ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರದೇಶವಾದ ಕೊಲ್ಲಮೊಗ್ರದಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದೆ. ಕೃಷಿ ವ್ಯಾಪಕ ಹಾನಿಯಾಗುತ್ತಿದೆ. ಕೃಷಿಕರ ಈ ಸಮಸ್ಯೆಗೆ ಧ್ವನಿಯಾಗುವವರು ಯಾರು ?
ಕಳೆದ ಹಲಕವು ಸಮಯಗಳಿಂದ ಕೊಲ್ಲಮೊಗ್ರ, ಕಲ್ಮಕಾರು ಪ್ರದೇಶ ಹಲವು ಕಡೆಗಳಲ್ಲಿ ಕಾಡಾನೆ ಹಾವಳಿ ಇದೆ. ಹಗಲು ಹೊತ್ತಿನಲ್ಲಿಯೇ ಕಾಡಾನೆ ಕಾಣ ಸಿಕ್ಕಿದರೆ, ಈಗ ಕೃಷಿಯನ್ನೂ ವ್ಯಾಪಕವಾಗಿ ಹಾನಿ ಮಾಡುತ್ತಿದೆ. ಕಳೆದ ಕೆಲವು ಸಮಯಗಳ ಹಿಂದೆ ಕುಡಿಯುವ ನೀರಿನ ಪೈಪ್ ದುರಸ್ತಿ ಮಾಡಲು ತೆರಳಿದ ಕೃಷಿಕರೊಬ್ಬರಿಗೆ ಆನೆ ಧಾಳಿ ಮಾಡಿ ಗಾಯಗೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇದೀಗ ಈ ಪ್ರದೇಶದಲ್ಲಿ ಕೃಷಿಗೂ ಹಾನಿ ಮಾಡುತ್ತಿದೆ, ವ್ಯಾಪಕವಾಗಿ ಅಡಿಕೆ, ಬಾಳೆ, ತೆಂಗು ಸಹಿಉತ ಎಲ್ಲಾ ಕೃಷಿ ಹಾನಿಯಾಗುತ್ತಿದೆ. ಆನೆ ಬಂದಾಗ ಈಗ ತೋಟದ ಕಡೆಗೂ ಹೋಗಲು ಕೃಷಿಕರು ಭಯಪಡುತ್ತಿದ್ದಾರೆ. ಆಡಳಿತ, ಜನಪ್ರತಿನಿಧಿಗಳು ಇಷ್ಟಾದರೂ ಯಾವುದೇ ಧ್ವನಿ ಎತ್ತುತ್ತಿಲ್ಲ, ಈಗ ಸುಳ್ಯದ ಸಚಿವರೇ ಅಂದರೆ ಸರಕಾರವೇ ಇದ್ದರೂ ಯಾವುದೇ ಫಲವಿಲ್ಲ ಎಂದು ಕೃಷಿಕರು ಅಸಮಾಧಾನ ತೋಡುತ್ತಿದ್ದಾರೆ. ಆದಷ್ಟು ಶೀಘ್ರದಲ್ಲೇ ಆನೆ ಕಾಟಕ್ಕೆ ಪರಿಹಾರವಾಗಬೇಕಿದೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…