ಕೈ ಕೆಸರಾದರೆ ಬಾಯಿ ಮೊಸರು ಬಹಳ ಹಳೆಯ ಗಾದೆ ಮಾತು. ಈಗ ಕೈ ಕೆಸರಾದರೆ ಬಾಯಿ ಮೊಸರು ಎನ್ನಲು ಕೆಲ ಕಾಲ ಬೇಕಾಗುತ್ತದೆ. ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಕೃಷಿ ಫಲ ನೀಡಿದರೂ ಕೈಗೆ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಕೃಷಿ ಉಳಿಸುವುದೇ ಈಗ ಹಲವು ಕಡೆ ಕೃಷಿಕರಿಗೆ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಕಾಡು ಪ್ರಾಣಿಗಳ ಹಾವಳಿ, ಅದರಲ್ಲೂ ಕಾಡಾನೆ ಹಾವಳಿ.
ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಕಾಡಾನೆ ಹಾವಳಿ ಇದೆ. ಮಂಡೆಕೋಲು ಗ್ರಾಮದಲ್ಲಿ ಕಾಡಾನೆ ಹಾವಳಿ ತೀವ್ರವಿದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಗುತ್ತದೆ. ಈಚೆಗೆ ಆನೆಗಳ ಹಿಂಡೇ ಕಂಡುಬಂದಿತ್ತು. ಅದೇ ಮಾದರಿಯ ಪರಿಸ್ಥಿತಿ ಈಗ ಕೊಲ್ಲಮೊಗ್ರ , ಬಾಳುಗೋಡು, ಕಲ್ಮಕಾರು, ಕಟ್ಟ ಪ್ರದೇಶದಲ್ಲಿ ಕಂಡುಬಂದಿದೆ. ಕಾಡಾನೆ ಮಾತ್ರವಲ್ಲ ಕಾಡುಕೋಣ, ಕಾಡೆಮ್ಮೆ, ಕಡವೆ, ಮಂಗಗಳ ಕಾಟವೂ ಸುಳ್ಯ ತಾಲೂಕಿನ ಕೃಷಿಕರಿಗೆ ವಿಪರೀತವಾಗಿ ಹಲವು ವರ್ಷಗಳಿಂದ ಬಾಧಿಸುತ್ತಿದೆ. ಇತ್ತೀಚೆಗೆ ಮಂಗಗಳ ಕಾಟಗಳಿಂದ ತೆಂಗಿನಕಾಯಿ ಫಸಲೇ ಕಡಿಮೆಯಾಗಿದೆ. ಈಗ ಆನೆಗಳ ಕಾಟದಿಂದ ಕೃಷಿಕರ ಬದುಕಿನ ಬೆಳೆಯಾದ ಅಡಿಕೆ, ತೆಂಗು ಕೂಡಾ ನಾಶವಾಗುತ್ತಿದೆ.
ಕೊಲ್ಲಮೊಗ್ರ , ಕಟ್ಟ ಪ್ರದೇಶದಲ್ಲಿ ಈಚೆಗ ಕಾಡಾೆನೆಗಳ ಹಾವಳಿ ಹೆಚ್ಚಾಗಿದ್ದು ಚೆನ್ನಾಗಿ ಬೆಳೆದಿರುವ ಕೃಷಿ ಕೈಗೆ ಸಿಗುವ ಮೊದಲೇ ಕಾಡು ಪ್ರಾಣಿಗಳಿಂದ ಹಾನಿಗೊಳಗಾಗುತ್ತಿದೆ. ಕಟ್ಟದ ಶಂಕರ ಭಟ್ ಎಂಬವರ ತೋಟಕ್ಕೆ ಈಚೆಗೆ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ, ತೆಂಗು ಸಹಿತ ಕೃಷಿಯನ್ನು ನಾಶ ಮಾಡಿದೆ. ಕೃಷಿ ಮಾಡಿ ಫಸಲು ಬರುವ ಹೊತ್ತಿಗೆ ಹೀಗೆ ಕಾಡು ಪ್ರಾಣಿಗಳ ಹಾವಳಿಯಿಂದ ಕೃಷಿ ನಾಶವಾದರೆ ಕೃಷಿಕನ ವೇದನೆ ಯಾರ ಬಳಿ ಹೇಳುವುದು ? ಕೃಷಿ ನಾಶದ ಚಿತ್ರಣವೇ ಭಯಾನಕವಾಗಿದೆ. ಅನೇಕ ವರ್ಷಗಳ ಶ್ರಮ ವ್ಯರ್ಥವಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಇಲಾಖೆಗಳಿಗೆ, ಸರಕಾರಕ್ಕೆ, ಜನನಾಯಕರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕೃಷಿ ನಾಶಕ್ಕೆ ಸೂಕ್ತ ಪರಿಹಾರ ಕ್ರಮದ ಬಗ್ಗೆ ಈಗ ಚಿಂತನೆ ನಡೆಯಬೇಕಿದೆ. ಸುಳ್ಯದ ಸಚಿವರೇ ಈಗ ಇರುವುದರಿಂದ ಸೂಕ್ತ ಕ್ರಮಕ್ಕಾಗಿ ಸರಕಾರವನ್ನು ಒತ್ತಾಯ ಮಾಡಬೇಕು ಎಂದು ಕೃಷಿಕರು ಹೇಳುತ್ತಾರೆ.
ವಿವಿದೆಡೆ ತೋಟದಲ್ಲಿ ಓಡಾಡುವ ಕಾಡೆಮ್ಮೆ ಹಾಗೂ ಆನೆಗಳು ಹಿಂಡುಗಳ ವಿಡಿಯೋ :
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…