Advertisement
ಕೃಷಿ

ವಿದೇಶದಿಂದ ಊರಿಗೆ ಬಂದು ಸಾವಯವ ಕೃಷಿಯಲ್ಲಿ ಯಶಸ್ವಿ ಕಂಡ ಸಹೋದರರು

Share

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಹರಳಕುಂಟೆ ಗ್ರಾಮದ ಶಶಿಕುಮಾರ್ ಹಾಗೂ ಶಿವಕುಮಾರ್ ಇಬ್ಬರು ವಿದೇಶದ ಕಂಪೆನಿಯೊಂದರಲ್ಲಿ ಕೈತುಂಬಾ ಸಂಬಳದ ಕೆಲಸ ಮಾಡುತ್ತಿದ್ದರೂ, ಕೃಷಿ ಮೇಲಿನ ಪ್ರೀತಿಯಿಂದ ಕೆಲಸವನ್ನು ಬಿಟ್ಟು ತಮ್ಮೂರಿಗೆ ಬಂದು ಸಾವಯವ ಕೃಷಿಯಲ್ಲಿ ಯಶಸ್ಸನ್ನು ಕಂಡಿದ್ದಾರೆ.

ಪಿತ್ರಾರ್ಜಿತವಾಗಿ ಬಂದಿದ್ದ ಏಳು ಎಕರೆ ಭೂಮಿಯಲ್ಲಿ ಕೃಷಿ ಮಾಡಲು ಆರಂಭಿಸಿದರು. ಆದರೆ ಮೊದಲಿಗೆ ರಾಸಾಯನಿಕ ಕೃಷಿ ಮಾಡಿದರೂ ಅವರು ಅಂದುಕೊಂಡಷ್ಟು ಆದಾಯವೂ ಸಿಗಲಿಲ್ಲ. ತೃಪ್ತಿಯೂ ಸಿಗಲಿಲ್ಲ. ತದನಂತರ ಸಾವಯವ ಕೃಷಿಯ ಜೊತೆಗೆ ಸಾವಯವ ಕೃಷಿಗೆ ಬೇಕಾದ ದೇಸಿ ಹಸುಗಳ ಸಗಣಿ, ಗಂಜಲಕ್ಕಾಗಿ ತಮ್ಮದೇ ಜಮೀನಿನಲ್ಲಿ ಗೋಶಾಲೆ ಆರಂಭಿಸಿ ದೇಸೀ ಘೀರ್ ತಳಿ ಹಸುಗಳನ್ನು ಸಾಕುತ್ತಾ, ಅವುಗಳಿಂದ ಉತ್ಪತ್ತಿಯಾಗುವ ಗಂಜಲ ಹಾಗೂ ಸಗಣಿಯಿಂದ ಜೀವಾಮೃತ, ಗೋಕೃಪಾಂಮೃತ ತಯಾರು ಮಾಡಿಕೊಂಡು ಬೆಳೆಗಳಿಗೆ ಸಿಂಪಡಿಸಿದ್ದಾರೆ.

ಇಡೀ ಭೂಮಿಗೆ ಒಂಚೂರು ರಾಸಾಯನಿಕ ಹಾಗೂ ಕೀಟನಾಶಕಗಳನ್ನು ಬಳಸದೆ ಸಂಪೂರ್ಣ ಸಾವಯವ ಕೃಷಿ ಆರಂಭಿಸಿದ್ದಾರೆ. ಮೊದಲು ಸ್ವೀಟ್ ಕಾರ್ನ್ ಬೆಳೆ ಬೆಳೆದು, ನಂತರ ಕುಂಬಳಕಾಯಿ ಬೆಳೆದು, ಈಗ ಏಲಕ್ಕಿ ಹಾಗೂ ಜಿ9 ತಳಿಯ ಚುಕ್ಕೆ ಬಾಳೆಹಣ್ಣು ಬೆಳೆದಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಸಾವಯವ ವಿಧಾನದಲ್ಲಿ ಬೆಳೆಯಲಾದ ಬಾಳೆ ಹಣ್ಣಿಗೆ ಹೆಚ್ಚಿನ ಬೇಡಿಕೆ ಇದ್ದು, ಒಳ್ಳೆಯ ಆದಾಯ ಕೂಡ ದೊರೆತಿದೆ. ಸದ್ಯ ಈ ಸಹೋದರರು ಯುವ ಕೃಷಿಕರಿಗೆ ಮಾದರಿಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

6 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

7 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

8 hours ago

ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ

ಇಥೆನಾಲ್‌ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…

8 hours ago

ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ

ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…

8 hours ago

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

22 hours ago