Advertisement
The Rural Mirror ಕಾಳಜಿ

ವಿದ್ಯುತ್‌ ಬಾರದ ಪ್ರದೇಶದಲ್ಲಿ ಸೋಲಾರ್‌ ಪಂಪ್‌ | ಕೃಷಿಯಲ್ಲಿ ಯಶಸ್ಸು ಕಂಡ ಕೃಷಿಕ |

Share

ಇಂದು ಕೃಷಿ ಬೆಳವಣಿಗೆಗೆ ವಿದ್ಯುತ್‌ ಕೂಡಾ ಅನಿವಾರ್ಯವಾಗಿದೆ. ಕೃಷಿಗೆ ಸರಿಯಾಗಿ ನೀರುಣಿಸಲು ಪಂಪ್‌ ಅಗತ್ಯ, ಪಂಪ್‌ ಚಾಲೂ ಆಗಲು ಸಾಮಾನ್ಯವಾಗಿ ವಿದ್ಯುತ್‌ ಅಗತ್ಯ. ಆದರೆ ವಿದ್ಯುತ್‌ ತಂತಿ ಅಳವಡಿಕೆ ಮಾಡಲಾಗದ ಪ್ರದೇಶದಲ್ಲಿ ಕೃಷಿ ಬೆಳವಣಿಗೆ ಹೇಗೆ ? ಸೋಲಾರ್‌ ಪಂಪ್‌ ಅಳವಡಿಕೆ ಮೂಲಕ ಒರಿಸ್ಸಾದ ಹಳ್ಳಿ ಪ್ರದೇಶದ ಕೃಷಿಕರೊಬ್ಬರು ಯಶಸ್ಸು ಕಂಡಿದ್ದಾರೆ. …..ಮುಂದೆ ಓದಿ….

ದೇಶದಲ್ಲಿ ಕಾಡು ಪ್ರದೇಶಗಳ ನಡುವೆಯೇ ಅಥವಾ ತೀರಾ ಗ್ರಾಮೀಣ ಭಾಗದಲ್ಲಿಯೂ ಕೃಷಿ ಚಟುವಟಿಕೆ ನಡೆಯುತ್ತದೆ, ಅನೇಕರು ಗ್ರಾಮೀಣ ಭಾಗದಲ್ಲಿ ವಾಸ ಮಾಡುತ್ತಾರೆ.ಅಂತಹ ಪ್ರದೇಶಗಳಿಗೆ ಮೂಲಭೂತ ಸೌಲಭ್ಯ ಒದಗಿಸುವುದೇ ಸಾಹಸದ ಕೆಲಸ. ಇಂತಹ ಸಂದರ್ಭದಲ್ಲಿ ಸರ್ಕಾರವು ಸೋಲಾರ್‌ ಯಂತ್ರಗಳುಗಳಿಗೆ ಆದ್ಯತೆ ನೀಡಿ ಮೂಲಭೂತ ಸೇವೆ ಒದಗಿಸುವ ಕೆಲಸ ಮಾಡುತ್ತದೆ. ಅದೇ ರೀತಿ ಒಡಿಸ್ಸಾದ ನುವಾಪದ ಜಿಲ್ಲೆಯ ಸುಣಬೇಡ ಅಭಯಾರಣ್ಯದ ನಡುವಿನ ಹಳ್ಳಿಯಲ್ಲಿ ವಾಸಿಸುವ  ವಿಜಯ್ ಝಂಕರ್ ಅವರು ಸೋಲಾರ್‌ ಪಂಪ್‌ ಮೂಲಕ ತನ್ನ ಕೃಷಿಯನ್ನು ಯಶಸ್ಸುಗೊಳಿಸಿದ್ದಾರೆ.…..ಮುಂದೆ ಓದಿ….

 

ಒರಿಸ್ಸಾದ ಸುನಬೇಡ ಪಂಚಾಯತ್‌ನ ಸುನಬಹಲಿ ಗ್ರಾಮದ ವ್ಯಾಪ್ತಿಯ ಹಳ್ಳಿಗಾಡಿನಲ್ಲಿರುವ ವಿಜಯ್ ಝಂಕರ್ ಅವರು ಭತ್ತ ಸೇರಿದಂತೆ ಇತರ ಕೃಷಿ ಮಾಡುತ್ತಾರೆ. ಸಾಕಷ್ಟು ನೀರಿದ್ದರೂ ಕೃಷಿಗೆ ನೀರುಣಿಸಲು ಕಷ್ಟವಾಗುತ್ತಿತ್ತು. ಇದಕ್ಕೆ ವಿದ್ಯುತ್‌ ಪಂಪ್‌ ಅಳವಡಿಕೆ ಮಾಡಲು ಲೈನ್‌ ಬರುವುದೇ ಕಷ್ಟದ ಕೆಲಸ. ಅರಣ್ಯ ನಡುವಿನ ದಾರಿಯಲ್ಲಿ ಬರಬೇಕಾದ್ದರಿಂದ ವಿದ್ಯುತ್‌ ತಂತಿ ಬರುವುದೇ ಅಸಾಧ್ಯವಾಗಿತ್ತು. ಇದಕ್ಕಾಗಿ ಸೋಲಾರ್‌ ಪಂಪ್‌ ಅಳವಡಿಕೆ ಸ್ಥಳೀಯ ಪಂಚಾಯತ್‌ ಹಾಗೂ ಆಡಳಿತವು ನೆರವು ನೀಡಿದೆ. ಇದೀಗ ಸೋಲಾರ್‌ ಪಂಪ್‌ ಮೂಲಕ ನೀರು ಹಾಯಿಸಿ ಕೃಷಿ ಮಾಡುತ್ತಿದ್ದಾರೆ. ಈಗ ಮಾದರಿ ಕೃಷಿಯ ಮೂಲಕ ಗಮನ ಸೆಳೆದಿದ್ದಾರೆ.

ದೇಶದಲ್ಲಿ ಹಲವು ಗ್ರಾಮೀಣ ಪ್ರದೇಶಗಳು ಇವೆ. ಮೂಲಭೂತ ವ್ಯವಸ್ಥೆಗೆ ಅದರಲ್ಲೂ ವಿದ್ಯುತ್‌ ಸೇರಿದಂತೆ ಇತರ ಸೌಲಭ್ಯಗಳಿಗೆ ಸರ್ಕಾರದ ನೆರವಿನಿಂದ ಸೋಲಾರ್‌ ಪಂಪ್‌ ಅಥವಾ ವಿದ್ಯುತ್‌ ಅಳವಡಿಕೆ ಕಡೆಗೆ ಗ್ರಾಮೀಣ ಆಡಳಿತ, ಸ್ಥಳೀಯಾಡಳಿತ ಯೋಚಿಸಬಹುದಾಗಿದೆ.…..ಮುಂದೆ ಓದಿ….

Electricity is crucial for the growth of agriculture today. Proper irrigation is essential for agricultural success, and this usually requires the use of a pump, which in turn requires electricity to operate. However, what can be done in areas where installing traditional electricity infrastructure is not feasible? A farmer in a village in Orissa has found success by implementing a solar pump system.

ಕೃಪೆ : ಡಿ ಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

8 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

12 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

13 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

13 hours ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

13 hours ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

13 hours ago