Advertisement
MIRROR FOCUS

ಮುಂಗಾರು ಕೊರತೆ | ರಾಜ್ಯದಲ್ಲಿ ಈ ಬಾರಿ ಆಹಾರ ಉತ್ಪಾದನೆಯಲ್ಲಿ 50%ರಷ್ಟು ನಷ್ಟ |

Share

ಮುಂಗಾರು ಮಳೆ ಕೊರತೆ ಮತ್ತು ಅನಿಯಮಿತ ಮಳೆಯ ಕಾರಣದಿಂದ  ಮತ್ತು ಬೆಳೆ ಹಾನಿಯಿಂದಾಗಿ ಕರ್ನಾಟಕದಲ್ಲಿ ಆಹಾರ ಉತ್ಪಾದನೆಯು ಯೋಜಿತ 111 ಲಕ್ಷ ಟನ್‌ಗಳಿಂದ 58 ಲಕ್ಷ ಟನ್‌ಗಳಿಗೆ ಇಳಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಈ ಬಾರಿ 11.84 ಲಕ್ಷ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ, 7.16 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ, 4.45 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ, 4.04 ಲಕ್ಷ ಹೆಕ್ಟೇರ್‌ನಲ್ಲಿ ಹತ್ತಿ, ಶೇಂಗಾ ಮತ್ತು ಕಬ್ಬು 2.7 ಲಕ್ಷ ಹೆಕ್ಟೇರ್, ಸೋಯಾಬೀನ್ 2.2 ಲಕ್ಷ ಹೆಕ್ಟೇರ್‌ ಪ್ರದೇಶಗಳಲ್ಲಿ ಬೆಳೆ ನಷ್ಟವಾಗಿದೆ. ಕೃಷಿ ಇಲಾಖೆ ಅಂಕಿ ಅಂಶಗಳ ಪ್ರಕಾರ ಒಟ್ಟು 39.74 ಲಕ್ಷ ಹೆಕ್ಟೇರ್ ನಷ್ಟವಾಗಿದೆ.

Advertisement

ರಾಜ್ಯದ 195 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದ್ದು , ಈ ಮಳೆಗಾಲದ ಅವಧಿಯಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿಯು ಆಹಾರ ಉತ್ಪಾದನೆಯಲ್ಲಿ 50% ನಷ್ಟು ಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ. ಹಿಂಗಾರು ಮಳೆಯಲ್ಲಿ ಆಹಾರ ಉತ್ಪಾದನೆಯನ್ನು ಸಮತೋಲನದಲ್ಲಿಡಲು ಪ್ರಯತ್ನಿಸಲಾಗುವುದು ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಗುರುವಾರ  ಸುದ್ದಿಗಾರರಿಗೆ ತಿಳಿಸಿದರು. ಜುಲೈನಲ್ಲಿ ವಾಡಿಕೆಗಿಂತ ಶೇ.29ರಷ್ಟು ಅಧಿಕ ಮಳೆಯಾಗಿದ್ದರೆ, ಆಗಸ್ಟ್‌ನಲ್ಲಿ ಶೇ.73ರಷ್ಟು ಕೊರತೆಯಾಗಿ ಬೆಳೆ ಹಾನಿಯಾಗಿದೆ ಎಂದು ಸಚಿವರು ಹೇಳಿದರು. ಬಿತ್ತನೆ ಮಾಡಲು ಸಾಧ್ಯವಾಗದ 60,381 ರೈತರಿಗೆ ₹48 ಕೋಟಿ ಪರಿಹಾರ ನೀಡಲಾಗುತ್ತಿದೆ . ಇದೇ ವೇಳೆ ರಾಜ್ಯದಲ್ಲಿ ಕೃಷಿ ಇಲಾಖೆ ವಿಜಿಲೆನ್ಸ್ ಸೆಲ್ ₹5 ಕೋಟಿಗೂ ಹೆಚ್ಚು ಮೌಲ್ಯದ ಕಳಪೆ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರ ಹಾಗೂ ಕೀಟನಾಶಕಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ 148 ಪ್ರಕರಣಗಳನ್ನು ದಾಖಲಿಸಿದೆ ಎಂದು ಸಚಿವರು ಹೇಳಿದ್ದಾರೆ.

ಕೃಷಿ ಇಲಾಖೆ ನೀಡಿದ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 118 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 89% ಬಿತ್ತನೆಯಾಗಿದೆ ಎಂದು ವರದಿ ಮಾಡಿದೆ. ಒಟ್ಟು ಬಿತ್ತನೆಯಾದ ಪ್ರದೇಶದಲ್ಲಿ 39.74 ಲಕ್ಷ ಹೆಕ್ಟೇರ್‌ನಲ್ಲಿ ಕೃಷಿ ಬೆಳೆ ಹಾಗೂ 1.82 ಲಕ್ಷ ಹೆಕ್ಟೇರ್‌ನಲ್ಲಿ ತೋಟಗಾರಿಕೆ ಬೆಳೆ ಸೇರಿದಂತೆ ಒಟ್ಟು 41.52 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಒಟ್ಟು ನಷ್ಟವು ಕ್ರಮವಾಗಿ ₹ 3,824 ಕೋಟಿ ಮತ್ತು ₹ 206 ಕೋಟಿ ಎಂದು ಅಂದಾಜಿಸಲಾಗಿದೆ ಕೃಷಿ ಸಚಿವ ಚೆಲುವನಾರಾಯಣ ಸ್ವಾಮಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

4 hours ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

21 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

21 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

1 day ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

1 day ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

1 day ago