Advertisement
ಸುದ್ದಿಗಳು

#Agriculture | ಕೃಷಿಯಲ್ಲಿ ಕರ್ನಾಟಕ ಹಲವು ಬೆಳೆಯಲ್ಲಿ ಮುಂದು | ಅಡಿಕೆ, ಕಾಫಿ, ರಾಗಿಯಲ್ಲಿ ಮುಂದಿದೆ ನಮ್ಮ ನಾಡು |

Share

ಕರ್ನಾಟಕ ರಾಜ್ಯವು ಕೃಷಿಯಲ್ಲೂ ಮುಂದಿದೆ. ಹಲವು ಬೆಳೆಗಳಲ್ಲಿ ರಾಜ್ಯವು ತನ್ನದೇ ಸ್ಥಾನವನ್ನು ಪಡೆದುಕೊಂಡಿದೆ. ಅದರಲ್ಲಿ ಕಾಫಿ, ಅಡಿಕೆ, ರಾಗಿ, ರೇಷ್ಮೆ, ಸೂರ್ಯಕಾಂತಿ,  ಹಸಿರು ಮೆಣಸಿನಕಾಯಿ, ಕ್ಯಾಪ್ಸಿಕಂ, ಹುಣಸೆ ಕೃಷಿಯಲ್ಲಿ ನಂಬರ್‌ ವನ್‌ ಸ್ಥಾನದಲ್ಲಿದೆ.

ಭಾರತಲ್ಲಿ ಸರಿಸುಮಾರು 50 ಕಿಲೋ ಮೀಟರಿಗೊಂದು ಮಣ್ಣಿನ ತರಗತಿ ಬದಲಾಗುತ್ತದೆ. ಹೀಗೆ ಮಣ್ಣಿನ ತರಗತಿ ಬದಲಾದಂತೆ ಕೃಷಿಯೂ ಬದಲಾಗುತ್ತದೆ. ಕೆಲವು ರಾಜ್ಯಗಳಲ್ಲಿ ಕೆಲವು ಬೆಳಗಳಿಗೆ ವಿಶೇಷವಾದ ಸ್ಥಾನ ಇದೆ. ಗುಣಮಟ್ಟದಲ್ಲೂ ವ್ಯತ್ಯಾಸ ಇರುತ್ತದೆ. ಕೊಡಗಿಗೆ ಹೋದರೆ ಕಾಫಿಯೇ ಸರ್ವಶ್ರೇಷ್ಟ. ದಕ್ಷಿಣ ಕನ್ನಡಕ್ಕೆ ಬಂದರೆ ಅಡಿಕೆ, ಕೇರಳಕ್ಕೆ ಹೋದರೆ ರಬ್ಬರ್‌ ಹೀಗೇ ಆಯಾ ಪ್ರದೇಶದಲ್ಲಿ ಅದರದ್ದೇ ಆದ ವಿಶೇಷ ಗುಣಗಳು ಇರುತ್ತದೆ. ದೇಶದ ಆರನೇ ಅತಿದೊಡ್ಡ ರಾಜ್ಯವಾಗಿರುವ  ಕರ್ನಾಟಕದ ಕೃಷಿಯೂ ಗಮನಾರ್ಹವಾಗಿ ಬೆಳೆದಿದೆ. ಅದರಲ್ಲಿ ಕೆಲವು ಬೆಳೆಗಳು ನಂಬರ್‌ ವನ್.‌ ಕಾಫಿ, ಅಡಿಕೆ, ರಾಗಿ, ರೇಷ್ಮೆ, ಸೂರ್ಯಕಾಂತಿ,  ಹಸಿರು ಮೆಣಸಿನಕಾಯಿ, ಕ್ಯಾಪ್ಸಿಕಂ, ಹುಣಸೆ ಕೃಷಿಯಲ್ಲಿ ನಂಬರ್‌ ವನ್‌ ಸ್ಥಾನದಲ್ಲಿದೆ. ಟೊಮೇಟೊ, ಸಪೋಟಾ, ತೆಂಗಿನಕಾಯಿ ದ್ವಿತೀಯ ಸ್ಥಾನದಲ್ಲಿ ಬೆಳೆಯುವ ಬೆಳೆ. ದಾಳಿಂಬೆ, ಅನಾನಸ್, ಪಪ್ಪಾಯಿ, ಈರುಳ್ಳಿ ತೃತೀಯ ಸ್ಥಾನದಲ್ಲಿ ಬೆಳೆಯುವ ಬೆಳೆಯಾಗಿದೆ.

ದೇಶದ ಕಾಫಿ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು 71%. ಈ ಪೈಕಿ ಕೊಡಗಿನಲ್ಲೇ 33% ಕಾಫಿ ಉತ್ಪಾದನೆಯಾಗುತ್ತದೆ. ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ನಂ.1 ಸ್ಥಾನ ಪಡೆದಿದೆ. ದೇಶದ ಒಟ್ಟು ಅಡಿಕೆ ಉತ್ಪಾದನೆಯ ಪೈಕಿ ಶೇ 40% ಅಡಿಕೆ ಉತ್ಪಾದನೆ ಕರ್ನಾಟಕದಲ್ಲಾಗುತ್ತದೆ. ದೇಶದ ರಾಗಿ ಉತ್ಪಾದನೆಯ ಪೈಕಿ 64.8% ಕರ್ನಾಟಕದಲ್ಲೇ ಬೆಳೆಯಲಾಗುತ್ತದೆ. ರೇಷ್ಮೆ ಉತ್ಪಾದನೆಯಲ್ಲಿ  ಪ್ರತಿ ವರ್ಷ 8,200 ಮೆಟ್ರಿಕ್ ಟನ್ ರೇಷ್ಮೆಯನ್ನು ಕರ್ನಾಟಕದಲ್ಲಿ ಉತ್ಪಾದನೆ ಮಾಡಲಾಗುತ್ತದೆ.  ರಾಜ್ಯದಲ್ಲಿ ಪ್ರತಿ ವರ್ಷ 3.04 ಲಕ್ಷ ಟನ್ ಸೂರ್ಯಕಾಂತಿ ಉತ್ಪಾದಿಸಲಾಗುತ್ತದೆ. ಕರ್ನಾಟಕದ ಬಳಿಕ ಆಂಧ್ರಪ್ರದೇಶ, ಮಹಾರಾಷ್ಟ್ರ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ದೇಶದ ತೆಂಗು ಉತ್ಪಾದನೆಯ ಪೈಕಿ ಕರ್ನಾಟಕದ ಪಾಲು 23% ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

4 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago