ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಹರಳಕುಂಟೆ ಗ್ರಾಮದ ಶಶಿಕುಮಾರ್ ಹಾಗೂ ಶಿವಕುಮಾರ್ ಇಬ್ಬರು ವಿದೇಶದ ಕಂಪೆನಿಯೊಂದರಲ್ಲಿ ಕೈತುಂಬಾ ಸಂಬಳದ ಕೆಲಸ ಮಾಡುತ್ತಿದ್ದರೂ, ಕೃಷಿ ಮೇಲಿನ ಪ್ರೀತಿಯಿಂದ ಕೆಲಸವನ್ನು ಬಿಟ್ಟು ತಮ್ಮೂರಿಗೆ ಬಂದು ಸಾವಯವ ಕೃಷಿಯಲ್ಲಿ ಯಶಸ್ಸನ್ನು ಕಂಡಿದ್ದಾರೆ.
ಪಿತ್ರಾರ್ಜಿತವಾಗಿ ಬಂದಿದ್ದ ಏಳು ಎಕರೆ ಭೂಮಿಯಲ್ಲಿ ಕೃಷಿ ಮಾಡಲು ಆರಂಭಿಸಿದರು. ಆದರೆ ಮೊದಲಿಗೆ ರಾಸಾಯನಿಕ ಕೃಷಿ ಮಾಡಿದರೂ ಅವರು ಅಂದುಕೊಂಡಷ್ಟು ಆದಾಯವೂ ಸಿಗಲಿಲ್ಲ. ತೃಪ್ತಿಯೂ ಸಿಗಲಿಲ್ಲ. ತದನಂತರ ಸಾವಯವ ಕೃಷಿಯ ಜೊತೆಗೆ ಸಾವಯವ ಕೃಷಿಗೆ ಬೇಕಾದ ದೇಸಿ ಹಸುಗಳ ಸಗಣಿ, ಗಂಜಲಕ್ಕಾಗಿ ತಮ್ಮದೇ ಜಮೀನಿನಲ್ಲಿ ಗೋಶಾಲೆ ಆರಂಭಿಸಿ ದೇಸೀ ಘೀರ್ ತಳಿ ಹಸುಗಳನ್ನು ಸಾಕುತ್ತಾ, ಅವುಗಳಿಂದ ಉತ್ಪತ್ತಿಯಾಗುವ ಗಂಜಲ ಹಾಗೂ ಸಗಣಿಯಿಂದ ಜೀವಾಮೃತ, ಗೋಕೃಪಾಂಮೃತ ತಯಾರು ಮಾಡಿಕೊಂಡು ಬೆಳೆಗಳಿಗೆ ಸಿಂಪಡಿಸಿದ್ದಾರೆ.
ಇಡೀ ಭೂಮಿಗೆ ಒಂಚೂರು ರಾಸಾಯನಿಕ ಹಾಗೂ ಕೀಟನಾಶಕಗಳನ್ನು ಬಳಸದೆ ಸಂಪೂರ್ಣ ಸಾವಯವ ಕೃಷಿ ಆರಂಭಿಸಿದ್ದಾರೆ. ಮೊದಲು ಸ್ವೀಟ್ ಕಾರ್ನ್ ಬೆಳೆ ಬೆಳೆದು, ನಂತರ ಕುಂಬಳಕಾಯಿ ಬೆಳೆದು, ಈಗ ಏಲಕ್ಕಿ ಹಾಗೂ ಜಿ9 ತಳಿಯ ಚುಕ್ಕೆ ಬಾಳೆಹಣ್ಣು ಬೆಳೆದಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಸಾವಯವ ವಿಧಾನದಲ್ಲಿ ಬೆಳೆಯಲಾದ ಬಾಳೆ ಹಣ್ಣಿಗೆ ಹೆಚ್ಚಿನ ಬೇಡಿಕೆ ಇದ್ದು, ಒಳ್ಳೆಯ ಆದಾಯ ಕೂಡ ದೊರೆತಿದೆ. ಸದ್ಯ ಈ ಸಹೋದರರು ಯುವ ಕೃಷಿಕರಿಗೆ ಮಾದರಿಯಾಗಿದ್ದಾರೆ.
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…
ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…