Advertisement
MIRROR FOCUS

ಕೃಷಿ ಹಾನಿಗೆ ರೈತ ತತ್ತರ | ರೈತರ ಬಗ್ಗೆ ಕಾಳಜಿ ಇರುವವರು ಇದನ್ನೂ ಗಮನಿಸಿ..

Share
ಕೃಷಿ ಹಾನಿ ಈಚೆಗೆ ಹೆಚ್ಚಾಗುತ್ತಿದೆ. ಒಂದು ಕಡೆ ಕಾಡು ಪ್ರಾಣಿಗಳ ಕಾಟ, ಇನ್ನೊಂದು ಕಡೆ ವಿವಿಧ ರೋಗಗಳ ಕಾಟ. ಇದೆರಡೂ ಇಂದು ಕೃಷಿಕರಿಗೆ ಬಹುದೊಡ್ಡ ಸವಾಲಾಗಿದೆ. ನಿಜವಾಗಿಯೂ ರೈತ ಪರವಾಗಿರುವ ಮಂದಿ ಇದಕ್ಕೆ ಪರಿಹಾರ ಕೊಡಿಸುವ ಕೆಲಸ ಮಾಡಬೇಕಿದೆ.

ಮಲೆನಾಡು ಹಾಗೂ ಕರಾವಳಿ ಭಾಗ ಸೇರಿದಂತೆ ಎಲ್ಲ ಭಾಗಗಳಲ್ಲೂ ಕಾಡು ಪ್ರಾಣಿಗಳ ಹಾವಳಿ ಕೃಷಿಗೆ ಹೆಚ್ಚಾಗಿದೆ. ಆದರೆ ಸರಕಾರದಿಂದ ಯಾವ ಪರಿಹಾರವೂ ಲಭ್ಯವಾಗುತ್ತಿಲ್ಲ. ಒಂದು ವೇಳೆ ಪರಿಹಾರ ಲಭ್ಯವಾಗುತ್ತಿದ್ದರೂ ರೈತರು ಸಾಕಷ್ಟು ಬಾರಿ ಇಲಾಖೆಗಳಿಗೆ ಅಲೆದಾಟ ಮಾಡಿ ಕಿಂಚಿತ್‌ ಪರಿಹಾರ ಲಭ್ಯವಾಗುತ್ತಿದೆ. ಹೀಗಾಗಿ ಇದೊಂದು ಸಂಕಷ್ಟದಿಂದ ರೈತರನ್ನು  ಪಾರು ಮಾಡಬೇಕಿದೆ. ಸರಿಯಾಗಿ ಬೆಳೆ ಬೆಳೆಯಲು ಆಗದ ಮೇಲೆ ಮಾರಾಟ ಹೇಗೆ ಸಾಧ್ಯ ? ಇಂದು ರೈತ ಮಸೂದೆ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆ ಕಂಡುಬರುತ್ತಿದೆ. ಅದಕ್ಕಿಂತಲೂ ಹೆಚ್ಚಾಗಿ ಬೆಳೆ ಬೆಳೆಯಲೇ ಆಗದೇ ಇದ್ದರೆ ರೈತ ಬದುಕು ಸಾಗಿಸುವುದು  ಹೇಗೆ ? ಈ ಬಗ್ಗೆ ಸೂಕ್ತವಾದ ಕ್ರಮಗಳು ಅಗತ್ಯವಾಗಿದೆ.

ಈಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಪ್ರದೇಶದಲ್ಲಿ  ರೈತರು ಅವರ ಜಮೀನಿನಲ್ಲಿ ಬೆಳೆದ ಬೆಳೆಗೆ ಕಾಡಾನೆ ಧಾಳಿ ಮಾಡಿದೆ. ಇದರಿಂದ ಕೃಷಿ ನಾಶವಾಗಿದೆ. ಕೊಡಗು ಜಿಲ್ಲೆಯ ಮರಿಕೆಯ  ಕುಮುದಿನಿ ಅವರ ಕೃಷಿ ಜಾಗಕ್ಕೆ ಕೂಡಾ ಕಾಡಾನೆ ದಾಳಿ ಮಾಡಿ ಅಪಾರವಾದ ಕೃಷಿ ನಷ್ಟ ಗೊಂಡಿರುತ್ತದೆ. ಕೃಷಿ ಜಾಗದಲ್ಲಿ ಫಸಲು ಬರುತ್ತಿರುವ ತೆಂಗು, ಅಡಿಕೆ, ಬಾಳೆ ಕೃಷಿಯು ನಾಶಗೊಂಡಿರುತ್ತದೆ. ಕಳೆದ ತಿಂಗಳು ಸುಳ್ಯ ತಾಲೂಕಿನ ಮಂಡೆಕೋಲು, ಆಲೆಟ್ಟಿ ಪ್ರದೇಶದಲ್ಲಿ  ಕಾಡಾನೆ ಧಾಳಿ ಮಾಡಿದರೆ , ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ, ಪುತ್ತೂರು ತಾಲೂಕಿನ ಗುಂಡ್ಯ ಮೊದಲಾದ ಕಡೆಗಳಲ್ಲೂ ಆನೆ ಹಾವಳಿ ಇದೆ. ಈ ಹಾನಿ ನೋಡುವಾಗ ಯಾವುದೇ ಕೃಷಿಕನಿಗೆ ಕರುಳು ಚುರುಕ್‌ ಅನ್ನುತ್ತದೆ. ನಿಜವಾಗೂ ಇದನ್ನೊಂದು ಹೋರಾಟ ಅಂಗವಾಗಿ ಮಾಡಬೇಕಿದೆ. ಕಾಡುಪ್ರಾಣಿಗಳಿಂದ ರಕ್ಷಣೆ ಹಾಗೂ ಸೂಕ್ತ ಪರಿಹಾರಗಳು ರೈತರ ಅಲೆದಾಟ ತಪ್ಪಿಸಿ ತಕ್ಷಣವೇ ಪರಿಹಾರ ಸಿಗುವಂತೆ ಮಾಡಬೇಕಿದೆ.

 

ಇಷ್ಟೇ ಅಲ್ಲ, ರೈತ ಬೆಳೆದ ಬೆಳೆಗಳು ವಿವಿಧ ರೋಗಗಳಿಂದ ನಾಶವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಶಿವಮೊಗ್ಗ, ಕೊಪ್ಪ ಮೊದಲಾದ ಪ್ರದೇಶಗಳಲ್ಲಿ ಅಡಿಕೆಗೆ ಹಳದಿ ರೋಗ ಬಾಧಿಸಿ ಈಗ ವ್ಯಾಪಿಸುತ್ತಲೇ ಇದೆ. ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಈಗ ಅಲ್ಲಲ್ಲಿ  ಅಡಿಕೆ ಹಳದಿ ರೋಗ ಕಂಡುಬರುತ್ತಿದೆ. ಇದಕ್ಕೆ ಇದುವರೆಗೂ ಸೂಕ್ತ ಪರಿಹಾರ ಲಭ್ಯವಾಗಿಲ್ಲ. ಯಾವುದೇ ಇಲಾಖೆಗಳಿಂದಲೂ ಸೂಕ್ತವಾದ ಪರಿಹಾರ ಕಂಡುಹಿಡಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ಇಂತಹ ರೋಗಗಳಿಗೂ ಸೂಕ್ತ ಪರಿಹಾರ ಹಾಗೂ ನ್ಯಾಯಯುತವಾದ ಪರಿಹಾರ ಮಾರ್ಗಗಳು ರೈತರಿಗೆ ಬೇಕಾಗಿದೆ. ಹೋರಾಟಗಳು ಈ ದಿಸೆಯಲ್ಲಿ  ನಡೆಯಬೇಕಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

4 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

4 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

4 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

4 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

21 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago