Advertisement
MIRROR FOCUS

ಕೃಷಿ ಹಾನಿಗೆ ರೈತ ತತ್ತರ | ರೈತರ ಬಗ್ಗೆ ಕಾಳಜಿ ಇರುವವರು ಇದನ್ನೂ ಗಮನಿಸಿ..

Share
ಕೃಷಿ ಹಾನಿ ಈಚೆಗೆ ಹೆಚ್ಚಾಗುತ್ತಿದೆ. ಒಂದು ಕಡೆ ಕಾಡು ಪ್ರಾಣಿಗಳ ಕಾಟ, ಇನ್ನೊಂದು ಕಡೆ ವಿವಿಧ ರೋಗಗಳ ಕಾಟ. ಇದೆರಡೂ ಇಂದು ಕೃಷಿಕರಿಗೆ ಬಹುದೊಡ್ಡ ಸವಾಲಾಗಿದೆ. ನಿಜವಾಗಿಯೂ ರೈತ ಪರವಾಗಿರುವ ಮಂದಿ ಇದಕ್ಕೆ ಪರಿಹಾರ ಕೊಡಿಸುವ ಕೆಲಸ ಮಾಡಬೇಕಿದೆ.
Advertisement
Advertisement

ಮಲೆನಾಡು ಹಾಗೂ ಕರಾವಳಿ ಭಾಗ ಸೇರಿದಂತೆ ಎಲ್ಲ ಭಾಗಗಳಲ್ಲೂ ಕಾಡು ಪ್ರಾಣಿಗಳ ಹಾವಳಿ ಕೃಷಿಗೆ ಹೆಚ್ಚಾಗಿದೆ. ಆದರೆ ಸರಕಾರದಿಂದ ಯಾವ ಪರಿಹಾರವೂ ಲಭ್ಯವಾಗುತ್ತಿಲ್ಲ. ಒಂದು ವೇಳೆ ಪರಿಹಾರ ಲಭ್ಯವಾಗುತ್ತಿದ್ದರೂ ರೈತರು ಸಾಕಷ್ಟು ಬಾರಿ ಇಲಾಖೆಗಳಿಗೆ ಅಲೆದಾಟ ಮಾಡಿ ಕಿಂಚಿತ್‌ ಪರಿಹಾರ ಲಭ್ಯವಾಗುತ್ತಿದೆ. ಹೀಗಾಗಿ ಇದೊಂದು ಸಂಕಷ್ಟದಿಂದ ರೈತರನ್ನು  ಪಾರು ಮಾಡಬೇಕಿದೆ. ಸರಿಯಾಗಿ ಬೆಳೆ ಬೆಳೆಯಲು ಆಗದ ಮೇಲೆ ಮಾರಾಟ ಹೇಗೆ ಸಾಧ್ಯ ? ಇಂದು ರೈತ ಮಸೂದೆ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆ ಕಂಡುಬರುತ್ತಿದೆ. ಅದಕ್ಕಿಂತಲೂ ಹೆಚ್ಚಾಗಿ ಬೆಳೆ ಬೆಳೆಯಲೇ ಆಗದೇ ಇದ್ದರೆ ರೈತ ಬದುಕು ಸಾಗಿಸುವುದು  ಹೇಗೆ ? ಈ ಬಗ್ಗೆ ಸೂಕ್ತವಾದ ಕ್ರಮಗಳು ಅಗತ್ಯವಾಗಿದೆ.

ಈಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಪ್ರದೇಶದಲ್ಲಿ  ರೈತರು ಅವರ ಜಮೀನಿನಲ್ಲಿ ಬೆಳೆದ ಬೆಳೆಗೆ ಕಾಡಾನೆ ಧಾಳಿ ಮಾಡಿದೆ. ಇದರಿಂದ ಕೃಷಿ ನಾಶವಾಗಿದೆ. ಕೊಡಗು ಜಿಲ್ಲೆಯ ಮರಿಕೆಯ  ಕುಮುದಿನಿ ಅವರ ಕೃಷಿ ಜಾಗಕ್ಕೆ ಕೂಡಾ ಕಾಡಾನೆ ದಾಳಿ ಮಾಡಿ ಅಪಾರವಾದ ಕೃಷಿ ನಷ್ಟ ಗೊಂಡಿರುತ್ತದೆ. ಕೃಷಿ ಜಾಗದಲ್ಲಿ ಫಸಲು ಬರುತ್ತಿರುವ ತೆಂಗು, ಅಡಿಕೆ, ಬಾಳೆ ಕೃಷಿಯು ನಾಶಗೊಂಡಿರುತ್ತದೆ. ಕಳೆದ ತಿಂಗಳು ಸುಳ್ಯ ತಾಲೂಕಿನ ಮಂಡೆಕೋಲು, ಆಲೆಟ್ಟಿ ಪ್ರದೇಶದಲ್ಲಿ  ಕಾಡಾನೆ ಧಾಳಿ ಮಾಡಿದರೆ , ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ, ಪುತ್ತೂರು ತಾಲೂಕಿನ ಗುಂಡ್ಯ ಮೊದಲಾದ ಕಡೆಗಳಲ್ಲೂ ಆನೆ ಹಾವಳಿ ಇದೆ. ಈ ಹಾನಿ ನೋಡುವಾಗ ಯಾವುದೇ ಕೃಷಿಕನಿಗೆ ಕರುಳು ಚುರುಕ್‌ ಅನ್ನುತ್ತದೆ. ನಿಜವಾಗೂ ಇದನ್ನೊಂದು ಹೋರಾಟ ಅಂಗವಾಗಿ ಮಾಡಬೇಕಿದೆ. ಕಾಡುಪ್ರಾಣಿಗಳಿಂದ ರಕ್ಷಣೆ ಹಾಗೂ ಸೂಕ್ತ ಪರಿಹಾರಗಳು ರೈತರ ಅಲೆದಾಟ ತಪ್ಪಿಸಿ ತಕ್ಷಣವೇ ಪರಿಹಾರ ಸಿಗುವಂತೆ ಮಾಡಬೇಕಿದೆ.

 

ಇಷ್ಟೇ ಅಲ್ಲ, ರೈತ ಬೆಳೆದ ಬೆಳೆಗಳು ವಿವಿಧ ರೋಗಗಳಿಂದ ನಾಶವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಶಿವಮೊಗ್ಗ, ಕೊಪ್ಪ ಮೊದಲಾದ ಪ್ರದೇಶಗಳಲ್ಲಿ ಅಡಿಕೆಗೆ ಹಳದಿ ರೋಗ ಬಾಧಿಸಿ ಈಗ ವ್ಯಾಪಿಸುತ್ತಲೇ ಇದೆ. ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಈಗ ಅಲ್ಲಲ್ಲಿ  ಅಡಿಕೆ ಹಳದಿ ರೋಗ ಕಂಡುಬರುತ್ತಿದೆ. ಇದಕ್ಕೆ ಇದುವರೆಗೂ ಸೂಕ್ತ ಪರಿಹಾರ ಲಭ್ಯವಾಗಿಲ್ಲ. ಯಾವುದೇ ಇಲಾಖೆಗಳಿಂದಲೂ ಸೂಕ್ತವಾದ ಪರಿಹಾರ ಕಂಡುಹಿಡಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ಇಂತಹ ರೋಗಗಳಿಗೂ ಸೂಕ್ತ ಪರಿಹಾರ ಹಾಗೂ ನ್ಯಾಯಯುತವಾದ ಪರಿಹಾರ ಮಾರ್ಗಗಳು ರೈತರಿಗೆ ಬೇಕಾಗಿದೆ. ಹೋರಾಟಗಳು ಈ ದಿಸೆಯಲ್ಲಿ  ನಡೆಯಬೇಕಿದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

7 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago