ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೊಲಗಳಲ್ಲಿ ಬಿತ್ತಿದ ಗೋವಿನಜೋಳ, ಸೂರ್ಯಕಾಂತಿ, ತೊಗರಿ, ಶೇಂಗಾ, ಹತ್ತಿ ಹಾಗೂ ಇತರೆ ಬೆಳೆಗಳಿಗೆ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಒಂದು ಎಕರೆ ಬೆಳೆಗೆ ಸುಮಾರು 500 ಮೀಲಿ ಲೀಟರ್ ನ್ಯಾನೋ ಯೂರಿಯಾ ಬಳಸಬೇಕೆಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ. ಹೆಚ್. ಹೇಳಿದ್ದಾರೆ. ಬೆಳೆಗಳಿಗೆ ಹರಳು ರೂಪದ ಯೂರಿಯಾ ಬಳಸುವುದರಿಂದ ಬೇಕಾದ ಪೋಷಕಾಂಶಗಳು ಕೇವಲ ಶೇಕಡ 50 ರಷ್ಟು ಮಾತ್ರ ದೊರೆಯುವ ಸಾಧ್ಯತೆಯಿದೆ. ಚಿಕ್ಕ ಗಾತ್ರದ ಕಣಗಳನ್ನು ಹೊಂದಿರುವ ನ್ಯಾನೋ ಯೂರಿಯಾ ಬಳಸುವುದರಿಂದ ಬೆಳೆಗಳಿಂದ ಶೇಕಡ 80 ರಷ್ಟು ಪೋಷಕಾಂಶಗಳು ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…