ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಹರಳಕುಂಟೆ ಗ್ರಾಮದ ಶಶಿಕುಮಾರ್ ಹಾಗೂ ಶಿವಕುಮಾರ್ ಇಬ್ಬರು ವಿದೇಶದ ಕಂಪೆನಿಯೊಂದರಲ್ಲಿ ಕೈತುಂಬಾ ಸಂಬಳದ ಕೆಲಸ ಮಾಡುತ್ತಿದ್ದರೂ, ಕೃಷಿ ಮೇಲಿನ ಪ್ರೀತಿಯಿಂದ ಕೆಲಸವನ್ನು ಬಿಟ್ಟು ತಮ್ಮೂರಿಗೆ ಬಂದು ಸಾವಯವ ಕೃಷಿಯಲ್ಲಿ ಯಶಸ್ಸನ್ನು ಕಂಡಿದ್ದಾರೆ.
ಪಿತ್ರಾರ್ಜಿತವಾಗಿ ಬಂದಿದ್ದ ಏಳು ಎಕರೆ ಭೂಮಿಯಲ್ಲಿ ಕೃಷಿ ಮಾಡಲು ಆರಂಭಿಸಿದರು. ಆದರೆ ಮೊದಲಿಗೆ ರಾಸಾಯನಿಕ ಕೃಷಿ ಮಾಡಿದರೂ ಅವರು ಅಂದುಕೊಂಡಷ್ಟು ಆದಾಯವೂ ಸಿಗಲಿಲ್ಲ. ತೃಪ್ತಿಯೂ ಸಿಗಲಿಲ್ಲ. ತದನಂತರ ಸಾವಯವ ಕೃಷಿಯ ಜೊತೆಗೆ ಸಾವಯವ ಕೃಷಿಗೆ ಬೇಕಾದ ದೇಸಿ ಹಸುಗಳ ಸಗಣಿ, ಗಂಜಲಕ್ಕಾಗಿ ತಮ್ಮದೇ ಜಮೀನಿನಲ್ಲಿ ಗೋಶಾಲೆ ಆರಂಭಿಸಿ ದೇಸೀ ಘೀರ್ ತಳಿ ಹಸುಗಳನ್ನು ಸಾಕುತ್ತಾ, ಅವುಗಳಿಂದ ಉತ್ಪತ್ತಿಯಾಗುವ ಗಂಜಲ ಹಾಗೂ ಸಗಣಿಯಿಂದ ಜೀವಾಮೃತ, ಗೋಕೃಪಾಂಮೃತ ತಯಾರು ಮಾಡಿಕೊಂಡು ಬೆಳೆಗಳಿಗೆ ಸಿಂಪಡಿಸಿದ್ದಾರೆ.
ಇಡೀ ಭೂಮಿಗೆ ಒಂಚೂರು ರಾಸಾಯನಿಕ ಹಾಗೂ ಕೀಟನಾಶಕಗಳನ್ನು ಬಳಸದೆ ಸಂಪೂರ್ಣ ಸಾವಯವ ಕೃಷಿ ಆರಂಭಿಸಿದ್ದಾರೆ. ಮೊದಲು ಸ್ವೀಟ್ ಕಾರ್ನ್ ಬೆಳೆ ಬೆಳೆದು, ನಂತರ ಕುಂಬಳಕಾಯಿ ಬೆಳೆದು, ಈಗ ಏಲಕ್ಕಿ ಹಾಗೂ ಜಿ9 ತಳಿಯ ಚುಕ್ಕೆ ಬಾಳೆಹಣ್ಣು ಬೆಳೆದಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಸಾವಯವ ವಿಧಾನದಲ್ಲಿ ಬೆಳೆಯಲಾದ ಬಾಳೆ ಹಣ್ಣಿಗೆ ಹೆಚ್ಚಿನ ಬೇಡಿಕೆ ಇದ್ದು, ಒಳ್ಳೆಯ ಆದಾಯ ಕೂಡ ದೊರೆತಿದೆ. ಸದ್ಯ ಈ ಸಹೋದರರು ಯುವ ಕೃಷಿಕರಿಗೆ ಮಾದರಿಯಾಗಿದ್ದಾರೆ.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…