ನಿರಂತರ ಆನೆ ಧಾಳಿಗೆ ತತ್ತರಿಸಿದ ಕೃಷಿಕರು | ಅಪಾರ ಪ್ರಮಾಣದಲ್ಲಿ ಕೃಷಿ ನಾಶ | ಕೃಷಿಕರ ಸಮಸ್ಯೆ ಕೇಳುವವರು ಯಾರು ? |

June 3, 2021
2:38 PM

 

ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರದೇಶವಾದ ಕೊಲ್ಲಮೊಗ್ರದಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದೆ. ಕೃಷಿ ವ್ಯಾಪಕ ಹಾನಿಯಾಗುತ್ತಿದೆ. ಕೃಷಿಕರ ಈ ಸಮಸ್ಯೆಗೆ ಧ್ವನಿಯಾಗುವವರು ಯಾರು ?

 

ಕಳೆದ ಹಲಕವು ಸಮಯಗಳಿಂದ ಕೊಲ್ಲಮೊಗ್ರ, ಕಲ್ಮಕಾರು ಪ್ರದೇಶ ಹಲವು ಕಡೆಗಳಲ್ಲಿ ಕಾಡಾನೆ ಹಾವಳಿ ಇದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಕ್ಕಿದರೆ, ಈಗ ಕೃಷಿಯನ್ನೂ ವ್ಯಾಪಕವಾಗಿ ಹಾನಿ ಮಾಡುತ್ತಿದೆ. ಕಳೆದ ಕೆಲವು ಸಮಯಗಳ ಹಿಂದೆ ಕುಡಿಯುವ ನೀರಿನ ಪೈಪ್‌ ದುರಸ್ತಿ ಮಾಡಲು ತೆರಳಿದ ಕೃಷಿಕರೊಬ್ಬರಿಗೆ ಆನೆ ಧಾಳಿ ಮಾಡಿ ಗಾಯಗೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇದೀಗ ಈ ಪ್ರದೇಶದಲ್ಲಿ  ಕೃಷಿಗೂ ಹಾನಿ ಮಾಡುತ್ತಿದೆ, ವ್ಯಾಪಕವಾಗಿ ಅಡಿಕೆ, ಬಾಳೆ, ತೆಂಗು ಸಹಿಉತ ಎಲ್ಲಾ ಕೃಷಿ ಹಾನಿಯಾಗುತ್ತಿದೆ. ಆನೆ ಬಂದಾಗ ಈಗ ತೋಟದ ಕಡೆಗೂ ಹೋಗಲು ಕೃಷಿಕರು ಭಯಪಡುತ್ತಿದ್ದಾರೆ. ಆಡಳಿತ, ಜನಪ್ರತಿನಿಧಿಗಳು ಇಷ್ಟಾದರೂ ಯಾವುದೇ ಧ್ವನಿ ಎತ್ತುತ್ತಿಲ್ಲ, ಈಗ ಸುಳ್ಯದ ಸಚಿವರೇ ಅಂದರೆ ಸರಕಾರವೇ ಇದ್ದರೂ ಯಾವುದೇ ಫಲವಿಲ್ಲ ಎಂದು ಕೃಷಿಕರು ಅಸಮಾಧಾನ ತೋಡುತ್ತಿದ್ದಾರೆ. ಆದಷ್ಟು ಶೀಘ್ರದಲ್ಲೇ ಆನೆ ಕಾಟಕ್ಕೆ ಪರಿಹಾರವಾಗಬೇಕಿದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror