ಹವಾಮಾನ ವೈಪರೀತ್ಯ ಹಾಗೂ ಹವಾಮಾನ ಬದಲಾವಣೆಯ ಸಮಸ್ಯೆಯು ಇಡೀ ಪ್ರಪಂಚದಲ್ಲಿ ಕೃಷಿ ಬೆಳವಣಿಗೆಗೆ ಕಾಡುತ್ತಿದೆ. ಈ ನಡುವೆಯೂ ಭಾರತ ಕೃಷಿಯು ಕಳೆದ ಒಂದು ವರ್ಷದಲ್ಲಿ ಶೇ.4.1 ರಷ್ಟು ಬೆಳವಣಿಗೆ ಕಂಡಿದೆ.
ಕೃಷಿ ಉದ್ಯಮವು ಕಳೆದ ಎರಡು ವರ್ಷಗಳ ಅವಧಿಯಲ್ಲಿ ತೀವ್ರವಾದ ಶಾಖದ ಕಾರಣದಿಂದಾಗಿ ಸಂಕಷ್ಟದ ಸ್ಥಿತಿಯಲ್ಲಿತ್ತು. ಹಾಗಿದ್ದರೂ ಕೂಡಾ ಈ ಹೋರಾಟದ ನಡುವೆ ಕೃಷಿಕರು ಕೃಷಿ ಬೆಳವಣಿಗೆಯತ್ತ ಮುಖ ಮಾಡಿ ಕೃಷಿ ಅಭಿವೃದ್ಧಿ ಹೊಂದುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಉತ್ಪಾದನೆಯನ್ನು 4.1% ರಷ್ಟು ಹೆಚ್ಚಳವಾಗಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಕೃಷಿ ಮತ್ತು ಸಂಬಂಧಿತ ವಲಯವು 4.1 ಪ್ರತಿಶತದಷ್ಟು ಬೆಳೆದಿದೆ.
ಭಾರತದ ಅರ್ಥಶಾಸ್ತ್ರಜ್ಞ ಕುನಾಲ್ ಕುಂದು ಅವರ ಪ್ರಕಾರ ಉತ್ಪಾದನೆಯು ನಿರೀಕ್ಷೆಯಂತೆ ಹೆಚ್ಚಿಸಿದೆ. ಅದೇ ಪ್ರಮಾಣದಲ್ಲಿ ದಾಸ್ತಾನು ಕೂಡಾ ಹೆಚ್ಚಿಸಿಕೊಂಡಿದೆ. ಮಾರ್ಚ್ ಮತ್ತು ಏಪ್ರಿಲ್ನಲ್ಲಿ ಬೆಳೆಗಳ ಮೇಲೆ ಹವಾಮಾನದ ಪರಿಣಾಮ ತೀವ್ರವಾಗಿ ಕಾಡಿದೆ. ಎಲ್ಲಾ ಕೃಷಿಗಳ ಮೇಲೂ ಹೆಚ್ಚಿನ ಪರಿಣಾಮ ಬೀರಿದೆ. ಇತ್ತೀಚೆಗಿನ ವರ್ಷಗಳಲ್ಲಿ ಹವಾಮಾನದ ಪರಿಣಾಮಗಳು ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಬೇಸಿಗೆ ಹಾಗೂ ಮಳೆಗಾಲ ಎರಡೂ ಸಂದರ್ಭದಲ್ಲಿ ಹೆಚ್ಚಿನ ಪರಿಣಾಮಗಳು ಎದುರಾಗಿವೆ. ಈ ನಡುವೆಯೂ ಕೃಷಿ ಕ್ಷೇತ್ರದ ಬೆಳವಣಿಗೆ ಆಶಾದಾಯಕವಾಗಿದೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…