ಕೈ ಕೆಸರಾದರೆ ಬಾಯಿ ಮೊಸರು ಬಹಳ ಹಳೆಯ ಗಾದೆ ಮಾತು. ಈಗ ಕೈ ಕೆಸರಾದರೆ ಬಾಯಿ ಮೊಸರು ಎನ್ನಲು ಕೆಲ ಕಾಲ ಬೇಕಾಗುತ್ತದೆ. ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಕೃಷಿ ಫಲ ನೀಡಿದರೂ ಕೈಗೆ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಕೃಷಿ ಉಳಿಸುವುದೇ ಈಗ ಹಲವು ಕಡೆ ಕೃಷಿಕರಿಗೆ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಕಾಡು ಪ್ರಾಣಿಗಳ ಹಾವಳಿ, ಅದರಲ್ಲೂ ಕಾಡಾನೆ ಹಾವಳಿ.
ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಕಾಡಾನೆ ಹಾವಳಿ ಇದೆ. ಮಂಡೆಕೋಲು ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರವಿದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಗುತ್ತದೆ. ಈಚೆಗೆ ಆನೆಗಳ ಹಿಂಡೇ ಕಂಡುಬಂದಿತ್ತು. ಅದೇ ಮಾದರಿಯ ಪರಿಸ್ಥಿತಿ ಈಗ ಕೊಲ್ಲಮೊಗ್ರ , ಬಾಳುಗೋಡು, ಕಲ್ಮಕಾರು, ಕಟ್ಟ ಪ್ರದೇಶದಲ್ಲಿ ಕಂಡುಬಂದಿದೆ. ಕಾಡಾನೆ ಮಾತ್ರವಲ್ಲ ಕಾಡುಕೋಣ, ಕಾಡೆಮ್ಮೆ, ಕಡವೆ, ಮಂಗಗಳ ಕಾಟವೂ ಸುಳ್ಯ ತಾಲೂಕಿನ ಕೃಷಿಕರಿಗೆ ವಿಪರೀತವಾಗಿ ಹಲವು ವರ್ಷಗಳಿಂದ ಬಾಧಿಸುತ್ತಿದೆ. ಇತ್ತೀಚೆಗೆ ಮಂಗಗಳ ಕಾಟಗಳಿಂದ ತೆಂಗಿನಕಾಯಿ ಫಸಲೇ ಕಡಿಮೆಯಾಗಿದೆ. ಈಗ ಆನೆಗಳ ಕಾಟದಿಂದ ಕೃಷಿಕರ ಬದುಕಿನ ಬೆಳೆಯಾದ ಅಡಿಕೆ, ತೆಂಗು ಕೂಡಾ ನಾಶವಾಗುತ್ತಿದೆ.
ಕೊಲ್ಲಮೊಗ್ರ , ಕಟ್ಟ ಪ್ರದೇಶದಲ್ಲಿ ಈಚೆಗ ಕಾಡಾೆನೆಗಳ ಹಾವಳಿ ಹೆಚ್ಚಾಗಿದ್ದು ಚೆನ್ನಾಗಿ ಬೆಳೆದಿರುವ ಕೃಷಿ ಕೈಗೆ ಸಿಗುವ ಮೊದಲೇ ಕಾಡು ಪ್ರಾಣಿಗಳಿಂದ ಹಾನಿಗೊಳಗಾಗುತ್ತಿದೆ. ಕಟ್ಟದ ಶಂಕರ ಭಟ್ ಎಂಬವರ ತೋಟಕ್ಕೆ ಈಚೆಗೆ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ, ತೆಂಗು ಸಹಿತ ಕೃಷಿಯನ್ನು ನಾಶ ಮಾಡಿದೆ. ಕೃಷಿ ಮಾಡಿ ಫಸಲು ಬರುವ ಹೊತ್ತಿಗೆ ಹೀಗೆ ಕಾಡು ಪ್ರಾಣಿಗಳ ಹಾವಳಿಯಿಂದ ಕೃಷಿ ನಾಶವಾದರೆ ಕೃಷಿಕನ ವೇದನೆ ಯಾರ ಬಳಿ ಹೇಳುವುದು ? ಕೃಷಿ ನಾಶದ ಚಿತ್ರಣವೇ ಭಯಾನಕವಾಗಿದೆ. ಅನೇಕ ವರ್ಷಗಳ ಶ್ರಮ ವ್ಯರ್ಥವಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಇಲಾಖೆಗಳಿಗೆ, ಸರಕಾರಕ್ಕೆ, ಜನನಾಯಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕೃಷಿ ನಾಶಕ್ಕೆ ಸೂಕ್ತ ಪರಿಹಾರ ಕ್ರಮದ ಬಗ್ಗೆ ಈಗ ಚಿಂತನೆ ನಡೆಯಬೇಕಿದೆ. ಸುಳ್ಯದ ಸಚಿವರೇ ಈಗ ಇರುವುದರಿಂದ ಸೂಕ್ತ ಕ್ರಮಕ್ಕಾಗಿ ಸರಕಾರವನ್ನು ಒತ್ತಾಯ ಮಾಡಬೇಕು ಎಂದು ಕೃಷಿಕರು ಹೇಳುತ್ತಾರೆ.
ವಿವಿದೆಡೆ ತೋಟದಲ್ಲಿ ಓಡಾಡುವ ಕಾಡೆಮ್ಮೆ ಹಾಗೂ ಆನೆಗಳು ಹಿಂಡುಗಳ ವಿಡಿಯೋ :
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…