ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರದೇಶವಾದ ಕೊಲ್ಲಮೊಗ್ರದಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದೆ. ಕೃಷಿ ವ್ಯಾಪಕ ಹಾನಿಯಾಗುತ್ತಿದೆ. ಕೃಷಿಕರ ಈ ಸಮಸ್ಯೆಗೆ ಧ್ವನಿಯಾಗುವವರು ಯಾರು ?
ಕಳೆದ ಹಲಕವು ಸಮಯಗಳಿಂದ ಕೊಲ್ಲಮೊಗ್ರ, ಕಲ್ಮಕಾರು ಪ್ರದೇಶ ಹಲವು ಕಡೆಗಳಲ್ಲಿ ಕಾಡಾನೆ ಹಾವಳಿ ಇದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಕ್ಕಿದರೆ, ಈಗ ಕೃಷಿಯನ್ನೂ ವ್ಯಾಪಕವಾಗಿ ಹಾನಿ ಮಾಡುತ್ತಿದೆ. ಕಳೆದ ಕೆಲವು ಸಮಯಗಳ ಹಿಂದೆ ಕುಡಿಯುವ ನೀರಿನ ಪೈಪ್ ದುರಸ್ತಿ ಮಾಡಲು ತೆರಳಿದ ಕೃಷಿಕರೊಬ್ಬರಿಗೆ ಆನೆ ಧಾಳಿ ಮಾಡಿ ಗಾಯಗೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇದೀಗ ಈ ಪ್ರದೇಶದಲ್ಲಿ ಕೃಷಿಗೂ ಹಾನಿ ಮಾಡುತ್ತಿದೆ, ವ್ಯಾಪಕವಾಗಿ ಅಡಿಕೆ, ಬಾಳೆ, ತೆಂಗು ಸಹಿಉತ ಎಲ್ಲಾ ಕೃಷಿ ಹಾನಿಯಾಗುತ್ತಿದೆ. ಆನೆ ಬಂದಾಗ ಈಗ ತೋಟದ ಕಡೆಗೂ ಹೋಗಲು ಕೃಷಿಕರು ಭಯಪಡುತ್ತಿದ್ದಾರೆ. ಆಡಳಿತ, ಜನಪ್ರತಿನಿಧಿಗಳು ಇಷ್ಟಾದರೂ ಯಾವುದೇ ಧ್ವನಿ ಎತ್ತುತ್ತಿಲ್ಲ, ಈಗ ಸುಳ್ಯದ ಸಚಿವರೇ ಅಂದರೆ ಸರಕಾರವೇ ಇದ್ದರೂ ಯಾವುದೇ ಫಲವಿಲ್ಲ ಎಂದು ಕೃಷಿಕರು ಅಸಮಾಧಾನ ತೋಡುತ್ತಿದ್ದಾರೆ. ಆದಷ್ಟು ಶೀಘ್ರದಲ್ಲೇ ಆನೆ ಕಾಟಕ್ಕೆ ಪರಿಹಾರವಾಗಬೇಕಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…