Advertisement
MIRROR FOCUS

ಕಾಡಾನೆ ದಾಳಿಗೆ ಕೃಷಿ ನಾಶ | ಮನಕಲುವ ದೃಶ್ಯ ಇದು | ಕೃಷಿಕರ ಈ ನೋವಿಗೆ ಪರಿಹಾರ ಎಂದು ?

Share

ಕೈ ಕೆಸರಾದರೆ ಬಾಯಿ ಮೊಸರು ಬಹಳ ಹಳೆಯ ಗಾದೆ ಮಾತು. ಈಗ ಕೈ ಕೆಸರಾದರೆ ಬಾಯಿ ಮೊಸರು ಎನ್ನಲು ಕೆಲ ಕಾಲ ಬೇಕಾಗುತ್ತದೆ. ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ  ಕೃಷಿ ಫಲ ನೀಡಿದರೂ ಕೈಗೆ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಕೃಷಿ ಉಳಿಸುವುದೇ ಈಗ ಹಲವು ಕಡೆ ಕೃಷಿಕರಿಗೆ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಕಾಡು ಪ್ರಾಣಿಗಳ ಹಾವಳಿ, ಅದರಲ್ಲೂ ಕಾಡಾನೆ ಹಾವಳಿ.

 

ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ  ಕಾಡಾನೆ ಹಾವಳಿ ಇದೆ. ಮಂಡೆಕೋಲು ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರವಿದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಗುತ್ತದೆ. ಈಚೆಗೆ ಆನೆಗಳ ಹಿಂಡೇ ಕಂಡುಬಂದಿತ್ತು.  ಅದೇ ಮಾದರಿಯ ಪರಿಸ್ಥಿತಿ ಈಗ ಕೊಲ್ಲಮೊಗ್ರ , ಬಾಳುಗೋಡು, ಕಲ್ಮಕಾರು, ಕಟ್ಟ ಪ್ರದೇಶದಲ್ಲಿ ಕಂಡುಬಂದಿದೆ. ಕಾಡಾನೆ ಮಾತ್ರವಲ್ಲ ಕಾಡುಕೋಣ, ಕಾಡೆಮ್ಮೆ, ಕಡವೆ, ಮಂಗಗಳ ಕಾಟವೂ ಸುಳ್ಯ ತಾಲೂಕಿನ ಕೃಷಿಕರಿಗೆ ವಿಪರೀತವಾಗಿ ಹಲವು ವರ್ಷಗಳಿಂದ ಬಾಧಿಸುತ್ತಿದೆ. ಇತ್ತೀಚೆಗೆ ಮಂಗಗಳ ಕಾಟಗಳಿಂದ ತೆಂಗಿನಕಾಯಿ ಫಸಲೇ ಕಡಿಮೆಯಾಗಿದೆ. ಈಗ ಆನೆಗಳ ಕಾಟದಿಂದ ಕೃಷಿಕರ ಬದುಕಿನ ಬೆಳೆಯಾದ ಅಡಿಕೆ, ತೆಂಗು ಕೂಡಾ ನಾಶವಾಗುತ್ತಿದೆ.

ಕೊಲ್ಲಮೊಗ್ರ , ಕಟ್ಟ ಪ್ರದೇಶದಲ್ಲಿ ಈಚೆಗ ಕಾಡಾೆನೆಗಳ ಹಾವಳಿ ಹೆಚ್ಚಾಗಿದ್ದು ಚೆನ್ನಾಗಿ ಬೆಳೆದಿರುವ ಕೃಷಿ ಕೈಗೆ ಸಿಗುವ ಮೊದಲೇ ಕಾಡು ಪ್ರಾಣಿಗಳಿಂದ ಹಾನಿಗೊಳಗಾಗುತ್ತಿದೆ. ಕಟ್ಟದ ಶಂಕರ ಭಟ್‌ ಎಂಬವರ ತೋಟಕ್ಕೆ ಈಚೆಗೆ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ, ತೆಂಗು ಸಹಿತ ಕೃಷಿಯನ್ನು ನಾಶ ಮಾಡಿದೆ. ಕೃಷಿ ಮಾಡಿ ಫಸಲು ಬರುವ ಹೊತ್ತಿಗೆ ಹೀಗೆ ಕಾಡು ಪ್ರಾಣಿಗಳ ಹಾವಳಿಯಿಂದ ಕೃಷಿ ನಾಶವಾದರೆ ಕೃಷಿಕನ ವೇದನೆ ಯಾರ ಬಳಿ ಹೇಳುವುದು ? ಕೃಷಿ ನಾಶದ ಚಿತ್ರಣವೇ ಭಯಾನಕವಾಗಿದೆ. ಅನೇಕ ವರ್ಷಗಳ ಶ್ರಮ ವ್ಯರ್ಥವಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಇಲಾಖೆಗಳಿಗೆ, ಸರಕಾರಕ್ಕೆ, ಜನನಾಯಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕೃಷಿ ನಾಶಕ್ಕೆ ಸೂಕ್ತ ಪರಿಹಾರ ಕ್ರಮದ ಬಗ್ಗೆ ಈಗ ಚಿಂತನೆ ನಡೆಯಬೇಕಿದೆ. ಸುಳ್ಯದ ಸಚಿವರೇ ಈಗ ಇರುವುದರಿಂದ ಸೂಕ್ತ ಕ್ರಮಕ್ಕಾಗಿ ಸರಕಾರವನ್ನು  ಒತ್ತಾಯ ಮಾಡಬೇಕು ಎಂದು ಕೃಷಿಕರು ಹೇಳುತ್ತಾರೆ.

ವಿವಿದೆಡೆ ತೋಟದಲ್ಲಿ ಓಡಾಡುವ ಕಾಡೆಮ್ಮೆ ಹಾಗೂ ಆನೆಗಳು ಹಿಂಡುಗಳ ವಿಡಿಯೋ :

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

5 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

9 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago