗಳ ವಿಡಿಯೋ :

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

50 minutes ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

5 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

5 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

6 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

17 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago