Advertisement
The Rural Mirror ಕಾಳಜಿ

ವಿದ್ಯುತ್‌ ಬಾರದ ಪ್ರದೇಶದಲ್ಲಿ ಸೋಲಾರ್‌ ಪಂಪ್‌ | ಕೃಷಿಯಲ್ಲಿ ಯಶಸ್ಸು ಕಂಡ ಕೃಷಿಕ |

Share

ಇಂದು ಕೃಷಿ ಬೆಳವಣಿಗೆಗೆ ವಿದ್ಯುತ್‌ ಕೂಡಾ ಅನಿವಾರ್ಯವಾಗಿದೆ. ಕೃಷಿಗೆ ಸರಿಯಾಗಿ ನೀರುಣಿಸಲು ಪಂಪ್‌ ಅಗತ್ಯ, ಪಂಪ್‌ ಚಾಲೂ ಆಗಲು ಸಾಮಾನ್ಯವಾಗಿ ವಿದ್ಯುತ್‌ ಅಗತ್ಯ. ಆದರೆ ವಿದ್ಯುತ್‌ ತಂತಿ ಅಳವಡಿಕೆ ಮಾಡಲಾಗದ ಪ್ರದೇಶದಲ್ಲಿ ಕೃಷಿ ಬೆಳವಣಿಗೆ ಹೇಗೆ ? ಸೋಲಾರ್‌ ಪಂಪ್‌ ಅಳವಡಿಕೆ ಮೂಲಕ ಒರಿಸ್ಸಾದ ಹಳ್ಳಿ ಪ್ರದೇಶದ ಕೃಷಿಕರೊಬ್ಬರು ಯಶಸ್ಸು ಕಂಡಿದ್ದಾರೆ. …..ಮುಂದೆ ಓದಿ….

Advertisement

ದೇಶದಲ್ಲಿ ಕಾಡು ಪ್ರದೇಶಗಳ ನಡುವೆಯೇ ಅಥವಾ ತೀರಾ ಗ್ರಾಮೀಣ ಭಾಗದಲ್ಲಿಯೂ ಕೃಷಿ ಚಟುವಟಿಕೆ ನಡೆಯುತ್ತದೆ, ಅನೇಕರು ಗ್ರಾಮೀಣ ಭಾಗದಲ್ಲಿ ವಾಸ ಮಾಡುತ್ತಾರೆ.ಅಂತಹ ಪ್ರದೇಶಗಳಿಗೆ ಮೂಲಭೂತ ಸೌಲಭ್ಯ ಒದಗಿಸುವುದೇ ಸಾಹಸದ ಕೆಲಸ. ಇಂತಹ ಸಂದರ್ಭದಲ್ಲಿ ಸರ್ಕಾರವು ಸೋಲಾರ್‌ ಯಂತ್ರಗಳುಗಳಿಗೆ ಆದ್ಯತೆ ನೀಡಿ ಮೂಲಭೂತ ಸೇವೆ ಒದಗಿಸುವ ಕೆಲಸ ಮಾಡುತ್ತದೆ. ಅದೇ ರೀತಿ ಒಡಿಸ್ಸಾದ ನುವಾಪದ ಜಿಲ್ಲೆಯ ಸುಣಬೇಡ ಅಭಯಾರಣ್ಯದ ನಡುವಿನ ಹಳ್ಳಿಯಲ್ಲಿ ವಾಸಿಸುವ  ವಿಜಯ್ ಝಂಕರ್ ಅವರು ಸೋಲಾರ್‌ ಪಂಪ್‌ ಮೂಲಕ ತನ್ನ ಕೃಷಿಯನ್ನು ಯಶಸ್ಸುಗೊಳಿಸಿದ್ದಾರೆ.…..ಮುಂದೆ ಓದಿ….

 

ಒರಿಸ್ಸಾದ ಸುನಬೇಡ ಪಂಚಾಯತ್‌ನ ಸುನಬಹಲಿ ಗ್ರಾಮದ ವ್ಯಾಪ್ತಿಯ ಹಳ್ಳಿಗಾಡಿನಲ್ಲಿರುವ ವಿಜಯ್ ಝಂಕರ್ ಅವರು ಭತ್ತ ಸೇರಿದಂತೆ ಇತರ ಕೃಷಿ ಮಾಡುತ್ತಾರೆ. ಸಾಕಷ್ಟು ನೀರಿದ್ದರೂ ಕೃಷಿಗೆ ನೀರುಣಿಸಲು ಕಷ್ಟವಾಗುತ್ತಿತ್ತು. ಇದಕ್ಕೆ ವಿದ್ಯುತ್‌ ಪಂಪ್‌ ಅಳವಡಿಕೆ ಮಾಡಲು ಲೈನ್‌ ಬರುವುದೇ ಕಷ್ಟದ ಕೆಲಸ. ಅರಣ್ಯ ನಡುವಿನ ದಾರಿಯಲ್ಲಿ ಬರಬೇಕಾದ್ದರಿಂದ ವಿದ್ಯುತ್‌ ತಂತಿ ಬರುವುದೇ ಅಸಾಧ್ಯವಾಗಿತ್ತು. ಇದಕ್ಕಾಗಿ ಸೋಲಾರ್‌ ಪಂಪ್‌ ಅಳವಡಿಕೆ ಸ್ಥಳೀಯ ಪಂಚಾಯತ್‌ ಹಾಗೂ ಆಡಳಿತವು ನೆರವು ನೀಡಿದೆ. ಇದೀಗ ಸೋಲಾರ್‌ ಪಂಪ್‌ ಮೂಲಕ ನೀರು ಹಾಯಿಸಿ ಕೃಷಿ ಮಾಡುತ್ತಿದ್ದಾರೆ. ಈಗ ಮಾದರಿ ಕೃಷಿಯ ಮೂಲಕ ಗಮನ ಸೆಳೆದಿದ್ದಾರೆ.

ದೇಶದಲ್ಲಿ ಹಲವು ಗ್ರಾಮೀಣ ಪ್ರದೇಶಗಳು ಇವೆ. ಮೂಲಭೂತ ವ್ಯವಸ್ಥೆಗೆ ಅದರಲ್ಲೂ ವಿದ್ಯುತ್‌ ಸೇರಿದಂತೆ ಇತರ ಸೌಲಭ್ಯಗಳಿಗೆ ಸರ್ಕಾರದ ನೆರವಿನಿಂದ ಸೋಲಾರ್‌ ಪಂಪ್‌ ಅಥವಾ ವಿದ್ಯುತ್‌ ಅಳವಡಿಕೆ ಕಡೆಗೆ ಗ್ರಾಮೀಣ ಆಡಳಿತ, ಸ್ಥಳೀಯಾಡಳಿತ ಯೋಚಿಸಬಹುದಾಗಿದೆ.…..ಮುಂದೆ ಓದಿ….

Electricity is crucial for the growth of agriculture today. Proper irrigation is essential for agricultural success, and this usually requires the use of a pump, which in turn requires electricity to operate. However, what can be done in areas where installing traditional electricity infrastructure is not feasible? A farmer in a village in Orissa has found success by implementing a solar pump system.

ಕೃಪೆ : ಡಿ ಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

11 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

11 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

11 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

11 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

11 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

11 hours ago