Advertisement
ಸುದ್ದಿಗಳು

#Agriculture | ಕೃಷಿಯಲ್ಲಿ ಕರ್ನಾಟಕ ಹಲವು ಬೆಳೆಯಲ್ಲಿ ಮುಂದು | ಅಡಿಕೆ, ಕಾಫಿ, ರಾಗಿಯಲ್ಲಿ ಮುಂದಿದೆ ನಮ್ಮ ನಾಡು |

Share

ಕರ್ನಾಟಕ ರಾಜ್ಯವು ಕೃಷಿಯಲ್ಲೂ ಮುಂದಿದೆ. ಹಲವು ಬೆಳೆಗಳಲ್ಲಿ ರಾಜ್ಯವು ತನ್ನದೇ ಸ್ಥಾನವನ್ನು ಪಡೆದುಕೊಂಡಿದೆ. ಅದರಲ್ಲಿ ಕಾಫಿ, ಅಡಿಕೆ, ರಾಗಿ, ರೇಷ್ಮೆ, ಸೂರ್ಯಕಾಂತಿ,  ಹಸಿರು ಮೆಣಸಿನಕಾಯಿ, ಕ್ಯಾಪ್ಸಿಕಂ, ಹುಣಸೆ ಕೃಷಿಯಲ್ಲಿ ನಂಬರ್‌ ವನ್‌ ಸ್ಥಾನದಲ್ಲಿದೆ.

Advertisement

ಭಾರತಲ್ಲಿ ಸರಿಸುಮಾರು 50 ಕಿಲೋ ಮೀಟರಿಗೊಂದು ಮಣ್ಣಿನ ತರಗತಿ ಬದಲಾಗುತ್ತದೆ. ಹೀಗೆ ಮಣ್ಣಿನ ತರಗತಿ ಬದಲಾದಂತೆ ಕೃಷಿಯೂ ಬದಲಾಗುತ್ತದೆ. ಕೆಲವು ರಾಜ್ಯಗಳಲ್ಲಿ ಕೆಲವು ಬೆಳಗಳಿಗೆ ವಿಶೇಷವಾದ ಸ್ಥಾನ ಇದೆ. ಗುಣಮಟ್ಟದಲ್ಲೂ ವ್ಯತ್ಯಾಸ ಇರುತ್ತದೆ. ಕೊಡಗಿಗೆ ಹೋದರೆ ಕಾಫಿಯೇ ಸರ್ವಶ್ರೇಷ್ಟ. ದಕ್ಷಿಣ ಕನ್ನಡಕ್ಕೆ ಬಂದರೆ ಅಡಿಕೆ, ಕೇರಳಕ್ಕೆ ಹೋದರೆ ರಬ್ಬರ್‌ ಹೀಗೇ ಆಯಾ ಪ್ರದೇಶದಲ್ಲಿ ಅದರದ್ದೇ ಆದ ವಿಶೇಷ ಗುಣಗಳು ಇರುತ್ತದೆ. ದೇಶದ ಆರನೇ ಅತಿದೊಡ್ಡ ರಾಜ್ಯವಾಗಿರುವ  ಕರ್ನಾಟಕದ ಕೃಷಿಯೂ ಗಮನಾರ್ಹವಾಗಿ ಬೆಳೆದಿದೆ. ಅದರಲ್ಲಿ ಕೆಲವು ಬೆಳೆಗಳು ನಂಬರ್‌ ವನ್.‌ ಕಾಫಿ, ಅಡಿಕೆ, ರಾಗಿ, ರೇಷ್ಮೆ, ಸೂರ್ಯಕಾಂತಿ,  ಹಸಿರು ಮೆಣಸಿನಕಾಯಿ, ಕ್ಯಾಪ್ಸಿಕಂ, ಹುಣಸೆ ಕೃಷಿಯಲ್ಲಿ ನಂಬರ್‌ ವನ್‌ ಸ್ಥಾನದಲ್ಲಿದೆ. ಟೊಮೇಟೊ, ಸಪೋಟಾ, ತೆಂಗಿನಕಾಯಿ ದ್ವಿತೀಯ ಸ್ಥಾನದಲ್ಲಿ ಬೆಳೆಯುವ ಬೆಳೆ. ದಾಳಿಂಬೆ, ಅನಾನಸ್, ಪಪ್ಪಾಯಿ, ಈರುಳ್ಳಿ ತೃತೀಯ ಸ್ಥಾನದಲ್ಲಿ ಬೆಳೆಯುವ ಬೆಳೆಯಾಗಿದೆ.

ದೇಶದ ಕಾಫಿ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು 71%. ಈ ಪೈಕಿ ಕೊಡಗಿನಲ್ಲೇ 33% ಕಾಫಿ ಉತ್ಪಾದನೆಯಾಗುತ್ತದೆ. ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ನಂ.1 ಸ್ಥಾನ ಪಡೆದಿದೆ. ದೇಶದ ಒಟ್ಟು ಅಡಿಕೆ ಉತ್ಪಾದನೆಯ ಪೈಕಿ ಶೇ 40% ಅಡಿಕೆ ಉತ್ಪಾದನೆ ಕರ್ನಾಟಕದಲ್ಲಾಗುತ್ತದೆ. ದೇಶದ ರಾಗಿ ಉತ್ಪಾದನೆಯ ಪೈಕಿ 64.8% ಕರ್ನಾಟಕದಲ್ಲೇ ಬೆಳೆಯಲಾಗುತ್ತದೆ. ರೇಷ್ಮೆ ಉತ್ಪಾದನೆಯಲ್ಲಿ  ಪ್ರತಿ ವರ್ಷ 8,200 ಮೆಟ್ರಿಕ್ ಟನ್ ರೇಷ್ಮೆಯನ್ನು ಕರ್ನಾಟಕದಲ್ಲಿ ಉತ್ಪಾದನೆ ಮಾಡಲಾಗುತ್ತದೆ.  ರಾಜ್ಯದಲ್ಲಿ ಪ್ರತಿ ವರ್ಷ 3.04 ಲಕ್ಷ ಟನ್ ಸೂರ್ಯಕಾಂತಿ ಉತ್ಪಾದಿಸಲಾಗುತ್ತದೆ. ಕರ್ನಾಟಕದ ಬಳಿಕ ಆಂಧ್ರಪ್ರದೇಶ, ಮಹಾರಾಷ್ಟ್ರ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ದೇಶದ ತೆಂಗು ಉತ್ಪಾದನೆಯ ಪೈಕಿ ಕರ್ನಾಟಕದ ಪಾಲು 23% ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

3 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

18 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

18 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

18 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

18 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

19 hours ago