Advertisement
MIRROR FOCUS

ಕಾಡಾನೆ ದಾಳಿಗೆ ಕೃಷಿ ನಾಶ | ಮನಕಲುವ ದೃಶ್ಯ ಇದು | ಕೃಷಿಕರ ಈ ನೋವಿಗೆ ಪರಿಹಾರ ಎಂದು ?

Share

ಕೈ ಕೆಸರಾದರೆ ಬಾಯಿ ಮೊಸರು ಬಹಳ ಹಳೆಯ ಗಾದೆ ಮಾತು. ಈಗ ಕೈ ಕೆಸರಾದರೆ ಬಾಯಿ ಮೊಸರು ಎನ್ನಲು ಕೆಲ ಕಾಲ ಬೇಕಾಗುತ್ತದೆ. ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ  ಕೃಷಿ ಫಲ ನೀಡಿದರೂ ಕೈಗೆ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಕೃಷಿ ಉಳಿಸುವುದೇ ಈಗ ಹಲವು ಕಡೆ ಕೃಷಿಕರಿಗೆ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಕಾಡು ಪ್ರಾಣಿಗಳ ಹಾವಳಿ, ಅದರಲ್ಲೂ ಕಾಡಾನೆ ಹಾವಳಿ.

 

ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ  ಕಾಡಾನೆ ಹಾವಳಿ ಇದೆ. ಮಂಡೆಕೋಲು ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರವಿದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಗುತ್ತದೆ. ಈಚೆಗೆ ಆನೆಗಳ ಹಿಂಡೇ ಕಂಡುಬಂದಿತ್ತು.  ಅದೇ ಮಾದರಿಯ ಪರಿಸ್ಥಿತಿ ಈಗ ಕೊಲ್ಲಮೊಗ್ರ , ಬಾಳುಗೋಡು, ಕಲ್ಮಕಾರು, ಕಟ್ಟ ಪ್ರದೇಶದಲ್ಲಿ ಕಂಡುಬಂದಿದೆ. ಕಾಡಾನೆ ಮಾತ್ರವಲ್ಲ ಕಾಡುಕೋಣ, ಕಾಡೆಮ್ಮೆ, ಕಡವೆ, ಮಂಗಗಳ ಕಾಟವೂ ಸುಳ್ಯ ತಾಲೂಕಿನ ಕೃಷಿಕರಿಗೆ ವಿಪರೀತವಾಗಿ ಹಲವು ವರ್ಷಗಳಿಂದ ಬಾಧಿಸುತ್ತಿದೆ. ಇತ್ತೀಚೆಗೆ ಮಂಗಗಳ ಕಾಟಗಳಿಂದ ತೆಂಗಿನಕಾಯಿ ಫಸಲೇ ಕಡಿಮೆಯಾಗಿದೆ. ಈಗ ಆನೆಗಳ ಕಾಟದಿಂದ ಕೃಷಿಕರ ಬದುಕಿನ ಬೆಳೆಯಾದ ಅಡಿಕೆ, ತೆಂಗು ಕೂಡಾ ನಾಶವಾಗುತ್ತಿದೆ.

ಕೊಲ್ಲಮೊಗ್ರ , ಕಟ್ಟ ಪ್ರದೇಶದಲ್ಲಿ ಈಚೆಗ ಕಾಡಾೆನೆಗಳ ಹಾವಳಿ ಹೆಚ್ಚಾಗಿದ್ದು ಚೆನ್ನಾಗಿ ಬೆಳೆದಿರುವ ಕೃಷಿ ಕೈಗೆ ಸಿಗುವ ಮೊದಲೇ ಕಾಡು ಪ್ರಾಣಿಗಳಿಂದ ಹಾನಿಗೊಳಗಾಗುತ್ತಿದೆ. ಕಟ್ಟದ ಶಂಕರ ಭಟ್‌ ಎಂಬವರ ತೋಟಕ್ಕೆ ಈಚೆಗೆ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ, ತೆಂಗು ಸಹಿತ ಕೃಷಿಯನ್ನು ನಾಶ ಮಾಡಿದೆ. ಕೃಷಿ ಮಾಡಿ ಫಸಲು ಬರುವ ಹೊತ್ತಿಗೆ ಹೀಗೆ ಕಾಡು ಪ್ರಾಣಿಗಳ ಹಾವಳಿಯಿಂದ ಕೃಷಿ ನಾಶವಾದರೆ ಕೃಷಿಕನ ವೇದನೆ ಯಾರ ಬಳಿ ಹೇಳುವುದು ? ಕೃಷಿ ನಾಶದ ಚಿತ್ರಣವೇ ಭಯಾನಕವಾಗಿದೆ. ಅನೇಕ ವರ್ಷಗಳ ಶ್ರಮ ವ್ಯರ್ಥವಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಇಲಾಖೆಗಳಿಗೆ, ಸರಕಾರಕ್ಕೆ, ಜನನಾಯಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕೃಷಿ ನಾಶಕ್ಕೆ ಸೂಕ್ತ ಪರಿಹಾರ ಕ್ರಮದ ಬಗ್ಗೆ ಈಗ ಚಿಂತನೆ ನಡೆಯಬೇಕಿದೆ. ಸುಳ್ಯದ ಸಚಿವರೇ ಈಗ ಇರುವುದರಿಂದ ಸೂಕ್ತ ಕ್ರಮಕ್ಕಾಗಿ ಸರಕಾರವನ್ನು  ಒತ್ತಾಯ ಮಾಡಬೇಕು ಎಂದು ಕೃಷಿಕರು ಹೇಳುತ್ತಾರೆ.

ವಿವಿದೆಡೆ ತೋಟದಲ್ಲಿ ಓಡಾಡುವ ಕಾಡೆಮ್ಮೆ ಹಾಗೂ ಆನೆಗಳು ಹಿಂಡುಗಳ ವಿಡಿಯೋ :

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

16 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

17 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

17 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago