ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೊಲಗಳಲ್ಲಿ ಬಿತ್ತಿದ ಗೋವಿನಜೋಳ, ಸೂರ್ಯಕಾಂತಿ, ತೊಗರಿ, ಶೇಂಗಾ, ಹತ್ತಿ ಹಾಗೂ ಇತರೆ ಬೆಳೆಗಳಿಗೆ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಒಂದು ಎಕರೆ ಬೆಳೆಗೆ ಸುಮಾರು 500 ಮೀಲಿ ಲೀಟರ್ ನ್ಯಾನೋ ಯೂರಿಯಾ ಬಳಸಬೇಕೆಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ. ಹೆಚ್. ಹೇಳಿದ್ದಾರೆ. ಬೆಳೆಗಳಿಗೆ ಹರಳು ರೂಪದ ಯೂರಿಯಾ ಬಳಸುವುದರಿಂದ ಬೇಕಾದ ಪೋಷಕಾಂಶಗಳು ಕೇವಲ ಶೇಕಡ 50 ರಷ್ಟು ಮಾತ್ರ ದೊರೆಯುವ ಸಾಧ್ಯತೆಯಿದೆ. ಚಿಕ್ಕ ಗಾತ್ರದ ಕಣಗಳನ್ನು ಹೊಂದಿರುವ ನ್ಯಾನೋ ಯೂರಿಯಾ ಬಳಸುವುದರಿಂದ ಬೆಳೆಗಳಿಂದ ಶೇಕಡ 80 ರಷ್ಟು ಪೋಷಕಾಂಶಗಳು ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…