Advertisement
ಕೃಷಿ

ವಿದೇಶದಿಂದ ಊರಿಗೆ ಬಂದು ಸಾವಯವ ಕೃಷಿಯಲ್ಲಿ ಯಶಸ್ವಿ ಕಂಡ ಸಹೋದರರು

Share

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಹರಳಕುಂಟೆ ಗ್ರಾಮದ ಶಶಿಕುಮಾರ್ ಹಾಗೂ ಶಿವಕುಮಾರ್ ಇಬ್ಬರು ವಿದೇಶದ ಕಂಪೆನಿಯೊಂದರಲ್ಲಿ ಕೈತುಂಬಾ ಸಂಬಳದ ಕೆಲಸ ಮಾಡುತ್ತಿದ್ದರೂ, ಕೃಷಿ ಮೇಲಿನ ಪ್ರೀತಿಯಿಂದ ಕೆಲಸವನ್ನು ಬಿಟ್ಟು ತಮ್ಮೂರಿಗೆ ಬಂದು ಸಾವಯವ ಕೃಷಿಯಲ್ಲಿ ಯಶಸ್ಸನ್ನು ಕಂಡಿದ್ದಾರೆ.

Advertisement
Advertisement

ಪಿತ್ರಾರ್ಜಿತವಾಗಿ ಬಂದಿದ್ದ ಏಳು ಎಕರೆ ಭೂಮಿಯಲ್ಲಿ ಕೃಷಿ ಮಾಡಲು ಆರಂಭಿಸಿದರು. ಆದರೆ ಮೊದಲಿಗೆ ರಾಸಾಯನಿಕ ಕೃಷಿ ಮಾಡಿದರೂ ಅವರು ಅಂದುಕೊಂಡಷ್ಟು ಆದಾಯವೂ ಸಿಗಲಿಲ್ಲ. ತೃಪ್ತಿಯೂ ಸಿಗಲಿಲ್ಲ. ತದನಂತರ ಸಾವಯವ ಕೃಷಿಯ ಜೊತೆಗೆ ಸಾವಯವ ಕೃಷಿಗೆ ಬೇಕಾದ ದೇಸಿ ಹಸುಗಳ ಸಗಣಿ, ಗಂಜಲಕ್ಕಾಗಿ ತಮ್ಮದೇ ಜಮೀನಿನಲ್ಲಿ ಗೋಶಾಲೆ ಆರಂಭಿಸಿ ದೇಸೀ ಘೀರ್ ತಳಿ ಹಸುಗಳನ್ನು ಸಾಕುತ್ತಾ, ಅವುಗಳಿಂದ ಉತ್ಪತ್ತಿಯಾಗುವ ಗಂಜಲ ಹಾಗೂ ಸಗಣಿಯಿಂದ ಜೀವಾಮೃತ, ಗೋಕೃಪಾಂಮೃತ ತಯಾರು ಮಾಡಿಕೊಂಡು ಬೆಳೆಗಳಿಗೆ ಸಿಂಪಡಿಸಿದ್ದಾರೆ.

Advertisement

ಇಡೀ ಭೂಮಿಗೆ ಒಂಚೂರು ರಾಸಾಯನಿಕ ಹಾಗೂ ಕೀಟನಾಶಕಗಳನ್ನು ಬಳಸದೆ ಸಂಪೂರ್ಣ ಸಾವಯವ ಕೃಷಿ ಆರಂಭಿಸಿದ್ದಾರೆ. ಮೊದಲು ಸ್ವೀಟ್ ಕಾರ್ನ್ ಬೆಳೆ ಬೆಳೆದು, ನಂತರ ಕುಂಬಳಕಾಯಿ ಬೆಳೆದು, ಈಗ ಏಲಕ್ಕಿ ಹಾಗೂ ಜಿ9 ತಳಿಯ ಚುಕ್ಕೆ ಬಾಳೆಹಣ್ಣು ಬೆಳೆದಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಸಾವಯವ ವಿಧಾನದಲ್ಲಿ ಬೆಳೆಯಲಾದ ಬಾಳೆ ಹಣ್ಣಿಗೆ ಹೆಚ್ಚಿನ ಬೇಡಿಕೆ ಇದ್ದು, ಒಳ್ಳೆಯ ಆದಾಯ ಕೂಡ ದೊರೆತಿದೆ. ಸದ್ಯ ಈ ಸಹೋದರರು ಯುವ ಕೃಷಿಕರಿಗೆ ಮಾದರಿಯಾಗಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ! ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

52 mins ago

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

1 hour ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

2 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

2 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

2 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

4 hours ago