#Agriculture | ಕೃಷಿಯಲ್ಲಿ ಕರ್ನಾಟಕ ಹಲವು ಬೆಳೆಯಲ್ಲಿ ಮುಂದು | ಅಡಿಕೆ, ಕಾಫಿ, ರಾಗಿಯಲ್ಲಿ ಮುಂದಿದೆ ನಮ್ಮ ನಾಡು |

August 19, 2023
2:33 PM
ರಾಜ್ಯದಲ್ಲಿ ಕೃಷಿ ವಸ್ತುಗಳ ಉತ್ಪಾದನೆಯಲ್ಲಿ ಮಹತ್ವದ ಸ್ಥಾನ ಪಡದಿದೆ. ಅಡಿಕೆ, ಕಾಫಿ, ರಾಗಿ ಮೊದಲಾದ ಬೆಳೆಗಳಿಗೆ ತನ್ನದೇ ಆದ ವಿಶೇಷ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ.

ಕರ್ನಾಟಕ ರಾಜ್ಯವು ಕೃಷಿಯಲ್ಲೂ ಮುಂದಿದೆ. ಹಲವು ಬೆಳೆಗಳಲ್ಲಿ ರಾಜ್ಯವು ತನ್ನದೇ ಸ್ಥಾನವನ್ನು ಪಡೆದುಕೊಂಡಿದೆ. ಅದರಲ್ಲಿ ಕಾಫಿ, ಅಡಿಕೆ, ರಾಗಿ, ರೇಷ್ಮೆ, ಸೂರ್ಯಕಾಂತಿ,  ಹಸಿರು ಮೆಣಸಿನಕಾಯಿ, ಕ್ಯಾಪ್ಸಿಕಂ, ಹುಣಸೆ ಕೃಷಿಯಲ್ಲಿ ನಂಬರ್‌ ವನ್‌ ಸ್ಥಾನದಲ್ಲಿದೆ.

Advertisement
Advertisement

ಭಾರತಲ್ಲಿ ಸರಿಸುಮಾರು 50 ಕಿಲೋ ಮೀಟರಿಗೊಂದು ಮಣ್ಣಿನ ತರಗತಿ ಬದಲಾಗುತ್ತದೆ. ಹೀಗೆ ಮಣ್ಣಿನ ತರಗತಿ ಬದಲಾದಂತೆ ಕೃಷಿಯೂ ಬದಲಾಗುತ್ತದೆ. ಕೆಲವು ರಾಜ್ಯಗಳಲ್ಲಿ ಕೆಲವು ಬೆಳಗಳಿಗೆ ವಿಶೇಷವಾದ ಸ್ಥಾನ ಇದೆ. ಗುಣಮಟ್ಟದಲ್ಲೂ ವ್ಯತ್ಯಾಸ ಇರುತ್ತದೆ. ಕೊಡಗಿಗೆ ಹೋದರೆ ಕಾಫಿಯೇ ಸರ್ವಶ್ರೇಷ್ಟ. ದಕ್ಷಿಣ ಕನ್ನಡಕ್ಕೆ ಬಂದರೆ ಅಡಿಕೆ, ಕೇರಳಕ್ಕೆ ಹೋದರೆ ರಬ್ಬರ್‌ ಹೀಗೇ ಆಯಾ ಪ್ರದೇಶದಲ್ಲಿ ಅದರದ್ದೇ ಆದ ವಿಶೇಷ ಗುಣಗಳು ಇರುತ್ತದೆ. ದೇಶದ ಆರನೇ ಅತಿದೊಡ್ಡ ರಾಜ್ಯವಾಗಿರುವ  ಕರ್ನಾಟಕದ ಕೃಷಿಯೂ ಗಮನಾರ್ಹವಾಗಿ ಬೆಳೆದಿದೆ. ಅದರಲ್ಲಿ ಕೆಲವು ಬೆಳೆಗಳು ನಂಬರ್‌ ವನ್.‌ ಕಾಫಿ, ಅಡಿಕೆ, ರಾಗಿ, ರೇಷ್ಮೆ, ಸೂರ್ಯಕಾಂತಿ,  ಹಸಿರು ಮೆಣಸಿನಕಾಯಿ, ಕ್ಯಾಪ್ಸಿಕಂ, ಹುಣಸೆ ಕೃಷಿಯಲ್ಲಿ ನಂಬರ್‌ ವನ್‌ ಸ್ಥಾನದಲ್ಲಿದೆ. ಟೊಮೇಟೊ, ಸಪೋಟಾ, ತೆಂಗಿನಕಾಯಿ ದ್ವಿತೀಯ ಸ್ಥಾನದಲ್ಲಿ ಬೆಳೆಯುವ ಬೆಳೆ. ದಾಳಿಂಬೆ, ಅನಾನಸ್, ಪಪ್ಪಾಯಿ, ಈರುಳ್ಳಿ ತೃತೀಯ ಸ್ಥಾನದಲ್ಲಿ ಬೆಳೆಯುವ ಬೆಳೆಯಾಗಿದೆ.

Advertisement

ದೇಶದ ಕಾಫಿ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು 71%. ಈ ಪೈಕಿ ಕೊಡಗಿನಲ್ಲೇ 33% ಕಾಫಿ ಉತ್ಪಾದನೆಯಾಗುತ್ತದೆ. ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ನಂ.1 ಸ್ಥಾನ ಪಡೆದಿದೆ. ದೇಶದ ಒಟ್ಟು ಅಡಿಕೆ ಉತ್ಪಾದನೆಯ ಪೈಕಿ ಶೇ 40% ಅಡಿಕೆ ಉತ್ಪಾದನೆ ಕರ್ನಾಟಕದಲ್ಲಾಗುತ್ತದೆ. ದೇಶದ ರಾಗಿ ಉತ್ಪಾದನೆಯ ಪೈಕಿ 64.8% ಕರ್ನಾಟಕದಲ್ಲೇ ಬೆಳೆಯಲಾಗುತ್ತದೆ. ರೇಷ್ಮೆ ಉತ್ಪಾದನೆಯಲ್ಲಿ  ಪ್ರತಿ ವರ್ಷ 8,200 ಮೆಟ್ರಿಕ್ ಟನ್ ರೇಷ್ಮೆಯನ್ನು ಕರ್ನಾಟಕದಲ್ಲಿ ಉತ್ಪಾದನೆ ಮಾಡಲಾಗುತ್ತದೆ.  ರಾಜ್ಯದಲ್ಲಿ ಪ್ರತಿ ವರ್ಷ 3.04 ಲಕ್ಷ ಟನ್ ಸೂರ್ಯಕಾಂತಿ ಉತ್ಪಾದಿಸಲಾಗುತ್ತದೆ. ಕರ್ನಾಟಕದ ಬಳಿಕ ಆಂಧ್ರಪ್ರದೇಶ, ಮಹಾರಾಷ್ಟ್ರ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ದೇಶದ ತೆಂಗು ಉತ್ಪಾದನೆಯ ಪೈಕಿ ಕರ್ನಾಟಕದ ಪಾಲು 23% ಇದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯ ಚೆಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರಾಗಿ ರಮೇಶ್‌ ಕೋಟೆ ಆಯ್ಕೆ
September 30, 2024
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2024 | ಗುಡುಗು ಸಹಿತ ಮಳೆ ಸಾಧ್ಯತೆ |
September 30, 2024
1:46 PM
by: ಸಾಯಿಶೇಖರ್ ಕರಿಕಳ
ದೇಶದ ಕೃಷಿ ವಿಜ್ಞಾನ ಕೇಂದ್ರಗಳಿಗೆ 50 ವರ್ಷ | ದಾವಣಗೆರೆಯಲ್ಲಿ ಸಸ್ಯ ಸಂತೆ ಆಯೋಜನೆ
September 29, 2024
10:21 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29.09.2024 | ಮುಂದಿನ 10 ದಿನಗಳ ಕಾಲ ಗುಡುಗು ಸಹಿತ ಮಳೆ ನಿರೀಕ್ಷೆ
September 29, 2024
12:28 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror