Advertisement
MIRROR FOCUS

ಮುಂಗಾರು ಕೊರತೆ | ರಾಜ್ಯದಲ್ಲಿ ಈ ಬಾರಿ ಆಹಾರ ಉತ್ಪಾದನೆಯಲ್ಲಿ 50%ರಷ್ಟು ನಷ್ಟ |

Share

ಮುಂಗಾರು ಮಳೆ ಕೊರತೆ ಮತ್ತು ಅನಿಯಮಿತ ಮಳೆಯ ಕಾರಣದಿಂದ  ಮತ್ತು ಬೆಳೆ ಹಾನಿಯಿಂದಾಗಿ ಕರ್ನಾಟಕದಲ್ಲಿ ಆಹಾರ ಉತ್ಪಾದನೆಯು ಯೋಜಿತ 111 ಲಕ್ಷ ಟನ್‌ಗಳಿಂದ 58 ಲಕ್ಷ ಟನ್‌ಗಳಿಗೆ ಇಳಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ.

Advertisement
Advertisement

ಈ ಬಾರಿ 11.84 ಲಕ್ಷ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ, 7.16 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ, 4.45 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ, 4.04 ಲಕ್ಷ ಹೆಕ್ಟೇರ್‌ನಲ್ಲಿ ಹತ್ತಿ, ಶೇಂಗಾ ಮತ್ತು ಕಬ್ಬು 2.7 ಲಕ್ಷ ಹೆಕ್ಟೇರ್, ಸೋಯಾಬೀನ್ 2.2 ಲಕ್ಷ ಹೆಕ್ಟೇರ್‌ ಪ್ರದೇಶಗಳಲ್ಲಿ ಬೆಳೆ ನಷ್ಟವಾಗಿದೆ. ಕೃಷಿ ಇಲಾಖೆ ಅಂಕಿ ಅಂಶಗಳ ಪ್ರಕಾರ ಒಟ್ಟು 39.74 ಲಕ್ಷ ಹೆಕ್ಟೇರ್ ನಷ್ಟವಾಗಿದೆ.

Advertisement

ರಾಜ್ಯದ 195 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದ್ದು , ಈ ಮಳೆಗಾಲದ ಅವಧಿಯಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿಯು ಆಹಾರ ಉತ್ಪಾದನೆಯಲ್ಲಿ 50% ನಷ್ಟು ಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ. ಹಿಂಗಾರು ಮಳೆಯಲ್ಲಿ ಆಹಾರ ಉತ್ಪಾದನೆಯನ್ನು ಸಮತೋಲನದಲ್ಲಿಡಲು ಪ್ರಯತ್ನಿಸಲಾಗುವುದು ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಗುರುವಾರ  ಸುದ್ದಿಗಾರರಿಗೆ ತಿಳಿಸಿದರು. ಜುಲೈನಲ್ಲಿ ವಾಡಿಕೆಗಿಂತ ಶೇ.29ರಷ್ಟು ಅಧಿಕ ಮಳೆಯಾಗಿದ್ದರೆ, ಆಗಸ್ಟ್‌ನಲ್ಲಿ ಶೇ.73ರಷ್ಟು ಕೊರತೆಯಾಗಿ ಬೆಳೆ ಹಾನಿಯಾಗಿದೆ ಎಂದು ಸಚಿವರು ಹೇಳಿದರು. ಬಿತ್ತನೆ ಮಾಡಲು ಸಾಧ್ಯವಾಗದ 60,381 ರೈತರಿಗೆ ₹48 ಕೋಟಿ ಪರಿಹಾರ ನೀಡಲಾಗುತ್ತಿದೆ . ಇದೇ ವೇಳೆ ರಾಜ್ಯದಲ್ಲಿ ಕೃಷಿ ಇಲಾಖೆ ವಿಜಿಲೆನ್ಸ್ ಸೆಲ್ ₹5 ಕೋಟಿಗೂ ಹೆಚ್ಚು ಮೌಲ್ಯದ ಕಳಪೆ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರ ಹಾಗೂ ಕೀಟನಾಶಕಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ 148 ಪ್ರಕರಣಗಳನ್ನು ದಾಖಲಿಸಿದೆ ಎಂದು ಸಚಿವರು ಹೇಳಿದ್ದಾರೆ.

ಕೃಷಿ ಇಲಾಖೆ ನೀಡಿದ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 118 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 89% ಬಿತ್ತನೆಯಾಗಿದೆ ಎಂದು ವರದಿ ಮಾಡಿದೆ. ಒಟ್ಟು ಬಿತ್ತನೆಯಾದ ಪ್ರದೇಶದಲ್ಲಿ 39.74 ಲಕ್ಷ ಹೆಕ್ಟೇರ್‌ನಲ್ಲಿ ಕೃಷಿ ಬೆಳೆ ಹಾಗೂ 1.82 ಲಕ್ಷ ಹೆಕ್ಟೇರ್‌ನಲ್ಲಿ ತೋಟಗಾರಿಕೆ ಬೆಳೆ ಸೇರಿದಂತೆ ಒಟ್ಟು 41.52 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಒಟ್ಟು ನಷ್ಟವು ಕ್ರಮವಾಗಿ ₹ 3,824 ಕೋಟಿ ಮತ್ತು ₹ 206 ಕೋಟಿ ಎಂದು ಅಂದಾಜಿಸಲಾಗಿದೆ ಕೃಷಿ ಸಚಿವ ಚೆಲುವನಾರಾಯಣ ಸ್ವಾಮಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ – ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮಳೆ

ಈ ಬಾರಿ ಮುಂಗಾರು(Mansoon) ಬೇಗ ಆರಂಭವಾಗುವ ನಿರೀಕ್ಷೆಯಿದೆ. ಬಿರು ಬಿಸಿಲಿನಿಂದ ತತ್ತರಿಸಿದ ಜನತೆಗೆ…

17 mins ago

ಭಾರತ ಚಂದ್ರನಂಗಳದಲ್ಲಿದೆ : ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ : ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ತಾನು ಸತ್ತರು ಪರವಾಗಿಲ್ಲ, ಇನ್ನೊಬ್ಬರು ಬದುಕಬಾರದು ಅನ್ನುವ ಜಾಯಮಾನದ ದೇಶ ಪಾಕಿಸ್ತಾನ(Pakistana). ತನ್ನ…

34 mins ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು – ಈ ಬಾರಿ ಆನೆಗಳ ಸಂಖ್ಯೆ ಏರಲಿದೆಯಾ..?

ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…

4 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

4 hours ago

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

18 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

19 hours ago