Advertisement
MIRROR FOCUS

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

Share

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ ಪಾತ್ರ ಮಹತ್ವದ್ದಾಗಿದೆ. ಕೃಷಿ ನಂತರ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ ಇದಾಗಿದ್ದು, ಗ್ರಾಮೀಣ ಕ್ಷೇತ್ರದಲ್ಲೂ ಅಪಾರ ಉದ್ಯೋಗ ದೊರೆಯುತ್ತಿದೆ. ಎಂಎಸ್ಎಂಇ ಗಳಿಂದ ಮಹಿಳೆಯರ ಸಬಲೀಕರಣವಾಗುತ್ತಿದ್ದು, ಸ್ವಾವಲಂಬಿಗಳಾಗುತ್ತಿದ್ದಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ದೆಹಲಿಯ ವಿಜ್ಞಾನ ಭವನದಲ್ಲಿಂದು ‘ಎಂಎಸ್ಎಂಇ ಅಂತಾರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು. ಸರ್ಕಾರವು  ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಒದಗಿಸುವುದರ ಮೂಲಕ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡಿದೆ. ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯ ಮೂಲಕ ಅನೇಕ ಉಪಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದರು. ಸುಸ್ಥಿರ ಪ್ರಗತಿಗೆ ಎಂಎಸ್ಎಂಇಗಳ ಪಾತ್ರ ಬಹುಮುಖ್ಯ ಎಂದು ವಿಶ್ವ ಸಂಸ್ಥೆ  ಹೇಳಿದೆ. ಆಧುನಿಕ ತಂತ್ರಜ್ಞಾನದ ಅಳವಡಿಕೆ, ಕಚ್ಚಾವಸ್ತು ಪೂರೈಕೆ, ಪರಿಸರ ಸಂರಕ್ಷಣೆ ಮುಂತಾದ ಸವಾಲುಗಳು ಈ ವಲಯದ ಮುಂದಿವೆ. ಸರ್ಕಾರವು ಈ ಕ್ಷೇತ್ರದಲ್ಲಿ ಆವಿಷ್ಕಾರ ಮತ್ತು ನವೋಧ್ಯಮಗಳ ಉತ್ತೇಜನಕ್ಕೆ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.

ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಜಿತನ್ ರಾಮ್ ಮಾಂಝಿ, ಎಂಎಸ್ಎಂಇ ವಲಯದಿಂದ ಕೋಟ್ಯಾಂತರ ಬಡವರಿಗೆ ಪ್ರಯೋಜನವಾಗುತ್ತಿದೆ. ಕಳೆದ 11 ವರ್ಷಗಳಲ್ಲಿ ಈ ವಲಯದ ಪ್ರಗತಿಗೆ ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ. ಸಣ್ಣ ಉದ್ದಿಮೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಆರಂಭಿಸಲಾಗಿದೆ. ಯೋಜನೆಯಿಂದ ಅನೇಕ ವೃತ್ತಿಪರರು ಸಣ್ಣ ಉದ್ಯಮಿಗಳಾಗುತ್ತಿದ್ದಾರೆ. ಯೋಜನೆಯಡಿ 30 ಲಕ್ಷ ಜನರಿಗೆ ತರಬೇತಿ ಮತ್ತು ಉಪಕರಣ ಕಿಟ್ ಗಳನ್ನು ನೀಡುವ ಗುರಿ ಹೊಂದಲಾಗಿದೆ. ವಿಕಸಿತ ಭಾರತ ಸಂಕಲ್ಪ ಈಡೇರಿಕೆಗೆ ಎಂಎಸ್ಎಂಇ ವಲಯದ ಅಭಿವೃದ್ಧಿ ಮುಖ್ಯವಾಗಿದೆ ಎಂದರು.

ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷ ಮನೋಜ್ ಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

2 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

13 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

14 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

15 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

15 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

15 hours ago