ಕೈ ಕೆಸರಾದರೆ ಬಾಯಿ ಮೊಸರು ಬಹಳ ಹಳೆಯ ಗಾದೆ ಮಾತು. ಈಗ ಕೈ ಕೆಸರಾದರೆ ಬಾಯಿ ಮೊಸರು ಎನ್ನಲು ಕೆಲ ಕಾಲ ಬೇಕಾಗುತ್ತದೆ. ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಕೃಷಿ ಫಲ ನೀಡಿದರೂ ಕೈಗೆ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಕೃಷಿ ಉಳಿಸುವುದೇ ಈಗ ಹಲವು ಕಡೆ ಕೃಷಿಕರಿಗೆ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಕಾಡು ಪ್ರಾಣಿಗಳ ಹಾವಳಿ, ಅದರಲ್ಲೂ ಕಾಡಾನೆ ಹಾವಳಿ.
ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಕಾಡಾನೆ ಹಾವಳಿ ಇದೆ. ಮಂಡೆಕೋಲು ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರವಿದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಗುತ್ತದೆ. ಈಚೆಗೆ ಆನೆಗಳ ಹಿಂಡೇ ಕಂಡುಬಂದಿತ್ತು. ಅದೇ ಮಾದರಿಯ ಪರಿಸ್ಥಿತಿ ಈಗ ಕೊಲ್ಲಮೊಗ್ರ , ಬಾಳುಗೋಡು, ಕಲ್ಮಕಾರು, ಕಟ್ಟ ಪ್ರದೇಶದಲ್ಲಿ ಕಂಡುಬಂದಿದೆ. ಕಾಡಾನೆ ಮಾತ್ರವಲ್ಲ ಕಾಡುಕೋಣ, ಕಾಡೆಮ್ಮೆ, ಕಡವೆ, ಮಂಗಗಳ ಕಾಟವೂ ಸುಳ್ಯ ತಾಲೂಕಿನ ಕೃಷಿಕರಿಗೆ ವಿಪರೀತವಾಗಿ ಹಲವು ವರ್ಷಗಳಿಂದ ಬಾಧಿಸುತ್ತಿದೆ. ಇತ್ತೀಚೆಗೆ ಮಂಗಗಳ ಕಾಟಗಳಿಂದ ತೆಂಗಿನಕಾಯಿ ಫಸಲೇ ಕಡಿಮೆಯಾಗಿದೆ. ಈಗ ಆನೆಗಳ ಕಾಟದಿಂದ ಕೃಷಿಕರ ಬದುಕಿನ ಬೆಳೆಯಾದ ಅಡಿಕೆ, ತೆಂಗು ಕೂಡಾ ನಾಶವಾಗುತ್ತಿದೆ.
ಕೊಲ್ಲಮೊಗ್ರ , ಕಟ್ಟ ಪ್ರದೇಶದಲ್ಲಿ ಈಚೆಗ ಕಾಡಾೆನೆಗಳ ಹಾವಳಿ ಹೆಚ್ಚಾಗಿದ್ದು ಚೆನ್ನಾಗಿ ಬೆಳೆದಿರುವ ಕೃಷಿ ಕೈಗೆ ಸಿಗುವ ಮೊದಲೇ ಕಾಡು ಪ್ರಾಣಿಗಳಿಂದ ಹಾನಿಗೊಳಗಾಗುತ್ತಿದೆ. ಕಟ್ಟದ ಶಂಕರ ಭಟ್ ಎಂಬವರ ತೋಟಕ್ಕೆ ಈಚೆಗೆ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ, ತೆಂಗು ಸಹಿತ ಕೃಷಿಯನ್ನು ನಾಶ ಮಾಡಿದೆ. ಕೃಷಿ ಮಾಡಿ ಫಸಲು ಬರುವ ಹೊತ್ತಿಗೆ ಹೀಗೆ ಕಾಡು ಪ್ರಾಣಿಗಳ ಹಾವಳಿಯಿಂದ ಕೃಷಿ ನಾಶವಾದರೆ ಕೃಷಿಕನ ವೇದನೆ ಯಾರ ಬಳಿ ಹೇಳುವುದು ? ಕೃಷಿ ನಾಶದ ಚಿತ್ರಣವೇ ಭಯಾನಕವಾಗಿದೆ. ಅನೇಕ ವರ್ಷಗಳ ಶ್ರಮ ವ್ಯರ್ಥವಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಇಲಾಖೆಗಳಿಗೆ, ಸರಕಾರಕ್ಕೆ, ಜನನಾಯಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕೃಷಿ ನಾಶಕ್ಕೆ ಸೂಕ್ತ ಪರಿಹಾರ ಕ್ರಮದ ಬಗ್ಗೆ ಈಗ ಚಿಂತನೆ ನಡೆಯಬೇಕಿದೆ. ಸುಳ್ಯದ ಸಚಿವರೇ ಈಗ ಇರುವುದರಿಂದ ಸೂಕ್ತ ಕ್ರಮಕ್ಕಾಗಿ ಸರಕಾರವನ್ನು ಒತ್ತಾಯ ಮಾಡಬೇಕು ಎಂದು ಕೃಷಿಕರು ಹೇಳುತ್ತಾರೆ.
ವಿವಿದೆಡೆ ತೋಟದಲ್ಲಿ ಓಡಾಡುವ ಕಾಡೆಮ್ಮೆ ಹಾಗೂ ಆನೆಗಳು ಹಿಂಡುಗಳ ವಿಡಿಯೋ :
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…