ಹವಾಮಾನ ವೈಪರೀತ್ಯ ಹಾಗೂ ಹವಾಮಾನ ಬದಲಾವಣೆಯ ಸಮಸ್ಯೆಯು ಇಡೀ ಪ್ರಪಂಚದಲ್ಲಿ ಕೃಷಿ ಬೆಳವಣಿಗೆಗೆ ಕಾಡುತ್ತಿದೆ. ಈ ನಡುವೆಯೂ ಭಾರತ ಕೃಷಿಯು ಕಳೆದ ಒಂದು ವರ್ಷದಲ್ಲಿ ಶೇ.4.1 ರಷ್ಟು ಬೆಳವಣಿಗೆ ಕಂಡಿದೆ.
ಕೃಷಿ ಉದ್ಯಮವು ಕಳೆದ ಎರಡು ವರ್ಷಗಳ ಅವಧಿಯಲ್ಲಿ ತೀವ್ರವಾದ ಶಾಖದ ಕಾರಣದಿಂದಾಗಿ ಸಂಕಷ್ಟದ ಸ್ಥಿತಿಯಲ್ಲಿತ್ತು. ಹಾಗಿದ್ದರೂ ಕೂಡಾ ಈ ಹೋರಾಟದ ನಡುವೆ ಕೃಷಿಕರು ಕೃಷಿ ಬೆಳವಣಿಗೆಯತ್ತ ಮುಖ ಮಾಡಿ ಕೃಷಿ ಅಭಿವೃದ್ಧಿ ಹೊಂದುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಉತ್ಪಾದನೆಯನ್ನು 4.1% ರಷ್ಟು ಹೆಚ್ಚಳವಾಗಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕೃಷಿ ಮತ್ತು ಸಂಬಂಧಿತ ವಲಯವು 4.1 ಪ್ರತಿಶತದಷ್ಟು ಬೆಳೆದಿದೆ.
ಭಾರತದ ಅರ್ಥಶಾಸ್ತ್ರಜ್ಞ ಕುನಾಲ್ ಕುಂದು ಅವರ ಪ್ರಕಾರ ಉತ್ಪಾದನೆಯು ನಿರೀಕ್ಷೆಯಂತೆ ಹೆಚ್ಚಿಸಿದೆ. ಅದೇ ಪ್ರಮಾಣದಲ್ಲಿ ದಾಸ್ತಾನು ಕೂಡಾ ಹೆಚ್ಚಿಸಿಕೊಂಡಿದೆ. ಮಾರ್ಚ್ ಮತ್ತು ಏಪ್ರಿಲ್ನಲ್ಲಿ ಬೆಳೆಗಳ ಮೇಲೆ ಹವಾಮಾನದ ಪರಿಣಾಮ ತೀವ್ರವಾಗಿ ಕಾಡಿದೆ. ಎಲ್ಲಾ ಕೃಷಿಗಳ ಮೇಲೂ ಹೆಚ್ಚಿನ ಪರಿಣಾಮ ಬೀರಿದೆ. ಇತ್ತೀಚೆಗಿನ ವರ್ಷಗಳಲ್ಲಿ ಹವಾಮಾನದ ಪರಿಣಾಮಗಳು ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಬೇಸಿಗೆ ಹಾಗೂ ಮಳೆಗಾಲ ಎರಡೂ ಸಂದರ್ಭದಲ್ಲಿ ಹೆಚ್ಚಿನ ಪರಿಣಾಮಗಳು ಎದುರಾಗಿವೆ. ಈ ನಡುವೆಯೂ ಕೃಷಿ ಕ್ಷೇತ್ರದ ಬೆಳವಣಿಗೆ ಆಶಾದಾಯಕವಾಗಿದೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…