ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

June 25, 2025
4:10 PM

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೊಲಗಳಲ್ಲಿ ಬಿತ್ತಿದ  ಗೋವಿನಜೋಳ, ಸೂರ್ಯಕಾಂತಿ, ತೊಗರಿ, ಶೇಂಗಾ, ಹತ್ತಿ ಹಾಗೂ ಇತರೆ ಬೆಳೆಗಳಿಗೆ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಒಂದು ಎಕರೆ ಬೆಳೆಗೆ ಸುಮಾರು 500 ಮೀಲಿ ಲೀಟರ್  ನ್ಯಾನೋ ಯೂರಿಯಾ ಬಳಸಬೇಕೆಂದು  ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ  ತಾರಾಮಣಿ ಜಿ. ಹೆಚ್. ಹೇಳಿದ್ದಾರೆ. ಬೆಳೆಗಳಿಗೆ ಹರಳು ರೂಪದ ಯೂರಿಯಾ ಬಳಸುವುದರಿಂದ ಬೇಕಾದ ಪೋಷಕಾಂಶಗಳು ಕೇವಲ ಶೇಕಡ 50 ರಷ್ಟು ಮಾತ್ರ ದೊರೆಯುವ ಸಾಧ್ಯತೆಯಿದೆ. ಚಿಕ್ಕ ಗಾತ್ರದ ಕಣಗಳನ್ನು ಹೊಂದಿರುವ ನ್ಯಾನೋ ಯೂರಿಯಾ ಬಳಸುವುದರಿಂದ ಬೆಳೆಗಳಿಂದ ಶೇಕಡ 80 ರಷ್ಟು ಪೋಷಕಾಂಶಗಳು ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?
August 17, 2026
9:00 PM
by: ದ ರೂರಲ್ ಮಿರರ್.ಕಾಂ
ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು
August 17, 2026
8:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror