ಹಚ್ಚಹಸುರಾಗಿ ಬಂದ ಈರುಳ್ಳಿ ಬೀಜದ ಹೂ, ಇನ್ನೇನು ಒಳ್ಳೆಯ ಬೀಜ ದೊರೆಯುತ್ತವೆ ಎನ್ನುವ ಸಮಯದಲ್ಲಿ ಆವರಿಸಿದ ಮಂಜಿನಿಂದ ಈರುಳ್ಳಿ ಹೂ ಹೂವು ಬಾಡುತ್ತಿದೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಗೆಡ್ಡೆ ಹೂ ಬಿಡಲಿದ್ದು, ಏಪ್ರಿಲ್ನಲ್ಲಿ ಬೀಜ ಪಡೆದು, ಹಸನು ಮಾಡಲಾಗುತ್ತದೆ. ಮುಂಗಾರು ಶುರುವಾಗುವ ಸಮಯ ಮೇ ಅಥವಾ ಜೂನ್ ತಿಂಗಳಲ್ಲಿ ಈರುಳ್ಳಿ ಬೀಜಗಳನ್ನು ಮಾರಾಟ ಮಾಡಲಾಗುತ್ತದೆ ಎನ್ನುತ್ತಾರೆ ಪ್ರಕಾಶ್ ಎಚ್.
ಕಳೆದ ಹಂಗಾಮಿನಲ್ಲಿ ಈರುಳ್ಳಿಗೆ ಬೇಡಿಕೆ ಬಂದು ಉತ್ತಮ ಬೆಲೆಗೆ ಮಾರಾಟವಾಗಿದ್ದು, ಈ ವರ್ಷವೂ ಈರುಳ್ಳಿಗೆ ಉತ್ತಮ ಧಾರಣೆ ಸಿಗುವ ಆಶಾಭಾವನೆ ರೈತರಿಗಿದೆ. ಹೀಗಾಗಿ ಈರುಳ್ಳಿ ಬೆಳೆಯಲು ರೈತರು ಮುಂದಾಗಿರುವುದರಿಂದ ಈರುಳ್ಳಿ ಬೀಜಕ್ಕೆ ಭಾರಿ ಬೇಡಿಕೆ ಬರುವ ನಿರೀಕ್ಷೆ ಇದೆ. ಇದರಿಂದ ನಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಕ್ಕಿ ನೆಮ್ಮದಿಯಿಂದ ಜೀವನ ಸಾಗಿಸಬಹುದು ಎನ್ನುತ್ತಾರೆ ಕಬ್ಬಿನಕೆರೆ ರೈತ ಕಾಂತರಾಜು.
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…
ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…