MIRROR FOCUS

ಕೃಷಿ ಹಾನಿಗೆ ರೈತ ತತ್ತರ | ರೈತರ ಬಗ್ಗೆ ಕಾಳಜಿ ಇರುವವರು ಇದನ್ನೂ ಗಮನಿಸಿ..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕೃಷಿ ಹಾನಿ ಈಚೆಗೆ ಹೆಚ್ಚಾಗುತ್ತಿದೆ. ಒಂದು ಕಡೆ ಕಾಡು ಪ್ರಾಣಿಗಳ ಕಾಟ, ಇನ್ನೊಂದು ಕಡೆ ವಿವಿಧ ರೋಗಗಳ ಕಾಟ. ಇದೆರಡೂ ಇಂದು ಕೃಷಿಕರಿಗೆ ಬಹುದೊಡ್ಡ ಸವಾಲಾಗಿದೆ. ನಿಜವಾಗಿಯೂ ರೈತ ಪರವಾಗಿರುವ ಮಂದಿ ಇದಕ್ಕೆ ಪರಿಹಾರ ಕೊಡಿಸುವ ಕೆಲಸ ಮಾಡಬೇಕಿದೆ.
Advertisement

ಮಲೆನಾಡು ಹಾಗೂ ಕರಾವಳಿ ಭಾಗ ಸೇರಿದಂತೆ ಎಲ್ಲ ಭಾಗಗಳಲ್ಲೂ ಕಾಡು ಪ್ರಾಣಿಗಳ ಹಾವಳಿ ಕೃಷಿಗೆ ಹೆಚ್ಚಾಗಿದೆ. ಆದರೆ ಸರಕಾರದಿಂದ ಯಾವ ಪರಿಹಾರವೂ ಲಭ್ಯವಾಗುತ್ತಿಲ್ಲ. ಒಂದು ವೇಳೆ ಪರಿಹಾರ ಲಭ್ಯವಾಗುತ್ತಿದ್ದರೂ ರೈತರು ಸಾಕಷ್ಟು ಬಾರಿ ಇಲಾಖೆಗಳಿಗೆ ಅಲೆದಾಟ ಮಾಡಿ ಕಿಂಚಿತ್‌ ಪರಿಹಾರ ಲಭ್ಯವಾಗುತ್ತಿದೆ. ಹೀಗಾಗಿ ಇದೊಂದು ಸಂಕಷ್ಟದಿಂದ ರೈತರನ್ನು  ಪಾರು ಮಾಡಬೇಕಿದೆ. ಸರಿಯಾಗಿ ಬೆಳೆ ಬೆಳೆಯಲು ಆಗದ ಮೇಲೆ ಮಾರಾಟ ಹೇಗೆ ಸಾಧ್ಯ ? ಇಂದು ರೈತ ಮಸೂದೆ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆ ಕಂಡುಬರುತ್ತಿದೆ. ಅದಕ್ಕಿಂತಲೂ ಹೆಚ್ಚಾಗಿ ಬೆಳೆ ಬೆಳೆಯಲೇ ಆಗದೇ ಇದ್ದರೆ ರೈತ ಬದುಕು ಸಾಗಿಸುವುದು  ಹೇಗೆ ? ಈ ಬಗ್ಗೆ ಸೂಕ್ತವಾದ ಕ್ರಮಗಳು ಅಗತ್ಯವಾಗಿದೆ.

ಈಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಪ್ರದೇಶದಲ್ಲಿ  ರೈತರು ಅವರ ಜಮೀನಿನಲ್ಲಿ ಬೆಳೆದ ಬೆಳೆಗೆ ಕಾಡಾನೆ ಧಾಳಿ ಮಾಡಿದೆ. ಇದರಿಂದ ಕೃಷಿ ನಾಶವಾಗಿದೆ. ಕೊಡಗು ಜಿಲ್ಲೆಯ ಮರಿಕೆಯ  ಕುಮುದಿನಿ ಅವರ ಕೃಷಿ ಜಾಗಕ್ಕೆ ಕೂಡಾ ಕಾಡಾನೆ ದಾಳಿ ಮಾಡಿ ಅಪಾರವಾದ ಕೃಷಿ ನಷ್ಟ ಗೊಂಡಿರುತ್ತದೆ. ಕೃಷಿ ಜಾಗದಲ್ಲಿ ಫಸಲು ಬರುತ್ತಿರುವ ತೆಂಗು, ಅಡಿಕೆ, ಬಾಳೆ ಕೃಷಿಯು ನಾಶಗೊಂಡಿರುತ್ತದೆ. ಕಳೆದ ತಿಂಗಳು ಸುಳ್ಯ ತಾಲೂಕಿನ ಮಂಡೆಕೋಲು, ಆಲೆಟ್ಟಿ ಪ್ರದೇಶದಲ್ಲಿ  ಕಾಡಾನೆ ಧಾಳಿ ಮಾಡಿದರೆ , ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ, ಪುತ್ತೂರು ತಾಲೂಕಿನ ಗುಂಡ್ಯ ಮೊದಲಾದ ಕಡೆಗಳಲ್ಲೂ ಆನೆ ಹಾವಳಿ ಇದೆ. ಈ ಹಾನಿ ನೋಡುವಾಗ ಯಾವುದೇ ಕೃಷಿಕನಿಗೆ ಕರುಳು ಚುರುಕ್‌ ಅನ್ನುತ್ತದೆ. ನಿಜವಾಗೂ ಇದನ್ನೊಂದು ಹೋರಾಟ ಅಂಗವಾಗಿ ಮಾಡಬೇಕಿದೆ. ಕಾಡುಪ್ರಾಣಿಗಳಿಂದ ರಕ್ಷಣೆ ಹಾಗೂ ಸೂಕ್ತ ಪರಿಹಾರಗಳು ರೈತರ ಅಲೆದಾಟ ತಪ್ಪಿಸಿ ತಕ್ಷಣವೇ ಪರಿಹಾರ ಸಿಗುವಂತೆ ಮಾಡಬೇಕಿದೆ.

Advertisement

 

ಇಷ್ಟೇ ಅಲ್ಲ, ರೈತ ಬೆಳೆದ ಬೆಳೆಗಳು ವಿವಿಧ ರೋಗಗಳಿಂದ ನಾಶವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಶಿವಮೊಗ್ಗ, ಕೊಪ್ಪ ಮೊದಲಾದ ಪ್ರದೇಶಗಳಲ್ಲಿ ಅಡಿಕೆಗೆ ಹಳದಿ ರೋಗ ಬಾಧಿಸಿ ಈಗ ವ್ಯಾಪಿಸುತ್ತಲೇ ಇದೆ. ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಈಗ ಅಲ್ಲಲ್ಲಿ  ಅಡಿಕೆ ಹಳದಿ ರೋಗ ಕಂಡುಬರುತ್ತಿದೆ. ಇದಕ್ಕೆ ಇದುವರೆಗೂ ಸೂಕ್ತ ಪರಿಹಾರ ಲಭ್ಯವಾಗಿಲ್ಲ. ಯಾವುದೇ ಇಲಾಖೆಗಳಿಂದಲೂ ಸೂಕ್ತವಾದ ಪರಿಹಾರ ಕಂಡುಹಿಡಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ಇಂತಹ ರೋಗಗಳಿಗೂ ಸೂಕ್ತ ಪರಿಹಾರ ಹಾಗೂ ನ್ಯಾಯಯುತವಾದ ಪರಿಹಾರ ಮಾರ್ಗಗಳು ರೈತರಿಗೆ ಬೇಕಾಗಿದೆ. ಹೋರಾಟಗಳು ಈ ದಿಸೆಯಲ್ಲಿ  ನಡೆಯಬೇಕಿದೆ.

 

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲೂ ಚೆಸ್‌ ಪ್ರತಿಭೆಗಳಿದ್ದಾರೆ | ಗ್ರಾಮೀಣ ಭಾಗದಲ್ಲೂ ಚೆಸ್‌ ಬೆಳೆಯಬೇಕು |”ಚೆಸ್‌ ಇನ್‌ ಸ್ಕೂಲ್”‌ ಆರಂಭವಾಗಲಿ |

ಪ್ರತೀ ಮಗುವಿಗೂ ಚೆಸ್‌ ಲಭ್ಯವಾಗಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಚೆಸ್‌ ತರಬೇತಿ…

8 minutes ago

ಹವಾಮಾನ ವರದಿ | 20-07-2025 | ಮತ್ತೆ ಬದಲಾಯಿತು ಹವಾಮಾನ | ಮಳೆ ಕಡಿಮೆಯಾಗುವ ಲಕ್ಷಣ |

ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…

7 hours ago

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

14 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

14 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

1 day ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

1 day ago