ಮಂಜಿನ ಕಾರಣದಿಂದ ಬಾಡುತ್ತಿರುವ ಈರುಳ್ಳಿ ಬೀಜದ ಹೂ: ಕಂಗಾಲಾದ ರೈತರು

February 9, 2022
9:00 AM

ಹಚ್ಚಹಸುರಾಗಿ ಬಂದ ಈರುಳ್ಳಿ ಬೀಜದ ಹೂ, ಇನ್ನೇನು ಒಳ್ಳೆಯ ಬೀಜ ದೊರೆಯುತ್ತವೆ ಎನ್ನುವ ಸಮಯದಲ್ಲಿ ಆವರಿಸಿದ ಮಂಜಿನಿಂದ ಈರುಳ್ಳಿ ಹೂ ಹೂವು ಬಾಡುತ್ತಿದೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಗೆಡ್ಡೆ ಹೂ ಬಿಡಲಿದ್ದು, ಏಪ್ರಿಲ್‌ನಲ್ಲಿ ಬೀಜ ಪಡೆದು, ಹಸನು ಮಾಡಲಾಗುತ್ತದೆ. ಮುಂಗಾರು ಶುರುವಾಗುವ ಸಮಯ ಮೇ ಅಥವಾ ಜೂನ್ ತಿಂಗಳಲ್ಲಿ ಈರುಳ್ಳಿ ಬೀಜಗಳನ್ನು ಮಾರಾಟ ಮಾಡಲಾಗುತ್ತದೆ ಎನ್ನುತ್ತಾರೆ ಪ್ರಕಾಶ್ ಎಚ್.

ಕಳೆದ ಹಂಗಾಮಿನಲ್ಲಿ ಈರುಳ್ಳಿಗೆ ಬೇಡಿಕೆ ಬಂದು ಉತ್ತಮ ಬೆಲೆಗೆ ಮಾರಾಟವಾಗಿದ್ದು, ಈ ವರ್ಷವೂ ಈರುಳ್ಳಿಗೆ ಉತ್ತಮ ಧಾರಣೆ ಸಿಗುವ ಆಶಾಭಾವನೆ ರೈತರಿಗಿದೆ. ಹೀಗಾಗಿ ಈರುಳ್ಳಿ ಬೆಳೆಯಲು ರೈತರು ಮುಂದಾಗಿರುವುದರಿಂದ ಈರುಳ್ಳಿ ಬೀಜಕ್ಕೆ ಭಾರಿ ಬೇಡಿಕೆ ಬರುವ ನಿರೀಕ್ಷೆ ಇದೆ. ಇದರಿಂದ ನಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಕ್ಕಿ ನೆಮ್ಮದಿಯಿಂದ ಜೀವನ ಸಾಗಿಸಬಹುದು ಎನ್ನುತ್ತಾರೆ ಕಬ್ಬಿನಕೆರೆ ರೈತ ಕಾಂತರಾಜು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror