Advertisement
MIRROR FOCUS

ಕೃಷಿ ಹಾನಿಗೆ ರೈತ ತತ್ತರ | ರೈತರ ಬಗ್ಗೆ ಕಾಳಜಿ ಇರುವವರು ಇದನ್ನೂ ಗಮನಿಸಿ..

Share
ಕೃಷಿ ಹಾನಿ ಈಚೆಗೆ ಹೆಚ್ಚಾಗುತ್ತಿದೆ. ಒಂದು ಕಡೆ ಕಾಡು ಪ್ರಾಣಿಗಳ ಕಾಟ, ಇನ್ನೊಂದು ಕಡೆ ವಿವಿಧ ರೋಗಗಳ ಕಾಟ. ಇದೆರಡೂ ಇಂದು ಕೃಷಿಕರಿಗೆ ಬಹುದೊಡ್ಡ ಸವಾಲಾಗಿದೆ. ನಿಜವಾಗಿಯೂ ರೈತ ಪರವಾಗಿರುವ ಮಂದಿ ಇದಕ್ಕೆ ಪರಿಹಾರ ಕೊಡಿಸುವ ಕೆಲಸ ಮಾಡಬೇಕಿದೆ.

ಮಲೆನಾಡು ಹಾಗೂ ಕರಾವಳಿ ಭಾಗ ಸೇರಿದಂತೆ ಎಲ್ಲ ಭಾಗಗಳಲ್ಲೂ ಕಾಡು ಪ್ರಾಣಿಗಳ ಹಾವಳಿ ಕೃಷಿಗೆ ಹೆಚ್ಚಾಗಿದೆ. ಆದರೆ ಸರಕಾರದಿಂದ ಯಾವ ಪರಿಹಾರವೂ ಲಭ್ಯವಾಗುತ್ತಿಲ್ಲ. ಒಂದು ವೇಳೆ ಪರಿಹಾರ ಲಭ್ಯವಾಗುತ್ತಿದ್ದರೂ ರೈತರು ಸಾಕಷ್ಟು ಬಾರಿ ಇಲಾಖೆಗಳಿಗೆ ಅಲೆದಾಟ ಮಾಡಿ ಕಿಂಚಿತ್‌ ಪರಿಹಾರ ಲಭ್ಯವಾಗುತ್ತಿದೆ. ಹೀಗಾಗಿ ಇದೊಂದು ಸಂಕಷ್ಟದಿಂದ ರೈತರನ್ನು  ಪಾರು ಮಾಡಬೇಕಿದೆ. ಸರಿಯಾಗಿ ಬೆಳೆ ಬೆಳೆಯಲು ಆಗದ ಮೇಲೆ ಮಾರಾಟ ಹೇಗೆ ಸಾಧ್ಯ ? ಇಂದು ರೈತ ಮಸೂದೆ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆ ಕಂಡುಬರುತ್ತಿದೆ. ಅದಕ್ಕಿಂತಲೂ ಹೆಚ್ಚಾಗಿ ಬೆಳೆ ಬೆಳೆಯಲೇ ಆಗದೇ ಇದ್ದರೆ ರೈತ ಬದುಕು ಸಾಗಿಸುವುದು  ಹೇಗೆ ? ಈ ಬಗ್ಗೆ ಸೂಕ್ತವಾದ ಕ್ರಮಗಳು ಅಗತ್ಯವಾಗಿದೆ.

ಈಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಪ್ರದೇಶದಲ್ಲಿ  ರೈತರು ಅವರ ಜಮೀನಿನಲ್ಲಿ ಬೆಳೆದ ಬೆಳೆಗೆ ಕಾಡಾನೆ ಧಾಳಿ ಮಾಡಿದೆ. ಇದರಿಂದ ಕೃಷಿ ನಾಶವಾಗಿದೆ. ಕೊಡಗು ಜಿಲ್ಲೆಯ ಮರಿಕೆಯ  ಕುಮುದಿನಿ ಅವರ ಕೃಷಿ ಜಾಗಕ್ಕೆ ಕೂಡಾ ಕಾಡಾನೆ ದಾಳಿ ಮಾಡಿ ಅಪಾರವಾದ ಕೃಷಿ ನಷ್ಟ ಗೊಂಡಿರುತ್ತದೆ. ಕೃಷಿ ಜಾಗದಲ್ಲಿ ಫಸಲು ಬರುತ್ತಿರುವ ತೆಂಗು, ಅಡಿಕೆ, ಬಾಳೆ ಕೃಷಿಯು ನಾಶಗೊಂಡಿರುತ್ತದೆ. ಕಳೆದ ತಿಂಗಳು ಸುಳ್ಯ ತಾಲೂಕಿನ ಮಂಡೆಕೋಲು, ಆಲೆಟ್ಟಿ ಪ್ರದೇಶದಲ್ಲಿ  ಕಾಡಾನೆ ಧಾಳಿ ಮಾಡಿದರೆ , ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ, ಪುತ್ತೂರು ತಾಲೂಕಿನ ಗುಂಡ್ಯ ಮೊದಲಾದ ಕಡೆಗಳಲ್ಲೂ ಆನೆ ಹಾವಳಿ ಇದೆ. ಈ ಹಾನಿ ನೋಡುವಾಗ ಯಾವುದೇ ಕೃಷಿಕನಿಗೆ ಕರುಳು ಚುರುಕ್‌ ಅನ್ನುತ್ತದೆ. ನಿಜವಾಗೂ ಇದನ್ನೊಂದು ಹೋರಾಟ ಅಂಗವಾಗಿ ಮಾಡಬೇಕಿದೆ. ಕಾಡುಪ್ರಾಣಿಗಳಿಂದ ರಕ್ಷಣೆ ಹಾಗೂ ಸೂಕ್ತ ಪರಿಹಾರಗಳು ರೈತರ ಅಲೆದಾಟ ತಪ್ಪಿಸಿ ತಕ್ಷಣವೇ ಪರಿಹಾರ ಸಿಗುವಂತೆ ಮಾಡಬೇಕಿದೆ.

 

ಇಷ್ಟೇ ಅಲ್ಲ, ರೈತ ಬೆಳೆದ ಬೆಳೆಗಳು ವಿವಿಧ ರೋಗಗಳಿಂದ ನಾಶವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಶಿವಮೊಗ್ಗ, ಕೊಪ್ಪ ಮೊದಲಾದ ಪ್ರದೇಶಗಳಲ್ಲಿ ಅಡಿಕೆಗೆ ಹಳದಿ ರೋಗ ಬಾಧಿಸಿ ಈಗ ವ್ಯಾಪಿಸುತ್ತಲೇ ಇದೆ. ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಈಗ ಅಲ್ಲಲ್ಲಿ  ಅಡಿಕೆ ಹಳದಿ ರೋಗ ಕಂಡುಬರುತ್ತಿದೆ. ಇದಕ್ಕೆ ಇದುವರೆಗೂ ಸೂಕ್ತ ಪರಿಹಾರ ಲಭ್ಯವಾಗಿಲ್ಲ. ಯಾವುದೇ ಇಲಾಖೆಗಳಿಂದಲೂ ಸೂಕ್ತವಾದ ಪರಿಹಾರ ಕಂಡುಹಿಡಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ಇಂತಹ ರೋಗಗಳಿಗೂ ಸೂಕ್ತ ಪರಿಹಾರ ಹಾಗೂ ನ್ಯಾಯಯುತವಾದ ಪರಿಹಾರ ಮಾರ್ಗಗಳು ರೈತರಿಗೆ ಬೇಕಾಗಿದೆ. ಹೋರಾಟಗಳು ಈ ದಿಸೆಯಲ್ಲಿ  ನಡೆಯಬೇಕಿದೆ.

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago