Advertisement
MIRROR FOCUS

ಮುಂಗಾರು ಕೊರತೆ | ರಾಜ್ಯದಲ್ಲಿ ಈ ಬಾರಿ ಆಹಾರ ಉತ್ಪಾದನೆಯಲ್ಲಿ 50%ರಷ್ಟು ನಷ್ಟ |

Share

ಮುಂಗಾರು ಮಳೆ ಕೊರತೆ ಮತ್ತು ಅನಿಯಮಿತ ಮಳೆಯ ಕಾರಣದಿಂದ  ಮತ್ತು ಬೆಳೆ ಹಾನಿಯಿಂದಾಗಿ ಕರ್ನಾಟಕದಲ್ಲಿ ಆಹಾರ ಉತ್ಪಾದನೆಯು ಯೋಜಿತ 111 ಲಕ್ಷ ಟನ್‌ಗಳಿಂದ 58 ಲಕ್ಷ ಟನ್‌ಗಳಿಗೆ ಇಳಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಈ ಬಾರಿ 11.84 ಲಕ್ಷ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ, 7.16 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ, 4.45 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ, 4.04 ಲಕ್ಷ ಹೆಕ್ಟೇರ್‌ನಲ್ಲಿ ಹತ್ತಿ, ಶೇಂಗಾ ಮತ್ತು ಕಬ್ಬು 2.7 ಲಕ್ಷ ಹೆಕ್ಟೇರ್, ಸೋಯಾಬೀನ್ 2.2 ಲಕ್ಷ ಹೆಕ್ಟೇರ್‌ ಪ್ರದೇಶಗಳಲ್ಲಿ ಬೆಳೆ ನಷ್ಟವಾಗಿದೆ. ಕೃಷಿ ಇಲಾಖೆ ಅಂಕಿ ಅಂಶಗಳ ಪ್ರಕಾರ ಒಟ್ಟು 39.74 ಲಕ್ಷ ಹೆಕ್ಟೇರ್ ನಷ್ಟವಾಗಿದೆ.

ರಾಜ್ಯದ 195 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದ್ದು , ಈ ಮಳೆಗಾಲದ ಅವಧಿಯಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿಯು ಆಹಾರ ಉತ್ಪಾದನೆಯಲ್ಲಿ 50% ನಷ್ಟು ಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ. ಹಿಂಗಾರು ಮಳೆಯಲ್ಲಿ ಆಹಾರ ಉತ್ಪಾದನೆಯನ್ನು ಸಮತೋಲನದಲ್ಲಿಡಲು ಪ್ರಯತ್ನಿಸಲಾಗುವುದು ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಗುರುವಾರ  ಸುದ್ದಿಗಾರರಿಗೆ ತಿಳಿಸಿದರು. ಜುಲೈನಲ್ಲಿ ವಾಡಿಕೆಗಿಂತ ಶೇ.29ರಷ್ಟು ಅಧಿಕ ಮಳೆಯಾಗಿದ್ದರೆ, ಆಗಸ್ಟ್‌ನಲ್ಲಿ ಶೇ.73ರಷ್ಟು ಕೊರತೆಯಾಗಿ ಬೆಳೆ ಹಾನಿಯಾಗಿದೆ ಎಂದು ಸಚಿವರು ಹೇಳಿದರು. ಬಿತ್ತನೆ ಮಾಡಲು ಸಾಧ್ಯವಾಗದ 60,381 ರೈತರಿಗೆ ₹48 ಕೋಟಿ ಪರಿಹಾರ ನೀಡಲಾಗುತ್ತಿದೆ . ಇದೇ ವೇಳೆ ರಾಜ್ಯದಲ್ಲಿ ಕೃಷಿ ಇಲಾಖೆ ವಿಜಿಲೆನ್ಸ್ ಸೆಲ್ ₹5 ಕೋಟಿಗೂ ಹೆಚ್ಚು ಮೌಲ್ಯದ ಕಳಪೆ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರ ಹಾಗೂ ಕೀಟನಾಶಕಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ 148 ಪ್ರಕರಣಗಳನ್ನು ದಾಖಲಿಸಿದೆ ಎಂದು ಸಚಿವರು ಹೇಳಿದ್ದಾರೆ.

ಕೃಷಿ ಇಲಾಖೆ ನೀಡಿದ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 118 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 89% ಬಿತ್ತನೆಯಾಗಿದೆ ಎಂದು ವರದಿ ಮಾಡಿದೆ. ಒಟ್ಟು ಬಿತ್ತನೆಯಾದ ಪ್ರದೇಶದಲ್ಲಿ 39.74 ಲಕ್ಷ ಹೆಕ್ಟೇರ್‌ನಲ್ಲಿ ಕೃಷಿ ಬೆಳೆ ಹಾಗೂ 1.82 ಲಕ್ಷ ಹೆಕ್ಟೇರ್‌ನಲ್ಲಿ ತೋಟಗಾರಿಕೆ ಬೆಳೆ ಸೇರಿದಂತೆ ಒಟ್ಟು 41.52 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಒಟ್ಟು ನಷ್ಟವು ಕ್ರಮವಾಗಿ ₹ 3,824 ಕೋಟಿ ಮತ್ತು ₹ 206 ಕೋಟಿ ಎಂದು ಅಂದಾಜಿಸಲಾಗಿದೆ ಕೃಷಿ ಸಚಿವ ಚೆಲುವನಾರಾಯಣ ಸ್ವಾಮಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

8 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

16 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

17 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

18 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago