ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರದೇಶವಾದ ಕೊಲ್ಲಮೊಗ್ರದಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದೆ. ಕೃಷಿ ವ್ಯಾಪಕ ಹಾನಿಯಾಗುತ್ತಿದೆ. ಕೃಷಿಕರ ಈ ಸಮಸ್ಯೆಗೆ ಧ್ವನಿಯಾಗುವವರು ಯಾರು ?
ಕಳೆದ ಹಲಕವು ಸಮಯಗಳಿಂದ ಕೊಲ್ಲಮೊಗ್ರ, ಕಲ್ಮಕಾರು ಪ್ರದೇಶ ಹಲವು ಕಡೆಗಳಲ್ಲಿ ಕಾಡಾನೆ ಹಾವಳಿ ಇದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಕ್ಕಿದರೆ, ಈಗ ಕೃಷಿಯನ್ನೂ ವ್ಯಾಪಕವಾಗಿ ಹಾನಿ ಮಾಡುತ್ತಿದೆ. ಕಳೆದ ಕೆಲವು ಸಮಯಗಳ ಹಿಂದೆ ಕುಡಿಯುವ ನೀರಿನ ಪೈಪ್ ದುರಸ್ತಿ ಮಾಡಲು ತೆರಳಿದ ಕೃಷಿಕರೊಬ್ಬರಿಗೆ ಆನೆ ಧಾಳಿ ಮಾಡಿ ಗಾಯಗೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇದೀಗ ಈ ಪ್ರದೇಶದಲ್ಲಿ ಕೃಷಿಗೂ ಹಾನಿ ಮಾಡುತ್ತಿದೆ, ವ್ಯಾಪಕವಾಗಿ ಅಡಿಕೆ, ಬಾಳೆ, ತೆಂಗು ಸಹಿಉತ ಎಲ್ಲಾ ಕೃಷಿ ಹಾನಿಯಾಗುತ್ತಿದೆ. ಆನೆ ಬಂದಾಗ ಈಗ ತೋಟದ ಕಡೆಗೂ ಹೋಗಲು ಕೃಷಿಕರು ಭಯಪಡುತ್ತಿದ್ದಾರೆ. ಆಡಳಿತ, ಜನಪ್ರತಿನಿಧಿಗಳು ಇಷ್ಟಾದರೂ ಯಾವುದೇ ಧ್ವನಿ ಎತ್ತುತ್ತಿಲ್ಲ, ಈಗ ಸುಳ್ಯದ ಸಚಿವರೇ ಅಂದರೆ ಸರಕಾರವೇ ಇದ್ದರೂ ಯಾವುದೇ ಫಲವಿಲ್ಲ ಎಂದು ಕೃಷಿಕರು ಅಸಮಾಧಾನ ತೋಡುತ್ತಿದ್ದಾರೆ. ಆದಷ್ಟು ಶೀಘ್ರದಲ್ಲೇ ಆನೆ ಕಾಟಕ್ಕೆ ಪರಿಹಾರವಾಗಬೇಕಿದೆ.
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…