Advertisement
MIRROR FOCUS

ಕೃಷಿ ಹಾನಿಗೆ ರೈತ ತತ್ತರ | ರೈತರ ಬಗ್ಗೆ ಕಾಳಜಿ ಇರುವವರು ಇದನ್ನೂ ಗಮನಿಸಿ..

Share
ಕೃಷಿ ಹಾನಿ ಈಚೆಗೆ ಹೆಚ್ಚಾಗುತ್ತಿದೆ. ಒಂದು ಕಡೆ ಕಾಡು ಪ್ರಾಣಿಗಳ ಕಾಟ, ಇನ್ನೊಂದು ಕಡೆ ವಿವಿಧ ರೋಗಗಳ ಕಾಟ. ಇದೆರಡೂ ಇಂದು ಕೃಷಿಕರಿಗೆ ಬಹುದೊಡ್ಡ ಸವಾಲಾಗಿದೆ. ನಿಜವಾಗಿಯೂ ರೈತ ಪರವಾಗಿರುವ ಮಂದಿ ಇದಕ್ಕೆ ಪರಿಹಾರ ಕೊಡಿಸುವ ಕೆಲಸ ಮಾಡಬೇಕಿದೆ.

ಮಲೆನಾಡು ಹಾಗೂ ಕರಾವಳಿ ಭಾಗ ಸೇರಿದಂತೆ ಎಲ್ಲ ಭಾಗಗಳಲ್ಲೂ ಕಾಡು ಪ್ರಾಣಿಗಳ ಹಾವಳಿ ಕೃಷಿಗೆ ಹೆಚ್ಚಾಗಿದೆ. ಆದರೆ ಸರಕಾರದಿಂದ ಯಾವ ಪರಿಹಾರವೂ ಲಭ್ಯವಾಗುತ್ತಿಲ್ಲ. ಒಂದು ವೇಳೆ ಪರಿಹಾರ ಲಭ್ಯವಾಗುತ್ತಿದ್ದರೂ ರೈತರು ಸಾಕಷ್ಟು ಬಾರಿ ಇಲಾಖೆಗಳಿಗೆ ಅಲೆದಾಟ ಮಾಡಿ ಕಿಂಚಿತ್‌ ಪರಿಹಾರ ಲಭ್ಯವಾಗುತ್ತಿದೆ. ಹೀಗಾಗಿ ಇದೊಂದು ಸಂಕಷ್ಟದಿಂದ ರೈತರನ್ನು  ಪಾರು ಮಾಡಬೇಕಿದೆ. ಸರಿಯಾಗಿ ಬೆಳೆ ಬೆಳೆಯಲು ಆಗದ ಮೇಲೆ ಮಾರಾಟ ಹೇಗೆ ಸಾಧ್ಯ ? ಇಂದು ರೈತ ಮಸೂದೆ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆ ಕಂಡುಬರುತ್ತಿದೆ. ಅದಕ್ಕಿಂತಲೂ ಹೆಚ್ಚಾಗಿ ಬೆಳೆ ಬೆಳೆಯಲೇ ಆಗದೇ ಇದ್ದರೆ ರೈತ ಬದುಕು ಸಾಗಿಸುವುದು  ಹೇಗೆ ? ಈ ಬಗ್ಗೆ ಸೂಕ್ತವಾದ ಕ್ರಮಗಳು ಅಗತ್ಯವಾಗಿದೆ.

ಈಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಪ್ರದೇಶದಲ್ಲಿ  ರೈತರು ಅವರ ಜಮೀನಿನಲ್ಲಿ ಬೆಳೆದ ಬೆಳೆಗೆ ಕಾಡಾನೆ ಧಾಳಿ ಮಾಡಿದೆ. ಇದರಿಂದ ಕೃಷಿ ನಾಶವಾಗಿದೆ. ಕೊಡಗು ಜಿಲ್ಲೆಯ ಮರಿಕೆಯ  ಕುಮುದಿನಿ ಅವರ ಕೃಷಿ ಜಾಗಕ್ಕೆ ಕೂಡಾ ಕಾಡಾನೆ ದಾಳಿ ಮಾಡಿ ಅಪಾರವಾದ ಕೃಷಿ ನಷ್ಟ ಗೊಂಡಿರುತ್ತದೆ. ಕೃಷಿ ಜಾಗದಲ್ಲಿ ಫಸಲು ಬರುತ್ತಿರುವ ತೆಂಗು, ಅಡಿಕೆ, ಬಾಳೆ ಕೃಷಿಯು ನಾಶಗೊಂಡಿರುತ್ತದೆ. ಕಳೆದ ತಿಂಗಳು ಸುಳ್ಯ ತಾಲೂಕಿನ ಮಂಡೆಕೋಲು, ಆಲೆಟ್ಟಿ ಪ್ರದೇಶದಲ್ಲಿ  ಕಾಡಾನೆ ಧಾಳಿ ಮಾಡಿದರೆ , ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ, ಪುತ್ತೂರು ತಾಲೂಕಿನ ಗುಂಡ್ಯ ಮೊದಲಾದ ಕಡೆಗಳಲ್ಲೂ ಆನೆ ಹಾವಳಿ ಇದೆ. ಈ ಹಾನಿ ನೋಡುವಾಗ ಯಾವುದೇ ಕೃಷಿಕನಿಗೆ ಕರುಳು ಚುರುಕ್‌ ಅನ್ನುತ್ತದೆ. ನಿಜವಾಗೂ ಇದನ್ನೊಂದು ಹೋರಾಟ ಅಂಗವಾಗಿ ಮಾಡಬೇಕಿದೆ. ಕಾಡುಪ್ರಾಣಿಗಳಿಂದ ರಕ್ಷಣೆ ಹಾಗೂ ಸೂಕ್ತ ಪರಿಹಾರಗಳು ರೈತರ ಅಲೆದಾಟ ತಪ್ಪಿಸಿ ತಕ್ಷಣವೇ ಪರಿಹಾರ ಸಿಗುವಂತೆ ಮಾಡಬೇಕಿದೆ.

 

ಇಷ್ಟೇ ಅಲ್ಲ, ರೈತ ಬೆಳೆದ ಬೆಳೆಗಳು ವಿವಿಧ ರೋಗಗಳಿಂದ ನಾಶವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಶಿವಮೊಗ್ಗ, ಕೊಪ್ಪ ಮೊದಲಾದ ಪ್ರದೇಶಗಳಲ್ಲಿ ಅಡಿಕೆಗೆ ಹಳದಿ ರೋಗ ಬಾಧಿಸಿ ಈಗ ವ್ಯಾಪಿಸುತ್ತಲೇ ಇದೆ. ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಈಗ ಅಲ್ಲಲ್ಲಿ  ಅಡಿಕೆ ಹಳದಿ ರೋಗ ಕಂಡುಬರುತ್ತಿದೆ. ಇದಕ್ಕೆ ಇದುವರೆಗೂ ಸೂಕ್ತ ಪರಿಹಾರ ಲಭ್ಯವಾಗಿಲ್ಲ. ಯಾವುದೇ ಇಲಾಖೆಗಳಿಂದಲೂ ಸೂಕ್ತವಾದ ಪರಿಹಾರ ಕಂಡುಹಿಡಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ಇಂತಹ ರೋಗಗಳಿಗೂ ಸೂಕ್ತ ಪರಿಹಾರ ಹಾಗೂ ನ್ಯಾಯಯುತವಾದ ಪರಿಹಾರ ಮಾರ್ಗಗಳು ರೈತರಿಗೆ ಬೇಕಾಗಿದೆ. ಹೋರಾಟಗಳು ಈ ದಿಸೆಯಲ್ಲಿ  ನಡೆಯಬೇಕಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

16 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

23 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

23 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago