ಹವಾಮಾನ ವೈಪರೀತ್ಯ ಹಾಗೂ ಹವಾಮಾನ ಬದಲಾವಣೆಯ ಸಮಸ್ಯೆಯು ಇಡೀ ಪ್ರಪಂಚದಲ್ಲಿ ಕೃಷಿ ಬೆಳವಣಿಗೆಗೆ ಕಾಡುತ್ತಿದೆ. ಈ ನಡುವೆಯೂ ಭಾರತ ಕೃಷಿಯು ಕಳೆದ ಒಂದು ವರ್ಷದಲ್ಲಿ ಶೇ.4.1 ರಷ್ಟು ಬೆಳವಣಿಗೆ ಕಂಡಿದೆ.
ಕೃಷಿ ಉದ್ಯಮವು ಕಳೆದ ಎರಡು ವರ್ಷಗಳ ಅವಧಿಯಲ್ಲಿ ತೀವ್ರವಾದ ಶಾಖದ ಕಾರಣದಿಂದಾಗಿ ಸಂಕಷ್ಟದ ಸ್ಥಿತಿಯಲ್ಲಿತ್ತು. ಹಾಗಿದ್ದರೂ ಕೂಡಾ ಈ ಹೋರಾಟದ ನಡುವೆ ಕೃಷಿಕರು ಕೃಷಿ ಬೆಳವಣಿಗೆಯತ್ತ ಮುಖ ಮಾಡಿ ಕೃಷಿ ಅಭಿವೃದ್ಧಿ ಹೊಂದುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಉತ್ಪಾದನೆಯನ್ನು 4.1% ರಷ್ಟು ಹೆಚ್ಚಳವಾಗಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕೃಷಿ ಮತ್ತು ಸಂಬಂಧಿತ ವಲಯವು 4.1 ಪ್ರತಿಶತದಷ್ಟು ಬೆಳೆದಿದೆ.
ಭಾರತದ ಅರ್ಥಶಾಸ್ತ್ರಜ್ಞ ಕುನಾಲ್ ಕುಂದು ಅವರ ಪ್ರಕಾರ ಉತ್ಪಾದನೆಯು ನಿರೀಕ್ಷೆಯಂತೆ ಹೆಚ್ಚಿಸಿದೆ. ಅದೇ ಪ್ರಮಾಣದಲ್ಲಿ ದಾಸ್ತಾನು ಕೂಡಾ ಹೆಚ್ಚಿಸಿಕೊಂಡಿದೆ. ಮಾರ್ಚ್ ಮತ್ತು ಏಪ್ರಿಲ್ನಲ್ಲಿ ಬೆಳೆಗಳ ಮೇಲೆ ಹವಾಮಾನದ ಪರಿಣಾಮ ತೀವ್ರವಾಗಿ ಕಾಡಿದೆ. ಎಲ್ಲಾ ಕೃಷಿಗಳ ಮೇಲೂ ಹೆಚ್ಚಿನ ಪರಿಣಾಮ ಬೀರಿದೆ. ಇತ್ತೀಚೆಗಿನ ವರ್ಷಗಳಲ್ಲಿ ಹವಾಮಾನದ ಪರಿಣಾಮಗಳು ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಬೇಸಿಗೆ ಹಾಗೂ ಮಳೆಗಾಲ ಎರಡೂ ಸಂದರ್ಭದಲ್ಲಿ ಹೆಚ್ಚಿನ ಪರಿಣಾಮಗಳು ಎದುರಾಗಿವೆ. ಈ ನಡುವೆಯೂ ಕೃಷಿ ಕ್ಷೇತ್ರದ ಬೆಳವಣಿಗೆ ಆಶಾದಾಯಕವಾಗಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…