Advertisement
ಸುದ್ದಿಗಳು

#Agriculture | ಕೃಷಿಯಲ್ಲಿ ಕರ್ನಾಟಕ ಹಲವು ಬೆಳೆಯಲ್ಲಿ ಮುಂದು | ಅಡಿಕೆ, ಕಾಫಿ, ರಾಗಿಯಲ್ಲಿ ಮುಂದಿದೆ ನಮ್ಮ ನಾಡು |

Share

ಕರ್ನಾಟಕ ರಾಜ್ಯವು ಕೃಷಿಯಲ್ಲೂ ಮುಂದಿದೆ. ಹಲವು ಬೆಳೆಗಳಲ್ಲಿ ರಾಜ್ಯವು ತನ್ನದೇ ಸ್ಥಾನವನ್ನು ಪಡೆದುಕೊಂಡಿದೆ. ಅದರಲ್ಲಿ ಕಾಫಿ, ಅಡಿಕೆ, ರಾಗಿ, ರೇಷ್ಮೆ, ಸೂರ್ಯಕಾಂತಿ,  ಹಸಿರು ಮೆಣಸಿನಕಾಯಿ, ಕ್ಯಾಪ್ಸಿಕಂ, ಹುಣಸೆ ಕೃಷಿಯಲ್ಲಿ ನಂಬರ್‌ ವನ್‌ ಸ್ಥಾನದಲ್ಲಿದೆ.

ಭಾರತಲ್ಲಿ ಸರಿಸುಮಾರು 50 ಕಿಲೋ ಮೀಟರಿಗೊಂದು ಮಣ್ಣಿನ ತರಗತಿ ಬದಲಾಗುತ್ತದೆ. ಹೀಗೆ ಮಣ್ಣಿನ ತರಗತಿ ಬದಲಾದಂತೆ ಕೃಷಿಯೂ ಬದಲಾಗುತ್ತದೆ. ಕೆಲವು ರಾಜ್ಯಗಳಲ್ಲಿ ಕೆಲವು ಬೆಳಗಳಿಗೆ ವಿಶೇಷವಾದ ಸ್ಥಾನ ಇದೆ. ಗುಣಮಟ್ಟದಲ್ಲೂ ವ್ಯತ್ಯಾಸ ಇರುತ್ತದೆ. ಕೊಡಗಿಗೆ ಹೋದರೆ ಕಾಫಿಯೇ ಸರ್ವಶ್ರೇಷ್ಟ. ದಕ್ಷಿಣ ಕನ್ನಡಕ್ಕೆ ಬಂದರೆ ಅಡಿಕೆ, ಕೇರಳಕ್ಕೆ ಹೋದರೆ ರಬ್ಬರ್‌ ಹೀಗೇ ಆಯಾ ಪ್ರದೇಶದಲ್ಲಿ ಅದರದ್ದೇ ಆದ ವಿಶೇಷ ಗುಣಗಳು ಇರುತ್ತದೆ. ದೇಶದ ಆರನೇ ಅತಿದೊಡ್ಡ ರಾಜ್ಯವಾಗಿರುವ  ಕರ್ನಾಟಕದ ಕೃಷಿಯೂ ಗಮನಾರ್ಹವಾಗಿ ಬೆಳೆದಿದೆ. ಅದರಲ್ಲಿ ಕೆಲವು ಬೆಳೆಗಳು ನಂಬರ್‌ ವನ್.‌ ಕಾಫಿ, ಅಡಿಕೆ, ರಾಗಿ, ರೇಷ್ಮೆ, ಸೂರ್ಯಕಾಂತಿ,  ಹಸಿರು ಮೆಣಸಿನಕಾಯಿ, ಕ್ಯಾಪ್ಸಿಕಂ, ಹುಣಸೆ ಕೃಷಿಯಲ್ಲಿ ನಂಬರ್‌ ವನ್‌ ಸ್ಥಾನದಲ್ಲಿದೆ. ಟೊಮೇಟೊ, ಸಪೋಟಾ, ತೆಂಗಿನಕಾಯಿ ದ್ವಿತೀಯ ಸ್ಥಾನದಲ್ಲಿ ಬೆಳೆಯುವ ಬೆಳೆ. ದಾಳಿಂಬೆ, ಅನಾನಸ್, ಪಪ್ಪಾಯಿ, ಈರುಳ್ಳಿ ತೃತೀಯ ಸ್ಥಾನದಲ್ಲಿ ಬೆಳೆಯುವ ಬೆಳೆಯಾಗಿದೆ.

ದೇಶದ ಕಾಫಿ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು 71%. ಈ ಪೈಕಿ ಕೊಡಗಿನಲ್ಲೇ 33% ಕಾಫಿ ಉತ್ಪಾದನೆಯಾಗುತ್ತದೆ. ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ನಂ.1 ಸ್ಥಾನ ಪಡೆದಿದೆ. ದೇಶದ ಒಟ್ಟು ಅಡಿಕೆ ಉತ್ಪಾದನೆಯ ಪೈಕಿ ಶೇ 40% ಅಡಿಕೆ ಉತ್ಪಾದನೆ ಕರ್ನಾಟಕದಲ್ಲಾಗುತ್ತದೆ. ದೇಶದ ರಾಗಿ ಉತ್ಪಾದನೆಯ ಪೈಕಿ 64.8% ಕರ್ನಾಟಕದಲ್ಲೇ ಬೆಳೆಯಲಾಗುತ್ತದೆ. ರೇಷ್ಮೆ ಉತ್ಪಾದನೆಯಲ್ಲಿ  ಪ್ರತಿ ವರ್ಷ 8,200 ಮೆಟ್ರಿಕ್ ಟನ್ ರೇಷ್ಮೆಯನ್ನು ಕರ್ನಾಟಕದಲ್ಲಿ ಉತ್ಪಾದನೆ ಮಾಡಲಾಗುತ್ತದೆ.  ರಾಜ್ಯದಲ್ಲಿ ಪ್ರತಿ ವರ್ಷ 3.04 ಲಕ್ಷ ಟನ್ ಸೂರ್ಯಕಾಂತಿ ಉತ್ಪಾದಿಸಲಾಗುತ್ತದೆ. ಕರ್ನಾಟಕದ ಬಳಿಕ ಆಂಧ್ರಪ್ರದೇಶ, ಮಹಾರಾಷ್ಟ್ರ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ದೇಶದ ತೆಂಗು ಉತ್ಪಾದನೆಯ ಪೈಕಿ ಕರ್ನಾಟಕದ ಪಾಲು 23% ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

3 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

8 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

19 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

24 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago