Advertisement
ಸುದ್ದಿಗಳು

#Agriculture | ಕೃಷಿಯಲ್ಲಿ ಕರ್ನಾಟಕ ಹಲವು ಬೆಳೆಯಲ್ಲಿ ಮುಂದು | ಅಡಿಕೆ, ಕಾಫಿ, ರಾಗಿಯಲ್ಲಿ ಮುಂದಿದೆ ನಮ್ಮ ನಾಡು |

Share

ಕರ್ನಾಟಕ ರಾಜ್ಯವು ಕೃಷಿಯಲ್ಲೂ ಮುಂದಿದೆ. ಹಲವು ಬೆಳೆಗಳಲ್ಲಿ ರಾಜ್ಯವು ತನ್ನದೇ ಸ್ಥಾನವನ್ನು ಪಡೆದುಕೊಂಡಿದೆ. ಅದರಲ್ಲಿ ಕಾಫಿ, ಅಡಿಕೆ, ರಾಗಿ, ರೇಷ್ಮೆ, ಸೂರ್ಯಕಾಂತಿ,  ಹಸಿರು ಮೆಣಸಿನಕಾಯಿ, ಕ್ಯಾಪ್ಸಿಕಂ, ಹುಣಸೆ ಕೃಷಿಯಲ್ಲಿ ನಂಬರ್‌ ವನ್‌ ಸ್ಥಾನದಲ್ಲಿದೆ.

Advertisement
Advertisement
Advertisement
Advertisement

ಭಾರತಲ್ಲಿ ಸರಿಸುಮಾರು 50 ಕಿಲೋ ಮೀಟರಿಗೊಂದು ಮಣ್ಣಿನ ತರಗತಿ ಬದಲಾಗುತ್ತದೆ. ಹೀಗೆ ಮಣ್ಣಿನ ತರಗತಿ ಬದಲಾದಂತೆ ಕೃಷಿಯೂ ಬದಲಾಗುತ್ತದೆ. ಕೆಲವು ರಾಜ್ಯಗಳಲ್ಲಿ ಕೆಲವು ಬೆಳಗಳಿಗೆ ವಿಶೇಷವಾದ ಸ್ಥಾನ ಇದೆ. ಗುಣಮಟ್ಟದಲ್ಲೂ ವ್ಯತ್ಯಾಸ ಇರುತ್ತದೆ. ಕೊಡಗಿಗೆ ಹೋದರೆ ಕಾಫಿಯೇ ಸರ್ವಶ್ರೇಷ್ಟ. ದಕ್ಷಿಣ ಕನ್ನಡಕ್ಕೆ ಬಂದರೆ ಅಡಿಕೆ, ಕೇರಳಕ್ಕೆ ಹೋದರೆ ರಬ್ಬರ್‌ ಹೀಗೇ ಆಯಾ ಪ್ರದೇಶದಲ್ಲಿ ಅದರದ್ದೇ ಆದ ವಿಶೇಷ ಗುಣಗಳು ಇರುತ್ತದೆ. ದೇಶದ ಆರನೇ ಅತಿದೊಡ್ಡ ರಾಜ್ಯವಾಗಿರುವ  ಕರ್ನಾಟಕದ ಕೃಷಿಯೂ ಗಮನಾರ್ಹವಾಗಿ ಬೆಳೆದಿದೆ. ಅದರಲ್ಲಿ ಕೆಲವು ಬೆಳೆಗಳು ನಂಬರ್‌ ವನ್.‌ ಕಾಫಿ, ಅಡಿಕೆ, ರಾಗಿ, ರೇಷ್ಮೆ, ಸೂರ್ಯಕಾಂತಿ,  ಹಸಿರು ಮೆಣಸಿನಕಾಯಿ, ಕ್ಯಾಪ್ಸಿಕಂ, ಹುಣಸೆ ಕೃಷಿಯಲ್ಲಿ ನಂಬರ್‌ ವನ್‌ ಸ್ಥಾನದಲ್ಲಿದೆ. ಟೊಮೇಟೊ, ಸಪೋಟಾ, ತೆಂಗಿನಕಾಯಿ ದ್ವಿತೀಯ ಸ್ಥಾನದಲ್ಲಿ ಬೆಳೆಯುವ ಬೆಳೆ. ದಾಳಿಂಬೆ, ಅನಾನಸ್, ಪಪ್ಪಾಯಿ, ಈರುಳ್ಳಿ ತೃತೀಯ ಸ್ಥಾನದಲ್ಲಿ ಬೆಳೆಯುವ ಬೆಳೆಯಾಗಿದೆ.

Advertisement

ದೇಶದ ಕಾಫಿ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು 71%. ಈ ಪೈಕಿ ಕೊಡಗಿನಲ್ಲೇ 33% ಕಾಫಿ ಉತ್ಪಾದನೆಯಾಗುತ್ತದೆ. ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ನಂ.1 ಸ್ಥಾನ ಪಡೆದಿದೆ. ದೇಶದ ಒಟ್ಟು ಅಡಿಕೆ ಉತ್ಪಾದನೆಯ ಪೈಕಿ ಶೇ 40% ಅಡಿಕೆ ಉತ್ಪಾದನೆ ಕರ್ನಾಟಕದಲ್ಲಾಗುತ್ತದೆ. ದೇಶದ ರಾಗಿ ಉತ್ಪಾದನೆಯ ಪೈಕಿ 64.8% ಕರ್ನಾಟಕದಲ್ಲೇ ಬೆಳೆಯಲಾಗುತ್ತದೆ. ರೇಷ್ಮೆ ಉತ್ಪಾದನೆಯಲ್ಲಿ  ಪ್ರತಿ ವರ್ಷ 8,200 ಮೆಟ್ರಿಕ್ ಟನ್ ರೇಷ್ಮೆಯನ್ನು ಕರ್ನಾಟಕದಲ್ಲಿ ಉತ್ಪಾದನೆ ಮಾಡಲಾಗುತ್ತದೆ.  ರಾಜ್ಯದಲ್ಲಿ ಪ್ರತಿ ವರ್ಷ 3.04 ಲಕ್ಷ ಟನ್ ಸೂರ್ಯಕಾಂತಿ ಉತ್ಪಾದಿಸಲಾಗುತ್ತದೆ. ಕರ್ನಾಟಕದ ಬಳಿಕ ಆಂಧ್ರಪ್ರದೇಶ, ಮಹಾರಾಷ್ಟ್ರ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ದೇಶದ ತೆಂಗು ಉತ್ಪಾದನೆಯ ಪೈಕಿ ಕರ್ನಾಟಕದ ಪಾಲು 23% ಇದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

3 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

4 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

5 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

5 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

18 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

18 hours ago